ವಿಷಯಕ್ಕೆ ಹೋಗಿ

ಹೀಗೊಂದು ಇಂಗ್ಲೀಷ್ ಅಂಕೆಗಳಿಲ್ಲದ ಸಂಪೂರ್ಣ ಕನ್ನಡಅಂಕಿಗಳ ಕ್ಯಾಲೆಂಡರ್


ವರ್ಷದ ಕೊನೆ ತಿಂಗಳಲ್ಲಿ ಮುಂದಿನ ಹೊಸ ವರ್ಷದ ಕ್ಯಾಲೆಂಡರ್ ಮಾರಾಟದ ಭರಾಟೆ ಬಲು ಜೋರು.ಮುಂಚಿನ ದಿನಗಳಂತೆ ಕೇವಲ ದಿನಾಂಕಗಳಿಗೆ ಒತ್ತು ನೀಡದೆ ಕೆಲವೊಂದು ವಿಶೇಷಗಳ ಸಂಪೂರ್ಣ ಮಾಹಿತಿ ನೀಡುವುದು ಇತ್ತೀಚಿನ ಬೆಳವಣಿಗೆ. ಕೆಲವು ಕ್ಯಾಲೆಂಡರ್ ಗಳಲ್ಲಿ ತಿಂಗಳ ಭವಿಷ್ಯ, ಧಾರ್ಮಿಕ ಆಚರಣೆಗಳ ಮಾಹಿತಿ ಬಗ್ಗೆ ಮಹತ್ವ ನೀಡಿದರೆ ಇನ್ನು ಕೆಲವದರಲ್ಲಿ ನಕ್ಷತ್ರ, ವಾರ ತಿಥಿ, ಮಳೆ ಮುಂತಾದ ವಿಶೇಷ ವಿಷಯಗಳಿಗೆ ಒತ್ತು ನೀಡಲಾಗುತ್ತದೆ. ಬಹುತೇಕ ಕ್ಯಾಲೆಂಡರ್ ಗಳು ರೂಪದರ್ಶಿಗಳ ಹಾಗೂ ದೇವಾನುದೇವತೆಗಳ ಚಿತ್ರಗಳೊಂದಿಗೆ ವಿನ್ಯಾಸಗೊಂಡು ಉಚಿತವಾಗಿ ಹಂಚಲ್ಪಡುತ್ತದೆ. ಆದರೆ ಈ ಎಲ್ಲಾ ಕ್ಯಾಲೆಂಡರುಗಳಲ್ಲಿಯೂ ತಾರೀಖು ಮಾತ್ರ ಇಂಗ್ಲೀಷ್ ಅಂಕಿಗಳಲ್ಲಿ ಮುದ್ರಿಸಲ್ಪಟ್ಟಿರುವುದು ಗಮನಿಸಬೇಕಾದ ಅಂಶ.

ಆದರೆ ಹುಳಿಯಾರಿನ ನಿವೃತ್ತ ಉಪನ್ಯಾಸಕರೂ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತ.ಶಿ.ಬಸವಮೂರತಿ೯ ಅವರು ಇಂಗ್ಲೀಷ್ ಅಂಕೆ ಬಳಕೆ ಮಾಡದೆ ಸಂಪೂರ್ಣ ಕನ್ನಡಮಯ ಕ್ಯಾಲೆಂಡರ್ ಹೊರತಂದಿರುವುದಲ್ಲದೆ ಸಂಪೂರ್ಣವಾಗಿ ಸಾಹಿತ್ಯ ಲೋಕದ ಸ್ಪರ್ಶ ನೀಡಿದ್ದಾರೆ. ಸ್ಪಧಾ೯ತ್ಮಕ ಪರೀಕ್ಷೆಗೆ ನೆರವಾಗುವ ಗೈಡಾಗಿ ಮಾರ್ಪಡಿಸಿದ್ದಾರೆ. ಇಂದಿನ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ. ಕವಿ ಪರಂಪರೆ ಪರಿಚಯಿಸುವ ಕಿರು ಪ್ರಯತ್ನ ಮಾಡಿದ್ದಾರೆ. ಇದರೊಂದಿಗೆ ವಾರ, ತಿಥಿ, ಯೋಗ, ಕರಣ, ನಕ್ಷತ್ರ, ಸಕಾ೯ರಿ ರಜಾ ದಿನಗಳು, ಹಬ್ಬ ಹರಿದಿನಗಳು ಮೊದಲಾದ ಮಾಹಿತಿಯೂ ಇದೆ.

