ವಿಷಯಕ್ಕೆ ಹೋಗಿ

ಕಡೆಗೂ ಬಂತು ಕೊಬ್ಬರಿಗೆ ಬಂಪರ್ ಬೆಲೆ

(ಹುಳಿಯಾರು ಎಪಿಎಂಸಿಯಲ್ಲಿ ಕೊಬ್ಬರಿಗೆ ಬಂಪರ್ ಬೆಲೆ ಬಂದಿರುವ ಕಾರಣ ರೈತರು ಅತಿ ಉತ್ಸಾಹದಿಂದ ಕೊಬ್ಬರಿ ಮಾರಾಟದಲ್ಲಿ ತೊಡಗಿರುವುದು)

ಕಳೆದ ಹಲವಾರು ತಿಂಗಳಿನಿಂದ ನಾಲ್ಕು ನಾಲ್ಕುವರೆ ಸಾವಿರದ ಆಜುಬಾಜಿನಲ್ಲಿದ್ದ ಕೊಬ್ಬರಿ ಕಳೆದ ವಾರದಿಂದ ಏರಿಕೆ ಕಾಣುತ್ತಿದ್ದು ರೈತರು ಅಂತೂ ಇಂತೂ ಸ್ವಲ್ಪವಾದರೂ ಬೆಲೆ ಬಂತಲ್ಲ ಎಂದು ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನದಲ್ಲ್ದಿ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ. ಅಲ್ಲದೆ, ಮುಂದಿನ ದೀಪಾವಳಿಗೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಬಹುದೆಂಬ ಮಾತು ಕೇಳಿಬರುತ್ತಿದೆ.
ಇದುವರೆಗೂ ಕೊಬ್ಬರಿ ಬೆಲೆ ಏರಿಕೆ ಕಾಣದೆ 4 ಸಾವಿರದ ಆಸು ಪಾಸಿನಲ್ಲಿಯೇ ಗಿರಕಿ ಹೊಡೆಯುತ್ತಿದ್ದರೆ ತೆಂಗಿನ ಕಾಯಿಯನ್ನಂತೂ 4 ರು ಗೆ ಕೇಳುವವರು ಗತಿಯಿರಲಿಲ್ಲ. ಇದರಿಂದ ತೆಂಗು ಬೆಳಯುವ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಭದ್ರಾವತಿ, ಶಿವಮೊಗ್ಗ ರೈತರು ಕಂಗಾಲಾಗಿ ಹೋಗಿದ್ದರು.


ಕೆಲ ದಿನಗಳಿಂದ 1 ಸಾವಿರ ಕಾಯಿಗೆ ಇದ್ದ 4200 ರು. ಈಗ 6 ರಿಂದ 7 ಸಾವಿರ ರು.ಗಳಾಗಿದೆ.ವಾಡಿಕೆಯಂತೆ ಏಣಿಕೆ ಲೆಖ್ಖದಲ್ಲಿ ಸಾವಿರ ಕಾಯಿಗಿಷ್ಟು ಬೆಲೆ ಎಂಬ ಬದಲಿಗೆ ಯಾವುದೆ ಗಾತ್ರದ ಕಾಯಿಯಿರಲಿ ಎಲ್ಲವನ್ನು ಕ್ವಿಂಟಾಲ್ ಲೆಖ್ಖದಲ್ಲಿ ಕೊಳ್ಳುವ ಹೊಸ ಪರಿಪಾಟ ಶುರುವಾಗಿದ್ದು ರೈತರಿಗೆ ಕಾಯಿ ಮಾರುವುದೆ ಲಾಭದಾಯಕ ಎನ್ನುವಂತಾಗಿದೆ. ಕೊಬ್ಬರಿಗಿಂತ ಕಾಯಿಗೆ ಬೆಲೆ ಬರಲು ಶುರುವಾದ್ದರಿಂದ ರೈತರು ಕೊಬ್ಬರಿ ಆಸೆ ಕೈ ಬಿಟ್ಟು ಕಾಯಿಯನ್ನೇ ಮಾರಾಟ ಮಾಡಲು ಮುಂದಾಗುತ್ತಿದ್ದಾರೆ. ಅಲ್ಲದೆ ಕಾಯಿ ಚೂರು 28 ರು.ಗಳನ್ನು ದಾಟಿ 45 ರು.ಗಳಿಗೆ ಬಂದು ನಿಂತಿದೆ.ಇಲ್ಲಿಯವರೆವಿಗೂ 4500 ರು. ಇದ್ದ ಕೊಬ್ಬರಿಗೆ ಬುಧವಾರದ ಅರಸೀಕೆರೆ ಮಾರುಕಟ್ಟೆಯಲ್ಲಿ 5300 ರು. ಬೆಲೆಕಂಡುಬಂದು ಅಂದಿನಿಂದ ಗಣನೀಯವಾಗಿ ಏರಿಕೆಯಾಗುತ್ತಲೆ ಇದೆ . ಕೆ.ಜಿ.ಗೆ ಕೇವಲ 23 ರು.ಗಳಿದ್ದ ಕೌಟಿಗೂ ಸಹ ಭಾರಿ ಡಿಮ್ಯಾಂಡ್ ಬಂದಿದ್ದು 30 ರು.ಗಳಾಗಿದೆ. . ಈಗ ಕೊಬ್ಬರಿಗಿರಲಿ ಕೌಟಿಗೂ ಸಹ ಬಂಪರ್ ಬೆಲೆ ಬಂದಿದ್ದು ರೈತರ ಮೊಗದಲ್ಲಿ ಸಂತಸದ ಚಿಲುಮೆ ಸೃಷ್ಠಿಸಿದೆ.

