ವಿಷಯಕ್ಕೆ ಹೋಗಿ

ಹೀಗೊಂದು ಇಂಗ್ಲೀಷ್ ಅಂಕೆಗಳಿಲ್ಲದ ಸಂಪೂರ್ಣ ಕನ್ನಡಅಂಕಿಗಳ ಕ್ಯಾಲೆಂಡರ್


ವರ್ಷದ ಕೊನೆ ತಿಂಗಳಲ್ಲಿ ಮುಂದಿನ ಹೊಸ ವರ್ಷದ ಕ್ಯಾಲೆಂಡರ್ ಮಾರಾಟದ ಭರಾಟೆ ಬಲು ಜೋರು.ಮುಂಚಿನ ದಿನಗಳಂತೆ ಕೇವಲ ದಿನಾಂಕಗಳಿಗೆ ಒತ್ತು ನೀಡದೆ ಕೆಲವೊಂದು ವಿಶೇಷಗಳ ಸಂಪೂರ್ಣ ಮಾಹಿತಿ ನೀಡುವುದು ಇತ್ತೀಚಿನ ಬೆಳವಣಿಗೆ. ಕೆಲವು ಕ್ಯಾಲೆಂಡರ್ ಗಳಲ್ಲಿ ತಿಂಗಳ ಭವಿಷ್ಯ, ಧಾರ್ಮಿಕ ಆಚರಣೆಗಳ ಮಾಹಿತಿ ಬಗ್ಗೆ ಮಹತ್ವ ನೀಡಿದರೆ ಇನ್ನು ಕೆಲವದರಲ್ಲಿ ನಕ್ಷತ್ರ, ವಾರ ತಿಥಿ, ಮಳೆ ಮುಂತಾದ ವಿಶೇಷ ವಿಷಯಗಳಿಗೆ ಒತ್ತು ನೀಡಲಾಗುತ್ತದೆ. ಬಹುತೇಕ ಕ್ಯಾಲೆಂಡರ್ ಗಳು ರೂಪದರ್ಶಿಗಳ ಹಾಗೂ ದೇವಾನುದೇವತೆಗಳ ಚಿತ್ರಗಳೊಂದಿಗೆ ವಿನ್ಯಾಸಗೊಂಡು ಉಚಿತವಾಗಿ ಹಂಚಲ್ಪಡುತ್ತದೆ. ಆದರೆ ಈ ಎಲ್ಲಾ ಕ್ಯಾಲೆಂಡರುಗಳಲ್ಲಿಯೂ ತಾರೀಖು ಮಾತ್ರ ಇಂಗ್ಲೀಷ್ ಅಂಕಿಗಳಲ್ಲಿ ಮುದ್ರಿಸಲ್ಪಟ್ಟಿರುವುದು ಗಮನಿಸಬೇಕಾದ ಅಂಶ.

ಆದರೆ ಹುಳಿಯಾರಿನ ನಿವೃತ್ತ ಉಪನ್ಯಾಸಕರೂ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ತ.ಶಿ.ಬಸವಮೂರತಿ೯ ಅವರು ಇಂಗ್ಲೀಷ್ ಅಂಕೆ ಬಳಕೆ ಮಾಡದೆ ಸಂಪೂರ್ಣ ಕನ್ನಡಮಯ ಕ್ಯಾಲೆಂಡರ್ ಹೊರತಂದಿರುವುದಲ್ಲದೆ ಸಂಪೂರ್ಣವಾಗಿ ಸಾಹಿತ್ಯ ಲೋಕದ ಸ್ಪರ್ಶ ನೀಡಿದ್ದಾರೆ. ಸ್ಪಧಾ೯ತ್ಮಕ ಪರೀಕ್ಷೆಗೆ ನೆರವಾಗುವ ಗೈಡಾಗಿ ಮಾರ್ಪಡಿಸಿದ್ದಾರೆ. ಇಂದಿನ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ. ಕವಿ ಪರಂಪರೆ ಪರಿಚಯಿಸುವ ಕಿರು ಪ್ರಯತ್ನ ಮಾಡಿದ್ದಾರೆ. ಇದರೊಂದಿಗೆ ವಾರ, ತಿಥಿ, ಯೋಗ, ಕರಣ, ನಕ್ಷತ್ರ, ಸಕಾ೯ರಿ ರಜಾ ದಿನಗಳು, ಹಬ್ಬ ಹರಿದಿನಗಳು ಮೊದಲಾದ ಮಾಹಿತಿಯೂ ಇದೆ.

