ವಿಷಯಕ್ಕೆ ಹೋಗಿ

ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆಗೆ ಚಾಲನೆ

ಹುಳಿಯಾರು ಸಮೀಪದ ಬೇವಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆ ಉದ್ಘಾಟನಾ ಸಭೆಯಲ್ಲಿ ತಹಸೀಲ್ದಾರ್ ಟಿ.ಸಿ.ಕಾಂತರಾಜು , ಸೈ.ಮುನೀರ್, ಚನ್ನಬಸವಯ್ಯ,ನಾಗರಾಜು,ನಾಗರತ್ನಮ್ಮ ಭಾಗವಹಿಸಿರುವುದು.
ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆಗೆ ಚಾಲನೆ
-------------------------------------------

ತಾಲೂಕು ಆಡಳಿತ ವತಿಯಿಂದ ಹಂದನಕೆರೆ ಹೋಬಳಿಯ ಬೇವಿನಹಳ್ಳಿ ಗ್ರಾಮದಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸಂಪೂರ್ಣ ಮಾಹಿತಿ ಪಡೆಯುವ ಮೂಲಕ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸಮೀಕ್ಷೆ ಗಣತಿ ಕಾರ್ಯಕ್ಕೆ ತಹಸೀಲ್ದಾರ್ ಟಿ.ಸಿ.ಕಾಂತರಾಜು ಚಾಲನೆ ನೀಡಿದರು.

ಇದಕ್ಕೂ ಮನ್ನ ಗಣತಿ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಸಭಯಲ್ಲಿ ಅವರು ಗಣತಿ ಕಾರ್ಯದ ಉದ್ದೇಶದ ಬಗ್ಗೆ ಮಾಹಿತಿ ನೀಡಿ ಮಾತನಾಡಿ ರಾಜ್ಯ ಸಕಾ೯ರ ಒದಗಿಸಿರುವ ಮೀಸಲಾತಿ ಸೌಲಭ್ಯವು ಪರಿಶಿಷ್ಠ ಜಾತಿಯ ಎಲ್ಲಾ ಕೋಮು, ಜಾತಿ, ವರ್ಗಗಳಿಗೆ ಸಮರ್ಪಕವಾಗಿ ತಲುಪುತ್ತಿದೆಯೇ ಇಲ್ಲದಿದ್ದರೆ ಇದಕ್ಕೆ ಶೈಕ್ಷಣಿಕ, ಆಥಿ೯ಕ, ಸಾಮಾಜಿಕ ಹಾಗೂ ಇತರೆ ಕ್ಷೇತ್ರಗಳಲ್ಲಿ ಇರುವ ಕಾರಣಗಳು ಏನು? ಈ ತಾರತಮ್ಯವನ್ನು ನಿವಾರಿಸಲು ಕೈಗೊಳ್ಳಬೇಕಾದ ಮುಂದಿನ ಕ್ರಮಗಳು ಏನು ಎಂದು ಅರಿಯುವ ಸಲುವಾಗಿ ಈ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಮೀಕ್ಷೆಯಲ್ಲಿ ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ, ಶೈಕ್ಷಣಿಕ, ರಾಜಕೀಯ, ಸಾಂಸ್ಕೃತಿಕ, ಉದ್ಯೋಗ ಹಾಗೂ ಸಾಮಾಜಿಕ ಸ್ಥಿತಿಗತಿ ಇತ್ಯಾದಿಗಳ ವಿವರವನ್ನು ಪ್ರತಿ ಮನೆ ಮನೆಗೆ ಭೇಟಿ ನೀಡಿ ಪಡೆಯಲಿದ್ದು ಪರಿಶಿಷ್ಠಜಾತಿ ಬಂಧುಗಳು ಕರಾರುವಾಕ್ಕಾದ, ನಿಖರವಾದ ಹಾಗೂ ಸತ್ಯಾಂಶವುಳ್ಳ ಮಾಹಿತಿಯನ್ನು ನೀಡುವಂತೆ ಹೇಳಿದರಲ್ಲದೆ ಆದಿದ್ರಾವಿಡ ಎಂದಿರುವ ಕಲಂನಲ್ಲಿ ಹೊಲಯ ಎಂದೂ, ಆದಿ ಕನಾ೯ಟಕ ಎಂದಿರುವ ಕಲಂನಲ್ಲಿ ಮಾದಿಗ ಎಂದು ನಮೂದಿಸುವಂತೆ ಸೂಚಿಸಿದರು.

ರಾಜ್ಯಾದ್ಯಂತ ಈ ಸಮೀಕ್ಷೆ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಠಜಾತಿ ಕುಟುಂಬಗಳ ಆಥಿ೯ಕ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಸಕಾ೯ರಕ್ಕೆ ವರದಿ ನೀಡುವುದು ಈ ಸಮೀಕ್ಷೆಯ ಉದ್ದೇಶವಾಗಿದೆ. ಪರಿಶಿಷ್ಠ ಜಾತಿಯ ಅಭಿವೃದ್ಧಿಗಾಗಿ ಸಕಾ೯ರ ಯೋಜನೆಯನ್ನು ರೂಪಿಸಲು ಈ ಸಮೀಕ್ಷೆ ಅನುಕೂಲವಾಗಲಿದ್ದು ಪರಿಶಿಷ್ಠಜಾತಿ ಕುಟುಂಬಗಳು ಈ ಸಮೀಕ್ಷೆ ಕಾರ್ಯಕ್ಕೆ ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಸೈ.ಮುನೀರ್, ರಾಜ್ಯ ಮಾದಿಗ ದಂಡೋರದ ಜಂಟಿ ಕಾರ್ಯದಶಿ೯ ಬೇವಿನಹಳ್ಳಿ ಚನ್ನಬಸವಯ್ಯ, ಜಿಲ್ಲಾ ಮಹಿಳಾ ಮಾದಿಗ ದಂಡೋರದ ನಾಗರತ್ನಮ್ಮ, ರತ್ನಮ್ಮ, ನಾಗರಾಜು, ಉಪತಹಸೀಲ್ದಾರ್ ಯದುರಾಜ್, ಕಂದಾಯ ತನಿಖಾಧಿಕಾರಿ ಮಲ್ಲಿಕಾಜು೯ನಯ್ಯ, ಬಸವರಾಜು, ಕೃಷ್ಣಮೂತಿ೯, ಗುರುಸಿದ್ದಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...