ವಿಷಯಕ್ಕೆ ಹೋಗಿ

ಕಡೆಗೂ ಬಂತು ಕೊಬ್ಬರಿಗೆ ಬಂಪರ್ ಬೆಲೆ

(ಹುಳಿಯಾರು ಎಪಿಎಂಸಿಯಲ್ಲಿ ಕೊಬ್ಬರಿಗೆ ಬಂಪರ್ ಬೆಲೆ ಬಂದಿರುವ ಕಾರಣ ರೈತರು ಅತಿ ಉತ್ಸಾಹದಿಂದ ಕೊಬ್ಬರಿ ಮಾರಾಟದಲ್ಲಿ ತೊಡಗಿರುವುದು)

ಕಳೆದ ಹಲವಾರು ತಿಂಗಳಿನಿಂದ ನಾಲ್ಕು ನಾಲ್ಕುವರೆ ಸಾವಿರದ ಆಜುಬಾಜಿನಲ್ಲಿದ್ದ ಕೊಬ್ಬರಿ ಕಳೆದ ವಾರದಿಂದ ಏರಿಕೆ ಕಾಣುತ್ತಿದ್ದು ರೈತರು ಅಂತೂ ಇಂತೂ ಸ್ವಲ್ಪವಾದರೂ ಬೆಲೆ ಬಂತಲ್ಲ ಎಂದು ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನದಲ್ಲ್ದಿ ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ. ಅಲ್ಲದೆ, ಮುಂದಿನ ದೀಪಾವಳಿಗೆ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗಬಹುದೆಂಬ ಮಾತು ಕೇಳಿಬರುತ್ತಿದೆ.
ಇದುವರೆಗೂ ಕೊಬ್ಬರಿ ಬೆಲೆ ಏರಿಕೆ ಕಾಣದೆ 4 ಸಾವಿರದ ಆಸು ಪಾಸಿನಲ್ಲಿಯೇ ಗಿರಕಿ ಹೊಡೆಯುತ್ತಿದ್ದರೆ ತೆಂಗಿನ ಕಾಯಿಯನ್ನಂತೂ 4 ರು ಗೆ ಕೇಳುವವರು ಗತಿಯಿರಲಿಲ್ಲ. ಇದರಿಂದ ತೆಂಗು ಬೆಳಯುವ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಭದ್ರಾವತಿ, ಶಿವಮೊಗ್ಗ ರೈತರು ಕಂಗಾಲಾಗಿ ಹೋಗಿದ್ದರು.


ಕೆಲ ದಿನಗಳಿಂದ 1 ಸಾವಿರ ಕಾಯಿಗೆ ಇದ್ದ 4200 ರು. ಈಗ 6 ರಿಂದ 7 ಸಾವಿರ ರು.ಗಳಾಗಿದೆ.ವಾಡಿಕೆಯಂತೆ ಏಣಿಕೆ ಲೆಖ್ಖದಲ್ಲಿ ಸಾವಿರ ಕಾಯಿಗಿಷ್ಟು ಬೆಲೆ ಎಂಬ ಬದಲಿಗೆ ಯಾವುದೆ ಗಾತ್ರದ ಕಾಯಿಯಿರಲಿ ಎಲ್ಲವನ್ನು ಕ್ವಿಂಟಾಲ್ ಲೆಖ್ಖದಲ್ಲಿ ಕೊಳ್ಳುವ ಹೊಸ ಪರಿಪಾಟ ಶುರುವಾಗಿದ್ದು ರೈತರಿಗೆ ಕಾಯಿ ಮಾರುವುದೆ ಲಾಭದಾಯಕ ಎನ್ನುವಂತಾಗಿದೆ. ಕೊಬ್ಬರಿಗಿಂತ ಕಾಯಿಗೆ ಬೆಲೆ ಬರಲು ಶುರುವಾದ್ದರಿಂದ ರೈತರು ಕೊಬ್ಬರಿ ಆಸೆ ಕೈ ಬಿಟ್ಟು ಕಾಯಿಯನ್ನೇ ಮಾರಾಟ ಮಾಡಲು ಮುಂದಾಗುತ್ತಿದ್ದಾರೆ. ಅಲ್ಲದೆ ಕಾಯಿ ಚೂರು 28 ರು.ಗಳನ್ನು ದಾಟಿ 45 ರು.ಗಳಿಗೆ ಬಂದು ನಿಂತಿದೆ.ಇಲ್ಲಿಯವರೆವಿಗೂ 4500 ರು. ಇದ್ದ ಕೊಬ್ಬರಿಗೆ ಬುಧವಾರದ ಅರಸೀಕೆರೆ ಮಾರುಕಟ್ಟೆಯಲ್ಲಿ 5300 ರು. ಬೆಲೆಕಂಡುಬಂದು ಅಂದಿನಿಂದ ಗಣನೀಯವಾಗಿ ಏರಿಕೆಯಾಗುತ್ತಲೆ ಇದೆ . ಕೆ.ಜಿ.ಗೆ ಕೇವಲ 23 ರು.ಗಳಿದ್ದ ಕೌಟಿಗೂ ಸಹ ಭಾರಿ ಡಿಮ್ಯಾಂಡ್ ಬಂದಿದ್ದು 30 ರು.ಗಳಾಗಿದೆ. . ಈಗ ಕೊಬ್ಬರಿಗಿರಲಿ ಕೌಟಿಗೂ ಸಹ ಬಂಪರ್ ಬೆಲೆ ಬಂದಿದ್ದು ರೈತರ ಮೊಗದಲ್ಲಿ ಸಂತಸದ ಚಿಲುಮೆ ಸೃಷ್ಠಿಸಿದೆ.

