ವಿಷಯಕ್ಕೆ ಹೋಗಿ

ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆಗೆ ಚಾಲನೆ

ಹುಳಿಯಾರು ಸಮೀಪದ ಬೇವಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆ ಉದ್ಘಾಟನಾ ಸಭೆಯಲ್ಲಿ ತಹಸೀಲ್ದಾರ್ ಟಿ.ಸಿ.ಕಾಂತರಾಜು , ಸೈ.ಮುನೀರ್, ಚನ್ನಬಸವಯ್ಯ,ನಾಗರಾಜು,ನಾಗರತ್ನಮ್ಮ ಭಾಗವಹಿಸಿರುವುದು.
ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆಗೆ ಚಾಲನೆ
-------------------------------------------

ತಾಲೂಕು ಆಡಳಿತ ವತಿಯಿಂದ ಹಂದನಕೆರೆ ಹೋಬಳಿಯ ಬೇವಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸಂಪೂರ್ಣ ಮಾಹಿತಿ ಪಡೆಯುವ ಮೂಲಕ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆ ಗಣತಿ ಕಾರ್ಯಕ್ಕೆ ತಹಸೀಲ್ದಾರ್ ಟಿ.ಸಿ.ಕಾಂತರಾಜು ಚಾಲನೆ ನೀಡಿದರು.

ಇದಕ್ಕೂ ಮನ್ನ ಗಣತಿ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಸಭಯಲ್ಲಿ ಅವರು ಗಣತಿ ಕಾರ್ಯದ ಉದ್ದೇಶದ ಬಗ್ಗೆ ಮಾಹಿತಿ ನೀಡಿ ಮಾತನಾಡಿ ರಾಜ್ಯ ಸಕಾ೯ರ ಒದಗಿಸಿರುವ ಮೀಸಲಾತಿ ಸೌಲಭ್ಯವು ಪರಿಶಿಷ್ಠ ಜಾತಿಯ ಎಲ್ಲಾ ಕೋಮು, ಜಾತಿ, ವರ್ಗಗಳಿಗೆ ಸಮರ್ಪಕವಾಗಿ ತಲುಪುತ್ತಿದೆಯೇ ಇಲ್ಲದಿದ್ದರೆ ಇದಕ್ಕೆ ಶೈಕ್ಷಣಿಕ, ಆಥಿ೯ಕ, ಸಾಮಾಜಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಇರುವ ಕಾರಣಗಳು ಏನು? ಈ ತಾರತಮ್ಯವನ್ನು ನಿವಾರಿಸಲು ಕೈಗೊಳ್ಳಬೇಕಾದ ಮುಂದಿನ ಕ್ರಮಗಳು ಏನು ಎಂದು ಅರಿಯುವ ಸಲುವಾಗಿ ಈ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಮೀಕ್ಷೆಯಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ, ಶೈಕ್ಷಣಿಕ, ರಾಜಕೀಯ, ಸಾಂಸ್ಕೃತಿಕ, ಉದ್ಯೋಗ ಹಾಗೂ ಸಾಮಾಜಿಕ ಸ್ಥಿತಿಗತಿ ಇತ್ಯಾದಿಗಳ ವಿವರವನ್ನು ಪ್ರತಿ ಮನೆ ಮನೆಗೆ ಭೇಟಿ ನೀಡಿ ಪಡೆಯಲಿದ್ದು ಪರಿಶಿಷ್ಠಜಾತಿ ಬಂಧುಗಳು ಕರಾರುವಾಕ್ಕಾದ, ನಿಖರವಾದ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ನೀಡುವಂತೆ ಹೇಳಿದರಲ್ಲದೆ ಆದಿದ್ರಾವಿಡ ಎಂದಿರುವ ಕಲಂನಲ್ಲಿ ಹೊಲಯ ಎಂದೂ, ಆದಿ ಕನಾ೯ಟಕ ಎಂದಿರುವ ಕಲಂನಲ್ಲಿ ಮಾದಿಗ ಎಂದು ನಮೂದಿಸುವಂತೆ ಸೂಚಿಸಿದರು.

ರಾಜ್ಯಾದ್ಯಂತ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಸಕಾ೯ರಕ್ಕೆ ವರದಿ ನೀಡುವುದು ಈ ಸಮೀಕ್ಷೆಯ ಉದ್ದೇಶವಾಗಿದೆ. ಪರಿಶಿಷ್ಠ ಜಾತಿಯ ಅಭಿವೃದ್ಧಿಗಾಗಿ ಸಕಾ೯ರ ಯೋಜನೆಯನ್ನು ರೂಪಿಸಲು ಈ ಸಮೀಕ್ಷೆ ಅನುಕೂಲವಾಗಲಿದ್ದು ಪರಿಶಿಷ್ಠಜಾತಿ ಕುಟುಂಬಗಳು ಈ ಸಮೀಕ್ಷೆ ಕಾರ್ಯಕ್ಕೆ ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಸೈ.ಮುನೀರ್, ರಾಜ್ಯ ಮಾದಿಗ ದಂಡೋರದ ಜಂಟಿ ಕಾರ್ಯದಶಿ೯ ಬೇವಿನಹಳ್ಳಿ ಚನ್ನಬಸವಯ್ಯ, ಜಿಲ್ಲಾ ಮಹಿಳಾ ಮಾದಿಗ ದಂಡೋರದ ನಾಗರತ್ನಮ್ಮ, ರತ್ನಮ್ಮ, ನಾಗರಾಜು, ಉಪತಹಸೀಲ್ದಾರ್ ಯದುರಾಜ್, ಕಂದಾಯ ತನಿಖಾಧಿಕಾರಿ ಮಲ್ಲಿಕಾಜು೯ನಯ್ಯ, ಬಸವರಾಜು, ಕೃಷ್ಣಮೂತಿ೯, ಗುರುಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...