'ಕನ್ನಡ' ಎಂಬ ಹೆಸರಿನ ತಾಲೂಕು ಯಾವ ರಾಜ್ಯದಲ್ಲಿದೆ ಎಂಬುದರಿಂದ ಹಿಡಿದು ಕನ್ನಡದ ಮೊಟ್ಟ ಮೊದಲ ಸಾಮ್ರಾಜ್ಯ ಸ್ಥಾಪಕನ್ಯಾರು, ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈಯವರು ಎಷ್ಟು ಭಾಷೆ ಕಲಿತಿದ್ದರು ,ಕಿಟ್ಟೆಲ್ ನಿಘಂಟಿನಲ್ಲಿ ನಿರುವ ಗಾದೆಗಳು, ಕೈಯಿಂದ ಸಂಬಳ ಕೊಟ್ಟು ಪ್ರಥಮ ಕನ್ನಡ ಶಾಲೆಯನ್ನಾರಂಭಿಸಿದ್ದು ಯಾರು, ಏಲ್ಲಿ ಎಂಬ ಮಾಹಿತಿಯಿಂದ ಮೊದಲ್ಗೊಂಡು ಅನೇಕ ತಿಳಿಯಬೇಕಾದ ಮಾಹಿತಿಗಳಿವೆ.

ರಾಷ್ಟ್ರ ಕವಿಗಳು, ಜ್ಞಾನಪೀಠ ಪುರಸ್ಕೃತರು, ಕನಾ೯ಟಕ ರತ್ನಕ್ಕೆ ಭಾಜನರಾದವರು, ನೃಪತುಂಗ, ನಾಡೋಜ, ಪಂಪ ಪ್ರಶಸ್ತಿ ಪಡೆದವರು, ಕನಾ೯ಟಕ ಏಕೀಕರಣದ ನೇತಾರರು, ಕವಿಗಳ ಕಾವ್ಯನಾಮ ಹಾಗೂ ಅಂಕಿತನಾಮ, ಕನ್ನಡ ಸಂಬಂಧಿಸಿದ ಕೆಲ ಘಟನಾವಳಿಗಳು, ಡಿ.ಎಸ್.ಕಕರ್ಿ, ಕುವೆಂಪು, ಕವಿರಾಜಮಾರ್ಗ, ಪಂಪ ಹೀಗೆ ಅನೇಕ ಕವಿವರ್ಯರ ಕಾವ್ಯದಿಂದ ಆಯ್ದ ಕನ್ನಡಪರ ಘೋಷ ವಾಕ್ಯಗಳು, ಬಸವಣ್ಣ, ಜೇಡರ ದಾಸಿಮಯ್ಯ, ಅಕ್ಕಮಹಾದೇವಿ, ಅಲ್ಲಮಪ್ರಭು ಮುಂತಾದವರ ವಚನಗಳು ಹೀಗೆ ಅಪರೂಪದ ವಿಷಯಗಳನ್ನು ಹೆಕ್ಕಿ ತೆಗೆದು ದಿನದಶಿ೯ಕೆಯಲ್ಲಿ ಕಟ್ಟಿ ಕೊಟ್ಟಿದ್ದಾರೆ.

ಪುಟ ಪುಟವೂ ಸಂಗ್ರಹಯೋಗ್ಯವಾಗಿರುವ ಈ ದಿನದಶಿ೯ಕೆ ಪ್ರತಿಯೊಬ್ಬ ಕನ್ನಡಿಗನ ಮನೆ ಗೋಡೆ ಅಲಂಕರಿಸುವುದು ಅಗತ್ಯ. ಈ ಅಪರೂಪದ ಕ್ಯಾಲೆಂಡರಿಗಾಗಿ ತ.ಶಿ.ಬಸವಮೂತಿ೯, ನಿವೃತ್ತ ಉಪನ್ಯಾಸಕರು, ಕೆಇಬಿ ಮುಂಭಾಗ, ಹುಳಿಯಾರು. ತುಮಕೂರು ಜಿಲ್ಲೆ ದೂರವಾಣಿ ಸಂಖ್ಯೆ 08133-256570 ಕೂಡಲೇ ಸಂಪಕಿ೯ಸಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.