ವಿಷಯಕ್ಕೆ ಹೋಗಿ

ಚಿನಾಹಳ್ಳಿ ತಾಲ್ಲೂಕಿಗೆ ಹೇಮೆ:102.60 ಕೋಟಿ ಅಂದಾಜು ವೆಚ್ಚದಲ್ಲಿ 26 ಕೆರೆಗೆ ನೀರು

ಚಿನಾಹಳ್ಳಿ ತಾಲ್ಲೂಕಿಗೆ ಹೇಮೆ:102.60 ಕೋಟಿ ಅಂದಾಜು ವೆಚ್ಚದಲ್ಲಿ 26 ಕೆರೆಗೆ ನೀರು
---------------------------------------------
ಸಚಿವರಿಂದ ಬೋರನಕಣೆವೆಗೂ ನೀರು ಹರಿಸುವ ಭರವಸೆ
-------------------------------------
ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕುಡಿಯುವ ನೀರು ಯೋಜನೆಗಾಗಿ ಕಾವೇರಿ ನೀರಾವರಿ ನಿಗಮದಿಂದ 102.60ಕೋಟಿ ವೆಚ್ಚದಲ್ಲಿ ಸಲ್ಲಿಸಲಾಗಿರುವ ಪ್ರಸ್ತಾವನೆಯನ್ನು ಸಕಾ೯ರ ಒಪ್ಪಿ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ಯೋಜನೆ ಅನುಷ್ಠನಗೊಳಿಸುವ ಉದ್ದೇಶ ಸಕಾ೯ರದಲ್ಲಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ತಲ್ಲೂಕಿನ ಕುಡಿಯುವ ನೀರಿವ ಸಮಸ್ಯೆ ಪ್ರಸ್ತಾವನೆಯಾಗಿದ್ದರ ಬಗ್ಗೆ ಪತ್ರಿಕೆಗೆ ಮಾಹಿತಿ ನೀಡಿದ ಅವರು ತಾವು ತಾಲ್ಲೂಕಿನ ಸಾಸಲು,ಪೆಮ್ಮಲದೇವರಹಳ್ಳಿ,ಶೆಟ್ಟಿಕೆರೆ ಮುಖಾಂತರ ಸಾಲು ಕೆರೆಗಳ ಮೂಲಕ ಬೋರನಕಣೆವೆ ಜಲಾಶಯಕ್ಕೆ ನೀರು ಹರಿಸುವ ಯೋಜನೆ ಬಗ್ಗೆ ಪ್ರಶ್ನಿಸಿದಕ್ಕೆ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿಯವರು ನೀಡಿದ ಉತ್ತರ ಒಟ್ಟಾರೆ ತೃಪ್ತಿದಾಯಕವಾಗಿದೆ ಎಂದರು.
ನೀರಿನ ಅಲಭ್ಯತೆ ಹಾಗೂ ಕೆಲವೊಂದು ತಾಂತ್ರಿಕ ಕಾರಣದಿಂದ ಉದ್ದೇಶಿತ ಯೋಜನೆಯಲ್ಲಿ ಬೋರನಕಣಿವೆ ಕೈ ಬಿಡಲಾಗಿದ್ದು ಇದನ್ನು ಹೊರತುಪಡಿಸಿದರೆ ತಾಲ್ಲೂಕಿನ 26 ಕೆರೆಗಳಲ್ಲಿ 22 ಕೆರೆಗಳಿಗೆ ನೈಸಗಿ೯ಕ ಕಾಲುವೆ ಮುಖಾಂತರ ಹಾಗು 4 ಕೆರೆಗಳಿಗೆ ಏತ ನೀರಾವರಿ ಮುಖಾಂತರ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಯೋಜನೆಯಿಂದ ಬೋರನಕಣಿವೆ ಕೈ ಬಿಟ್ಟಿರುವುದರಿಂದಾಗುವ ಆಗಬಹುದಾದ ಅನಾನುಕೂಲ ಹಾಗೂ ಸಾಧಕಭಾದಕಗಳ ಬಗ್ಗೆ ತಾವು ಆ ಕೂಡಲೆ ಸಚಿವರಿಗೆ ಮನವರಿಕೆ ಮಾಡಿದಲ್ಲದೆ ಉದ್ದೇಶಿತ ಯೋಜನೆಯಲ್ಲೆ ಬೋರನಕಣಿವೆ ಜಲಾಶಯಕ್ಕೆ ನೀರು ಹರಿಸಲು ಕಾರ್ಯಯೋಜನೆ ರೂಪಿಸಬೇಕೆಂದು ಸದನದಲ್ಲೆ ಒತ್ತಾಯಿಸಿರುವುದಾಗಿ ತಿಳಿಸಿದರು.