ಆಮದು ಇಲ್ಲ:ಮುಂಚೆ ನೆರೆ ದೇಶಗಳಾದ ಶ್ರೀಲಂಕ, ಮಲೇಶಿಯ ಮತ್ತಿತರ ಕಡೆಯಿಂದ ಆಮದು ಮಾಡಿಕೊಳ್ಳುತ್ತಿದ್ದನ್ನು ಈಗ ಅನೇಕ ಕಾರಣದಿಂದಾಗಿ ನಿಲ್ಲಿಸಲಾಗಿರುವುದೆ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನತ್ತಾರೆ ಹುಳಿಯಾರು ಮಾರುಕಟ್ಟೆಯ ಪ್ರಮುಖ ಕೊಬ್ಬರಿ ವರ್ತಕ ಚಿಕ್ಕಬಿದರೆಪ್ರದೀಪ್. ಅವರ ಪ್ರಕಾರ ದೇಶದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಅತಿವೃಷ್ಠಿಯಿಂದ ಇಳುವರಿ ಕಡಿಮೆಯಾಗಿದೆ. ಇದೇ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಅತಿಯಾದ ಚಳಿಯಿರುವ ಕಾರಣ ಭಾರಿ ಬೇಡಿಕೆ ಬರುತ್ತಿದೆ. ಪರಿಣಾಮ ರಾಜ್ಯದ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೆಲೆ ಸಿಗುತ್ತಿದೆ ಎನ್ನುತ್ತಾರೆ.

ಹುಳಿಯಾರು ಎಪಿಎಂಸಿ ನಿರ್ದೇಶಕ ಎಲ್.ಆರ್.ಬಾಲಾಜಿ ಅವರ ಪ್ರಕಾರ ತೆಂಗಿನ ಕಾಯಿ ಯತ್ತೇಚ್ಚವಾಗಿ ಬೇಕರಿ ತಿನಿಸು ಹಾಗೂ ಕಾಯಿ ಪೌಡರ್ ತಯಾರಿಕೆಗೆ ಹೋಗುತ್ತದೆ. ರಾಜ್ಯದಲ್ಲಿ ಕಾಯಿ ಎಣ್ಣೆ ಹಾಗೂ ಕಾಯಿ ಪೌಡರ್ ಕಾರ್ಖನೆಗಳು ಹೆಚ್ಚಾಗಿರುವ ಕಾರಣ ತೆಂಗಿನ ಕಾಯಿಗಿರಲಿ ಚೂರಿಗೂ ಸಹ ಬಂಪರ್ ಬೆಲೆ ಸಿಗುತ್ತಿದೆ. ಇದರಿಂದಾಗಿ ಈಗಾಗಲೇ ಹೊಸದುರ್ಗ, ಶಿರಾ, ಹಿರಿಯೂರು, ಹೊಳಲ್ಕೆರೆ ತಾಲೂಕುಗಳ ರೈತರು ಕೊಬ್ಬರಿ ಮಾಡದೆ ಕಾಯಿಯನ್ನೇ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ದೀಪಾವಳಿಗೆ ಕೊಬ್ಬರಿ ಅಭಾವ ಸೃಷ್ಠಿಯಾಗಿ ಬಂಗಾರದ ಬೆಲೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...