'ಕನ್ನಡ' ಎಂಬ ಹೆಸರಿನ ತಾಲೂಕು ಯಾವ ರಾಜ್ಯದಲ್ಲಿದೆ ಎಂಬುದರಿಂದ ಹಿಡಿದು ಕನ್ನಡದ ಮೊಟ್ಟ ಮೊದಲ ಸಾಮ್ರಾಜ್ಯ ಸ್ಥಾಪಕನ್ಯಾರು, ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈಯವರು ಎಷ್ಟು ಭಾಷೆ ಕಲಿತಿದ್ದರು ,ಕಿಟ್ಟೆಲ್ ನಿಘಂಟಿನಲ್ಲಿ ನಿರುವ ಗಾದೆಗಳು, ಕೈಯಿಂದ ಸಂಬಳ ಕೊಟ್ಟು ಪ್ರಥಮ ಕನ್ನಡ ಶಾಲೆಯನ್ನಾರಂಭಿಸಿದ್ದು ಯಾರು, ಏಲ್ಲಿ ಎಂಬ ಮಾಹಿತಿಯಿಂದ ಮೊದಲ್ಗೊಂಡು ಅನೇಕ ತಿಳಿಯಬೇಕಾದ ಮಾಹಿತಿಗಳಿವೆ.

ರಾಷ್ಟ್ರ ಕವಿಗಳು, ಜ್ಞಾನಪೀಠ ಪುರಸ್ಕೃತರು, ಕನಾ೯ಟಕ ರತ್ನಕ್ಕೆ ಭಾಜನರಾದವರು, ನೃಪತುಂಗ, ನಾಡೋಜ, ಪಂಪ ಪ್ರಶಸ್ತಿ ಪಡೆದವರು, ಕನಾ೯ಟಕ ಏಕೀಕರಣದ ನೇತಾರರು, ಕವಿಗಳ ಕಾವ್ಯನಾಮ ಹಾಗೂ ಅಂಕಿತನಾಮ, ಕನ್ನಡ ಸಂಬಂಧಿಸಿದ ಕೆಲ ಘಟನಾವಳಿಗಳು, ಡಿ.ಎಸ್.ಕಕರ್ಿ, ಕುವೆಂಪು, ಕವಿರಾಜಮಾರ್ಗ, ಪಂಪ ಹೀಗೆ ಅನೇಕ ಕವಿವರ್ಯರ ಕಾವ್ಯದಿಂದ ಆಯ್ದ ಕನ್ನಡಪರ ಘೋಷ ವಾಕ್ಯಗಳು, ಬಸವಣ್ಣ, ಜೇಡರ ದಾಸಿಮಯ್ಯ, ಅಕ್ಕಮಹಾದೇವಿ, ಅಲ್ಲಮಪ್ರಭು ಮುಂತಾದವರ ವಚನಗಳು ಹೀಗೆ ಅಪರೂಪದ ವಿಷಯಗಳನ್ನು ಹೆಕ್ಕಿ ತೆಗೆದು ದಿನದಶಿ೯ಕೆಯಲ್ಲಿ ಕಟ್ಟಿ ಕೊಟ್ಟಿದ್ದಾರೆ.

ಪುಟ ಪುಟವೂ ಸಂಗ್ರಹಯೋಗ್ಯವಾಗಿರುವ ಈ ದಿನದಶಿ೯ಕೆ ಪ್ರತಿಯೊಬ್ಬ ಕನ್ನಡಿಗನ ಮನೆ ಗೋಡೆ ಅಲಂಕರಿಸುವುದು ಅಗತ್ಯ. ಈ ಅಪರೂಪದ ಕ್ಯಾಲೆಂಡರಿಗಾಗಿ ತ.ಶಿ.ಬಸವಮೂತಿ೯, ನಿವೃತ್ತ ಉಪನ್ಯಾಸಕರು, ಕೆಇಬಿ ಮುಂಭಾಗ, ಹುಳಿಯಾರು. ತುಮಕೂರು ಜಿಲ್ಲೆ ದೂರವಾಣಿ ಸಂಖ್ಯೆ 08133-256570 ಕೂಡಲೇ ಸಂಪಕಿ೯ಸಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...