ವಿಷಯಕ್ಕೆ ಹೋಗಿ

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣ

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಪ್ರಕರಣ
--------------------------------------------
ಡಿಎಸ್ಎಸ್ ನಿಂದ ಇಂದು(ಆ.26 ರಂದು) ಪ್ರತಿಭಟನೆ:
---------------------------------------
ಹುಳಿಯಾರು: ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿದ್ದ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊವನ್ನು ಕಿಡಿಗೇಡಿಗಳು ಅಲ್ಲಿನ ಶೌಚಾಲಯದಲ್ಲಿಟ್ಟು ಅಪಮಾನ ಮಾಡಿರುವುದಕ್ಕೆ ಸಂಭಂದಿಸಿದಂತೆ ಕನಾ೯ಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕಿನ ಎಲ್ಲಾ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಆ.26 ರ ಗುರುವಾರದಂದು ಹುಳಿಯಾರಿನಲ್ಲಿ ಧರಣಿ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
ಕೇವಲ ಒಂದು ಜಾತಿಗೆ ಸೀಮಿತವಾಗಿರದ ಅಂಬೇಡ್ಕರ್ ಅವರು ಶೋಷಿತ ವರ್ಗಗಳ ಆಶಾಕಿರಣವಾಗಿದ್ದರು. ಇಂತಹ ಮೇರು ವ್ಯಕ್ತಿಯ ಭಾವಚಿತ್ರವನ್ನು ಶೌಚಾಲಯದಲ್ಲಿಟ್ಟು ಅವಮಾನ ಮಾಡಿರುವುದು ಘೋರ ಅಪರಾಧವಾಗಿದ್ದು ತಾಲೂಕಿನ ಎಲ್ಲಾ ದಲಿತ ಸಂಘಟನೆಗಳು ಈ ಕೃತ್ಯವನ್ನು ಉಗ್ರವಾಗಿ ಖಂಡಿಸಿ ಸಲುವಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ಕರೆ ನೀಡಿರುವುದಾಗಿ ದಲಿತ ಮುಖಂಡರು ತಿಳಿಸಿದ್ದಾರೆ.

ಒತ್ತಾಯ: ಸಂವಿಧಾನ ರಚಿಸಿದ ರಾಷ್ಟ್ರನಾಯಕನನ್ನು ಶೌಚಾಲಯದಲ್ಲಿ ಇಟ್ಟು ಅಕ್ಷಮ್ಯ ಅಪರಾಧ ಎಸಗಿರುವ ದುರುಳರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅಂಬೇಡ್ಕರ್ ಭವನ ಉಸ್ತುವಾರಿ ಹೊತ್ತಿರುವ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ತಕ್ಷಣ ಅಮಾನತುಗೊಳಿಸಿ ತನಿಖೆ ನಡೆಸಬೇಕು. ಭವನವನ್ನು ಮರು ನವೀಕರಿಸಿ ಅಂಬೇಡ್ಕರ್ ಪುತ್ಥಳಿಯನ್ನು ನಿಮಾ೯ಣ ಮಾಡಬೇಕು ಹಾಗೂ ತಾಲೂಕಿನ ಎಲ್ಲಾ ಅಂಬೇಡ್ಕರ್ ಭವನಗಳಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಲಾಗಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಅಂಬೇಡ್ಕರ್ ಭವನದಿಂದ ಹೊರಡುವ ಪ್ರತಿಭಟನಾ ಮೆರವಣಿಗೆಗೆ ಅಂಬೇಡ್ಕರ್ ಅಭಿಮಾನಿಗಳು, ದಲಿತ ಬಂಧುಗಳು, ಪ್ರಗತಿಪರ ಚಿಂತಕರು, ರೈತ ಬಂಧುಗಳು, ಸ್ತ್ರಿಶಕ್ತಿ-ಸ್ವಸಹಾಯ ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ತಾಲೂಕಿನ ದಲಿತ ಸಂಘಟನೆಗಳ ಮುಖ್ಯಸ್ಥರು ಕೋರಿದ್ದಾರೆ.
ಪ್ರತಿಭಟನೆ ಕೈಬಿಡಲು ತಹಸೀಲ್ದಾರ್ ಮನವಿ
------------------------------------------------
ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಪೋಟೊವನ್ನು ಶೌಚಾಲಯಕ್ಕೆ ಹಾಕಿರುವ ಘಟನೆಯನ್ನು ತಾಲೂಕು ಆಡಳಿತ ಖಂಡಿಸಿದ್ದು ಈ ವಿಚಾರದಲ್ಲಿ ತಾಲೂಕು ಆಡಳಿತದ ವೈಪಲ್ಯ ಇಲ್ಲ. ಅಲ್ಲದೆ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದ್ದು ಗುರುವಾರ ಹುಳಿಯಾರಿನಲ್ಲಿ ಕರೆದಿರುವ ಪ್ರತಿಭಟನೆಯನ್ನು ಕೈಬಿಡುವಂತೆ ತಹಸೀಲ್ದಾರ್ ಟಿ.ಸಿ.ಕಾಂತರಾಜು ಅವರು ಮನವಿ ಮಾಡಿದ್ದಾರೆ.

