ವಿಷಯಕ್ಕೆ ಹೋಗಿ

ನವೆಂಬರ್ 24 ರಿಂದ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆ:ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ

(ಹುಳಿಯಾರು ಸಮೀಪದ ಬರದಲೇಪಾಳ್ಯ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಹಾಲಿನ ಗುಣಮಟ್ಟ ಪರೀಕ್ಷಿಸುವ ಮೂಲಕ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಉದ್ಘಾಟಿಸಿದರು. ಎನ್.ಗೌಡಯ್ಯ, ಧನಂಜಯ್ಯ, ಕೆ.ಸಿ.ಕೇಶವಮೂರ್ತಿ, ಕೆಂಕೆರೆ ಸತೀಶ್ ಇದ್ದಾರೆ.)

ನವೆಂಬರ್ 24 ರಿಂದ ರೈತರಿಗೆ ನೀಡುವ ಹಾಲಿನ ದರದಲ್ಲಿ ಏರಿಕೆ:ಹಳೆಮನೆ ಶಿವನಂಜಪ್ಪ
--------------------------------------------------------------------
ನವೆಂಬರ್ 24 ರಿಂದ ತುಮಕೂರು ಹಾಲು ಒಕ್ಕೂಟಕ್ಕೆ ಹಾಲು ಹಾಕುತ್ತಿರುವ ರೈತರಿಗೆ ಇಲ್ಲಿಯವರೆವಿಗೆ ಸರ್ಕಾರದ ಪ್ರೋತ್ಸಾಹ ಧನ ಸೇರಿ ನೀಡಲಾಗಿತ್ತಿದ್ದ ಹದಿನಾರುವರೆ ರು. ಬದಲಿಗೆ ಎಪ್ಪತೈದು ಪೈಸೆ ಹೆಚ್ಚಳ ಮಾಡಿ ಹದಿನೇಳುಕಾಲು ರು. ನೀಡಲು ನಿರ್ಧರಿಸಿರುವುದಾಗಿ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಅವರು ತಿಳಿಸಿದರು.
ಹುಳಿಯಾರು ಸಮೀಪದ ಬರದಲೇಪಾಳ್ಯದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ತುಮಕೂರು ಒಕ್ಕೂಟ ಹಾಲು ಪೌಡರಿಗೆ ಹೋಗಿ ಬಹಳ ನಷ್ಟದಲ್ಲಿತ್ತು. ಆದರೆ ಈಗ ಕೇರಳ, ಬಳ್ಳಾರಿ, ಮುಂಬೈಗಳಿಗೆ ಹೋಗುತ್ತಿದ್ದು ಲಾಭದಲ್ಲಿ ನಡೆಯುತ್ತಿದೆ ಎಂದರಲ್ಲದೆ, ಚಿಕ್ಕನಾಯಕನಹಳ್ಳಿ ತಾಲೂಕಿನಿಂದ ಮೊದಲು ದಿನಕ್ಕೆ 6 ಸಾವಿರ ಲೀ. ಹಾಲು ಒಕ್ಕೂಟಕ್ಕೆ ಹೋಗುತ್ತಿತ್ತು. ಈಗ 40 ಸಾವಿರ ಲೀ. ಹೋಗುತ್ತಿದೆ. ಇದನ್ನು 1 ಲಕ್ಷಕ್ಕೆ ಮುಟ್ಟಿಸುವ ಗುರಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ವಿಸ್ತರಣಾಧಿಕಾರಿ ಯರಗುಂಟಪ್ಪ ಅವರು ಮಾತನಾಡಿ ಷೇರುದಾರರು, ಕಾರ್ಯಕಾರಿ ಮಂಡಲಿ ಸದಸ್ಯರು ಹಾಗೂ ಸಿಬ್ಬಂಧಿವರ್ಗದವರು ಸಹಕಾರ ಸಂಘದ ಆಧಾರ ಸ್ತಂಭಗಳಾಗಿದ್ದು ಜಾತಿ ಮತ್ತು ರಾಜಕೀಯ ನುಸುಳಿಸದೆ ಒಂದಾಣಿಕೆಯಿಂದ ತಮ್ಮತಮ್ಮ ಕರ್ತವ್ಯ ನಿರ್ವಹಿಸಿದರೆ ಏಳಿಗೆ ಸಾಧ್ಯ ಎಂದರಲ್ಲದೆ, ಉತ್ಪಾದನೆಯಾಗುವ ಊರಿನಲ್ಲೇ ಮಾರುಕಟ್ಟೆ ವ್ಯವಸ್ಥೆ, ಉತ್ತಮ ಬೆಲೆ ಹಾಗೂ ಬಟವಾಡೆಯ ಏಕೈಕ ಉಪಕಸುಬು ಹೈನುಗಾರಿಕೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬರದಲೇಪಾಳ್ಯ ಹಾಲಿನ ಸೊಸೈಟಿಯ ಆರ್.ಗುರುಸಿದ್ಧಯ್ಯ ವಹಿಸಿದ್ದರು. ಸಮಾಲೋಚಕರಾದ ಬುದ್ಧಿಪ್ರಸಾದ್, ಗ್ರಾ.ಪಂ.ಅಧ್ಯಕ್ಷ ಎನ್.ಗೌಡಯ್ಯ, ಗ್ರಾ.ಪಂ.ಸದಸ್ಯ ಧನಂಜಯ್ಯ, ಕೆಂಕೆರೆ ಹಾಲಿನ ಸೊಸೈಟಿ ಅಧ್ಯಕ್ಷ ಕೆ.ಸಿ.ಕೇಶವಮೂರ್ತಿ, ಹಸಿರುಸೇನೆ ಸಂಚಾಲಕ ಕೆಂಕೆರೆ ಸತೀಶ್, ಮರುಳಯ್ಯ, ಶೇಖರಪ್ಪ ಮತ್ತಿತರರು ಉಪಸ್ಥಿತರಿದ್ದರು.
ನೀಲಕಂಠಮೂರ್ತಿ ಪ್ರಾರ್ಥಿಸಿ ಮರುಳಸಿದ್ಧಪ್ಪ ಸ್ವಾಗತಿಸಿ ಶಾಂತಕುಮಾರ್ ನಿರೂಪಿಸಿ ಪಿ.ನಾಗರಾಜು ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.