ಬೋರನಕಣಿವೆಗೆ ನೀರು ಹರಿಸುವ ಕುರಿತಂತೆ ಹುಳಿಯಾರು ಭಾಗದಲ್ಲಿ ವಷಾ೯ತರಗಳಿಂದ ನಡೆಯುತ್ತಿರುವ ಪ್ರತಿಭಟನೆ,ವಿಧಾನಸೌಧದಲ್ಲೆ
ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುರೇಶ್ ಕುಮಾರ್ ರವರೊಂದಿಗೆ ತಾವು ನಡೆಸಿದ ಮಾತುಕಥೆಯನ್ನು ವಿವರಿಸಿದ್ದರ ಹಿನ್ನಲೆಯಲ್ಲಿ ಸಚಿವರು ಬೋರನಕಣಿವೆಗೂ ನೀರು ಹರಿಸುವ ಭರವಸೆ ನೀಡಿದ್ದಾರೆ ಎಂದರು.ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನಗೊಳ್ಳುವವರೆಗೂ ಮತ್ತು ಉದ್ದೇಶಿತ ಯೋಜನೆಯಲ್ಲೆ ನೀರು ಹರಿಸುವವರೆಗೂ ತಾವೂ ವಿಶ್ರಮಿಸುವುದಿಲ್ಲವೆಂದು ಈ ಸಂದರ್ಭದಲ್ಲಿ ಸ್ಪಷ್ಠಪಡಿಸಿದರು.
ಅಭಿನಂದನೆ:ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಶಾಶ್ವತ ಯೋಜನೆ ರೂಪಿಸಿ ಯೋಜನೆ ಅನುಷ್ಠಾನಗೊಳ್ಳಲು ಕಾರಣಕರ್ತರಾದ ಶಾಸಕ ಸಿ.ಬಿ.ಸುರೇಶ್ ಬಾಬು,ಸಮಸ್ಯೆ ಅರಿತು ಒಪ್ಪಿಗೆ ನೀಡಿದ ನೀರು ಹರಿಸಲು 102.60ಕೋಟಿ ಮೀಸಲಿಟ್ಟಿರುವ ಜಲ ಸಂಪನ್ಮೂಲ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಲ್ಲಿನ ಸಮಸ್ಯಗೆ ಸ್ಪಂದಿಸಿದ ಸಚಿವ ಸುರೇಶ್ ಕುಮಾರ್ ಅಲ್ಲದೆ ಸುಮಾರು 50ಕ್ಕೂ ಹೆಚ್ಚು ಸಂಘಟನೆಗಳ ನೇತೃತ್ವದಲ್ಲಿ ತಿಂಗಳುಗಟ್ಟಲೆ ಹೋರಾಟ ನಡೆಸಿದ ರೈತಸಂಘದ ಕಾರ್ಯಕರ್ತರುಗಳು,ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರನ್ನೂ ಹುಳಿಯಾರು ಹೋಬಳಿ ಜಾತ್ಯಾತೀತ ಜನತದಳ ಅಭಿನಂದಿಸಿದೆ.

ಈ ಕುರಿತು ಜಿಪಂ ಸದಸ್ಯೆ ಮಂಜುಳಾ ಗವಿರಂಗಯ್ಯ,ತಾಪಂ ಉಪಾಧ್ಯಕ್ಷೆ ಬೀಬಿಪಾತಿಮಾ,ಗ್ರಾಪಂ ಅಧ್ಯಕ್ಷ ಸೈ ಅನ್ಸರ್ ಅಲಿ,ತಾಪಂ ಸದಸ್ಯರಾದ ಕವಿತಾಪ್ರಕಾಶ್,ಮುಖಂಡರುಗಳಾದ ವಕೀಲ ರಮೇಶ್ ಬಾಬು,ಪ್ರಸನ್ನಕುಮಾರ್,ಅಹ್ಮದ್ ಖಾನ್,ಸೈಯದ್ ಜಲಾಲ್,ನಂದಿಹಳ್ಳಿ ಶಿವಣ್ಣ,ಡಿಶ್ ಬಾಬು ಮುಂತಾದವರು ಪತ್ರಿಕಾಹೇಳಕೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...