ತಾಲೂಕು ಆಡಳಿತದಿಂದ ಈ ಘಟನೆಗೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ಮುಖ್ಯಸ್ಥರು ಹಾಗೂ ಸಿಪಿಐ, ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಈಗಾಗಲೇ ಸಭೆಯನ್ನು ನಡೆಸಿದ್ದು ಅವರ ಬೇಡಿಕೆಗಳಂತೆ ಅಂಬೇಡ್ಕರ್ ಭಾವಚಿತ್ರವನ್ನು ಪುನಃ ಅನಾವರಣ ಮಾಡಲಾಗುವುದು. ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು ಅಂಬೇಡ್ಕರ್ ಭವನ ದುರಸ್ಥಿಗೆ ಸಂಬಂಧ ಪಟ್ಟ ಇಲಾಖೆಗೆ ವಹಿಸಿದ್ದು ಇನ್ನು ಮುಂದೆ ಇದರ ಉಸ್ಥುವಾರಿಯನ್ನು ಗ್ರಾಮ ಪಂಚಾಯ್ತಿ ಪಿಡಿಒ ಅವರು ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.

ದಲಿತ ಸಂಘಟನೆಯ ಕಾರ್ಯಕರ್ತರ ಬೇಡಿಕೆಯಂತೆ ಘಟನೆ ತಿಳಿದ ತತ್ಕ್ಷಣವೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೋಲೀಸ್ ಇಲಾಖೆಯ ಅಧಿಕಾರಿಗಳನ್ನು ಘಟನೆ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ವಿವರ ಪಡೆದುಕೊಂಡಿದ್ದಾರೆ. ಅಲ್ಲದೆ, ಮರುದಿನ ಸಭೆ ನಡೆಸಿ ಇವರ ಎಲ್ಲಾ ಬೇಡಿಕೆಗಳಿಗೆ ಮನ್ನಣೆ ನೀಡಲಾಗಿದೆ. ಹೀಗಿರುವಾಗ ಮತ್ತೆ ಪ್ರತಿಭಟನೆಯ ಹಾದಿ ತುಳಿಯುವುದು ಒಳ್ಳೆಯ ಬೆಳವಣಿಗೆಯಲ್ಲದ ಕಾರಣ ಕೂಡಲೆ ಪ್ರತಿಭಟನೆಯ ಕರೆಯನ್ನು ಹಿಂಪಡಿಯುವಂತೆ ದಲಿತ ಮುಖಂಡರನ್ನು ತಹಸೀಲ್ದಾರ್ ಕೋರಿದ್ದಾರೆ.

