ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ಇದುವರೆಗೂ ನಡೆದ ಹೋರಾಟಗಳಿಗೆ ಸಕಾ೯ರ ನೀಡಿದ ಭರವಸೆಗಳು ವರ್ಷಗಳುರುಳಿದರೂ ಅನುಷ್ಠಾನಗೊಳ್ಳದೆ ಕೇವಲ ಭರವಸೆಗಳಾಗಿಯೆ ಉಳಿದಿರುವ ಹಿನ್ನಲೆಯಲ್ಲಿ ಶಾಶ್ವತ ಕುಡಿಯುವ ನೀರು ಹೋರಾಟ ಒಕ್ಕೂಟದ ವತಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಾಗೂ ಮುಖ್ಯಮಂತ್ರಿಗಳ ಮನೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಈ ಹಿನ್ನಲೆಯಲ್ಲಿ ಇದೇ 29 ರ ಭಾನುವಾರ ಮದ್ಯಾಹ್ನ 2 ಗಂಟೆಗೆ ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಹಿಂದೆ ನಡೆದ ಧರಣಿ ಸಂದರ್ಭದಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡಿದ ಎಲ್ಲಾ ಸಂಘ ಸಂಸ್ಥೆಗಳು,ಹಾಗೂ ತಾಲ್ಲೂಕಿನ ಹೋರಾಟಗಾರರು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಗಾಣಧಾಳ್ ವೀರಭದ್ರಪ್ಪ ಅಥವಾ ಕೆಂಕೆರೆ ಸತೀಶ್ ಅವರನ್ನು ಸಂಪಕಿ೯ಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.