ವಿಷಯಕ್ಕೆ ಹೋಗಿ

ನಿರಾಶ್ರಿತರಿಗೆ ಸೋಮಜ್ಜನಪಾಳ್ಯದಲ್ಲಿ ಸೂರು ಕಲ್ಪಿಸುವ ಪುನರ್ವಸತಿಗೆ ಯೋಜನೆಗೆ ಗ್ರಾಮಸ್ಥರ ವಿರೋಧ

(ಹುಳಿಯಾರು ಸಮೀಪದ ಸೋಮಜ್ಜನಪಾಳ್ಯದಲ್ಲಿ ಬೇರೆ ಗ್ರಾಮದ ನಿರಾಶ್ರಿತರಿಗೆ ಭೂಮಿ ನೀಡದಂತೆ ಗ್ರಾ.ಪಂ.ಸದಸ್ಯರಾದ ಎಂ.ಅಶೋಕ್ ಬಾಬು, ಬಾಲರಾಜು ನೇತೃತ್ವದಲ್ಲಿ ಉಪತಹಸೀಲ್ದಾರ್ ಅಂಜಿನಪ್ಪ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು )
ನಿರಾಶ್ರಿತರಿಗೆ ಸೋಮಜ್ಜನಪಾಳ್ಯದಲ್ಲಿ ಸೂರು ಕಲ್ಪಿಸುವ ಪುನರ್ವಸತಿಗೆ ಯೋಜನೆಗೆ ಗ್ರಾಮಸ್ಥರ ವಿರೋಧ
ಹುಳಿಯಾರು ಕೆರೆಗೆ ನೀರು ಹರಿಸುತ್ತಿರುವುದರಿಂದ ಮನೆ ಕಳೆದುಕೊಂಡು ಬೀದಿಗೆ ಬಂದಿರುವ ನಿರಾಶ್ರಿತರಿಗೆ ಸೋಮಜ್ಜನಪಾಳ್ಯದಲ್ಲಿ ಪುನರ್ವಸತಿ ಕಲ್ಪಿಸುವ ಮಾಜಿ ಶಾಸಕ ಕೆ.ಎಸ್.ಕಿರಣ್ಕುಮಾರ್ ಅವರ ಯೋಜನೆಗೆ ಸೋಮಜ್ಜನಪಾಳ್ಯದ ಕೆಲ ಗ್ರಾಮಸ್ಥರು ಹಾಗೂ ಕೆಲವು ಗ್ರಾ.ಪಂ.ಸದಸ್ಯರುಗಳು ವಿರೋಧ ವ್ಯಕ್ತಪಡಿಸಿ ಉಪತಹಸೀಲ್ದಾರ್ ಅಂಜಿನಪ್ಪ ಅವರಿಗೆ ಮಂಗಳವಾರ ಪತ್ರ ಸಲ್ಲಿಸಿದ್ದಾರೆ.

ಸೋಮಜ್ಜನಪಾಳ್ಯದ ಸರ್ಕಾರಿ ಸರ್ವೆ ನಂ 99 ರಲ್ಲಿ 4 ಎಕರೆ 36 ಕುಂಟೆ ಗೋಮಾಳವಿದ್ದು ಇದರಲ್ಲಿ 91-92 ರಲ್ಲಿಯೇ 45 ಮಂದಿಗೆ ಆಶ್ರಯ ಯೋಜನೆಯಲ್ಲಿ 30*40 ಅಳತೆಯ ನಿವೇಶನದ ಹಕ್ಕು ಪತ್ರ ನೀಡಲಾಗಿದೆಯಲ್ಲದೆ ಇನ್ನೂ ಕೆಲವರಿಗೆ ಶ್ರೀಘದಲ್ಲಿಯೇ ಹಕ್ಕು ಪತ್ರ ನೀಡುಲಾಗುವುದಿದ್ದು ಇದರಲ್ಲಿ ಈಗಾಗಲೇ ಕೆಲವರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಕೆಲವರು ಕಟ್ಟಿದ ಮನೆಗಳು ಬಿದ್ದು ಹೋಗಿವೆ. ಇನ್ನೂ ಕೆಲವರು ನಿವೇಶವನ್ನು ಸಾವಿರಾರರು ರು. ವೆಚ್ಚದಲ್ಲಿ ಸ್ವಚ್ಚಗೊಳಿಸಿಟ್ಟುಕೊಂಡಿದ್ದಾರೆ.ಅಲ್ಲದೆ ಇದೇ ಗ್ರಾಮದಲ್ಲಿಯೇ ನಿರಾಶ್ರಿತರು ಇರುವಾಗ ಬೇರೆ ಗ್ರಾಮದವರಿಗೆ ಇಲ್ಲಿ ಅವಕಾಶ ಕೊಡುವುದು ಎಷ್ಟು ಸರಿ ಎಂದು ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಎಂ.ಅಶೋಕ್ ಬಾಬು, ಬಾಲರಾಜು, ಚಂದ್ರಕಲಾ ಪ್ರಶ್ನಿಸಿದ್ದಾರೆ.

ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವವ ಮೇಲೆ ನಮಗೂ ಅನುಕಂಪವಿದ್ದು ತಹಸೀಲ್ದಾರ್ ರವರು ಅವರಿಗಳಿಗೆ ಬೇರೆ ಎಲ್ಲಿಯಾದರೂ ಭೂಮಿ ಖರೀಧಿಸಿ ಪುನರ್ವಸತಿ ಕಲ್ಪಿಸುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಶೀಘ್ರದಲ್ಲಿಯೇ ನಮ್ಮೂರಿನ ವಸತಿರಹಿತರಿಗೆ ಈ ಜಾಗದಲ್ಲಿ ಹಕ್ಕು ಪತ್ರ ಕೊಡಲು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಗ್ರಾಮದ ಮುಖಂಡರಾದ ಹೊನ್ನಪ್ಪ, ಕಿಟ್ಟಪ್ಪ, ದುರ್ಗಯ್ಯ, ನಾಗರಾಜು, ಸಿದ್ದಣ್ಣ ಹಾಗೂ ಐದು ಸ್ರೀಶಕ್ತಿ ಸಂಘಗಳ ಪ್ರತಿನಿಧಿಗಳು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...