ಆಮದು ಇಲ್ಲ:ಮುಂಚೆ ನೆರೆ ದೇಶಗಳಾದ ಶ್ರೀಲಂಕ, ಮಲೇಶಿಯ ಮತ್ತಿತರ ಕಡೆಯಿಂದ ಆಮದು ಮಾಡಿಕೊಳ್ಳುತ್ತಿದ್ದನ್ನು ಈಗ ಅನೇಕ ಕಾರಣದಿಂದಾಗಿ ನಿಲ್ಲಿಸಲಾಗಿರುವುದೆ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನತ್ತಾರೆ ಹುಳಿಯಾರು ಮಾರುಕಟ್ಟೆಯ ಪ್ರಮುಖ ಕೊಬ್ಬರಿ ವರ್ತಕ ಚಿಕ್ಕಬಿದರೆಪ್ರದೀಪ್. ಅವರ ಪ್ರಕಾರ ದೇಶದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಅತಿವೃಷ್ಠಿಯಿಂದ ಇಳುವರಿ ಕಡಿಮೆಯಾಗಿದೆ. ಇದೇ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಅತಿಯಾದ ಚಳಿಯಿರುವ ಕಾರಣ ಭಾರಿ ಬೇಡಿಕೆ ಬರುತ್ತಿದೆ. ಪರಿಣಾಮ ರಾಜ್ಯದ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಉತ್ತಮ ಬೆಲೆ ಸಿಗುತ್ತಿದೆ ಎನ್ನುತ್ತಾರೆ.

ಹುಳಿಯಾರು ಎಪಿಎಂಸಿ ನಿರ್ದೇಶಕ ಎಲ್.ಆರ್.ಬಾಲಾಜಿ ಅವರ ಪ್ರಕಾರ ತೆಂಗಿನ ಕಾಯಿ ಯತ್ತೇಚ್ಚವಾಗಿ ಬೇಕರಿ ತಿನಿಸು ಹಾಗೂ ಕಾಯಿ ಪೌಡರ್ ತಯಾರಿಕೆಗೆ ಹೋಗುತ್ತದೆ. ರಾಜ್ಯದಲ್ಲಿ ಕಾಯಿ ಎಣ್ಣೆ ಹಾಗೂ ಕಾಯಿ ಪೌಡರ್ ಕಾರ್ಖನೆಗಳು ಹೆಚ್ಚಾಗಿರುವ ಕಾರಣ ತೆಂಗಿನ ಕಾಯಿಗಿರಲಿ ಚೂರಿಗೂ ಸಹ ಬಂಪರ್ ಬೆಲೆ ಸಿಗುತ್ತಿದೆ. ಇದರಿಂದಾಗಿ ಈಗಾಗಲೇ ಹೊಸದುರ್ಗ, ಶಿರಾ, ಹಿರಿಯೂರು, ಹೊಳಲ್ಕೆರೆ ತಾಲೂಕುಗಳ ರೈತರು ಕೊಬ್ಬರಿ ಮಾಡದೆ ಕಾಯಿಯನ್ನೇ ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಮುಂದಿನ ದೀಪಾವಳಿಗೆ ಕೊಬ್ಬರಿ ಅಭಾವ ಸೃಷ್ಠಿಯಾಗಿ ಬಂಗಾರದ ಬೆಲೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...