ಪ್ರತಿಭಟನೆಗೆ ಬೆಂಬಲ ಇಲ್ಲ:ಮಾದಿಗ ದಂಡೋರ
-------------------------------------------------

ಹುಳಿಯಾರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊವನ್ನು ಕಿಡಿಗೇಡಿಗಳು ಅಲ್ಲಿನ ಶೌಚಾಲಯದಲ್ಲಿಟ್ಟು ಅಪಮಾನ ಮಾಡಿರುವುದಕ್ಕೆ ಸಂಭಂದಿಸಿದಂತೆ ಕನಾ೯ಟಕ ದಲಿತ ಸಂಘರ್ಷ ಸಮಿತಿ ಆ.26 ರ ಗುರುವಾರದಂದು ಹುಳಿಯಾರಿನಲ್ಲಿ ಕರೆಯಲಾಗಿರುವ ಧರಣಿ ಹಾಗೂ ಬೃಹತ್ ಪ್ರತಿಭಟನಾ ಮೆರವಣಿಗೆಗೆ ಮಾದಿಗ ದಂಡೋರ ಸಮಿತಿಯ ಬೆಂಬಲ ಇಲ್ಲ ಎಂದು ರಾಜ್ಯ ಮಾದಿಗ ದಂಡೋರ ಸಮಿತಿಯ ಜಂಟಿ ಕಾರ್ಯದಶಿ೯ ಬೇವಿನಹಳ್ಳಿ ಚನ್ನಬಸವಯ್ಯ ತಿಳಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ 3 ದಶಕಗಳಿಂದ ತಾಲೂಕಿನ ಆಗುಹೋಗುಗಳನ್ನು ಗಮನಿಸುತ್ತಾ ಬಂದಿದ್ದು ತಾಲೂಕಿನ ಜನತೆಗೆ ಅಂಬೇಡ್ಕರ್ ಬಗ್ಗೆ ಗೌರವ ಭಾವನೆಯಿದ್ದು ಶೌಚಾಲಯದಲ್ಲಿ ಪೋಟೊ ಇಡುವಂತಹ ನೀಚತನಕ್ಕೆ ಯಾರೂ ಮುಂದಾಗುವುದಿಲ್ಲ. ಅಲ್ಲದೆ ಹಿಂದೆಂದೂ ಈ ರೀತಿಯ ಕೃತ್ಯ ನಡೆದ ನಿದರ್ಶನವಿಲ್ಲ. ಜನಸಾಮಾನ್ಯರಿಗೂ ದಲಿತ ಸಮುದಾಯದ ಬಗ್ಗೆ ಅಭಿಮಾನವಿದ್ದು ಗೌರವಯುತವಾಗಿ ಕಂಡುಕೊಳ್ಳುತ್ತಿದ್ದಾರೆ.

ಅಲ್ಲಿನ ಘಟನೆಗಳನ್ನು ಅವಲೋಕಿಸಿದಾಗ ಇದು ಜನಸಾಮಾನ್ಯರ ಕೃತ್ಯವಲ್ಲ. ಇದೊಂದು ಕೆಲ ಪ್ರಚಾರ ಪ್ರಿಯರ ಉದ್ದೇಶಪೂರ್ವಕ ಕೃತ್ಯವಾಗಿದ್ದು ಇದರ ಹಿಂದೆ ತಾಲೂಕು ಆಡಳಿತಕ್ಕೆ ಮಸಿ ಬಳಿಯುವ ಹುನ್ನಾರ ಎದ್ದು ಕಾಣುತ್ತದೆ. ಹಾಗಾಗಿ ಇದಕ್ಕೆ ಹೆಚ್ಚು ಒತ್ತು ಕೊಡುವುದು ಬೇಡ ಎಂದರು. ಅಲ್ಲದೆ, ತಾಲೂಕು ಆಡಳಿತ ಈಗಾಗಲೇ ಕ್ರಮ ಕೈಗೊಂಡಿರುವಾಗ ಪ್ರತಿಭಟನೆ ಹಮ್ಮಿಕೊಳ್ಳುವ ಔಚಿತ್ಯ ಏನು ಎಂದು ಪ್ರಶ್ನಿಸಿದ್ದಾರೆ.







ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...