ವಿಷಯಕ್ಕೆ ಹೋಗಿ

ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ನಲ್ಲಿ ವಿಜಯಮಾಲೆ ಧರಿಸಿದ ಕರ್ನಾಟಕ ತಂಡ

ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ನಲ್ಲಿ ವಿಜಯಮಾಲೆ ಧರಿಸಿದ ಕರ್ನಾಟಕ ತಂಡ

-----------------------------------------------------------------------------


ಹೈದರಾಬಾದ್ ನ ಬಾಲನಗರದ ಎಚ್.ಎ.ಎಲ್ ಗ್ರೌಂಡ್ ನಲ್ಲಿ ನಡೆದ 57ನೇ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಆತೀಥೆಯ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ವಿಜಯಮಾಲೆಯನ್ನು ತನ್ನ ಮಡಿಲಿಗೆ ಹಾಕಿಕೊಂಡು 3ನೇ ಬಾರಿಗೆ ರಾಷ್ಟ್ರೀಯ ಚಾಂಪಿಯನ್ ಆಗಿರುವ ಕರ್ನಾಟಕ ರಾಜ್ಯದ ಪುರುಷರ ಸೀನಿಯರ್ಸ್ ತಂಡ.

ಹೈದರಾಬಾದ್ ನ ಬಾಲನಗರದ ಎಚ್.ಎ.ಎಲ್ ಗ್ರೌಂಡ್ ನಲ್ಲಿ ಕಳೆದ ಜನವರಿ 10 ರಿಂದ 17ರವರೆಗೆ ನಡೆದ 57ನೇ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯದ ಪುರುಷರ ಸೀನಿಯರ್ಸ್ ತಂಡ ಆತೀಥೆಯ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ವಿಜಯಮಾಲೆಯನ್ನು ತನ್ನ ಮಡಿಲಿಗೆ ಹಾಕಿಕೊಂಡು 3ನೇ ಬಾರಿಗೆ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.


ಜನವರಿ 10ರಿಂದ 13ರವರೆಗೆ ಪುರುಷ ಹಾಗೂ ಮಹಿಳೆಯರ ಸೀನಿಯರ್ಸ್ ವಿಭಾಗ ಹಾಗೂ ಜ.14 ರಿಂದ 17ರವರೆಗೆ ಜೂನಿಯರ್ಸ್ ವಿಭಾಗಕ್ಕೆ ನಡೆದ ಟೂರ್ನಿಯಲ್ಲಿ 26 ರಾಜ್ಯದ 800 ಜನ ಕ್ರೀಡಾಪಟುಗಳು ಭಾಗವಹಿಸಿದ್ದರು.ಪ್ರಾರಂಭದಿಂದಲೂ ಕರ್ನಾಟಕ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದು,ಲೀಗ್ ಪಂದ್ಯದಲ್ಲಿ ಚತ್ತೀಸ್ ಘಡ್,ಚಂಡೀಘಡ್,ಬಿಹಾರ ಹಾಗೂ ಮಹಾರಾಷ್ಟ್ರ ತಂಡಗಳನ್ನು ಮಣಿಸಿ,ಕ್ವಾಟರ್ ಫೈನಲ್ ನಲ್ಲಿ ಕೇರಳ ತಂಡದ ವಿರುದ್ದ ಜಯಿಸಿತು.ಜ.12ರಂದು ನಡೆದ ಸೆಮಿಫೈನಲ್ ನಲ್ಲಿ ತಮಿಳಿನಾಡು ತಂಡವನ್ನು 29-28,29-19ರ ನೇರ ಸೆಟ್ ನಲ್ಲಿ ಸೋಲಿಸಿ ಫೈನಲ್ ಪ್ರವೇಶಿಸಿತು.ಜ.13ರಂದು ನಡೆದ ಹೊನಲು ಬೆಳಕಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡದ ಎದುರು 29-24,29-06ರ ನೇರ ಸೆಟ್ ಗಳಲ್ಲಿ ಜಯಿಸಿ ವಿಜಯಮಾಲೆಯನ್ನು ತನ್ನ ಮುಡಿಗೇರಿಸಿಕೊಂಡಿದೆ.



ಟೂರ್ನಿಯಲ್ಲಿ ಕರ್ನಾಟಕದ ಪುರುಷರ ತಂಡಕ್ಕೆ ಶ್ರೀರಂಗಪಟ್ಟಣದ ಎಸ್.ಜಿ.ವೆಂಕಟರಾಮನ್ ನಾಯಕತ್ವವಹಿಸಿದ್ದು, ಹುಳಿಯಾರು ಕೆನರಾಬ್ಯಾಂಕ್ ನ ಎಚ್.ಎಲ್.ಸತೀಶ್,ಭದ್ರಾವತಿಯ ಜಗನ್ನಾಥ್,ದೊಡ್ಡಬಳ್ಳಾಪುರದ ಕಿರಣ್ ಕುಮಾರ್,ಬೆಂಗಳೂರು ಕೆನರಾಬ್ಯಾಂಕಿನ ಮಹದೇವ್, ಸುದರ್ಶನ್.ಬಿ, ಹಾಗೂ ಗಿರಿ ಪ್ರಸಾದ್ ,ತುಮಕೂರಿನ ಎಸ್.ದಿವಾಕರ್,ದಾವಣಗೆರೆಯ ಕುಮಾರ್ ಸ್ವಾಮಿ, ಬೆಂಗಳೂರಿನ ವಿಜಯ್ ಕುಮಾರ್ ಭಾಗವಹಿಸಿದ್ದ ತಂಡದಲ್ಲಿ ಎಸ್.ನರೇಂದ್ರ್ರ ಕೋಚ್ ಹಾಗೂ ಆರ್.ಶಿವಣ್ಣ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದರು.



ಕರ್ನಾಟಕದ ಪುರುಷರ ತಂಡವು ಈ ಮೊದಲು 2006-2007 ಪ್ರಥಮವಾಗಿ ಹಾಗೂ 2007-2008ರಲ್ಲಿ ದ್ವಿತೀಯ ಬಾರಿಗೆ ಪ್ರಶಸಿಯನ್ನು ಪಡೆದಿದ್ದು,ನಂತರ ಮೂರುವರ್ಷಗಳ ತರುವಾಯ ಮತ್ತೊಮ್ಮೆ ಕಠಿಣ ಪರಿಶ್ರಮದಿಂದಾಗಿ 3ನೇ ಬಾರಿ ಹೈದರಾಬಾದ್ ನಲ್ಲಿ ನಡೆದ ರಾಷ್ಟ್ರೀಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.


ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ನ ಛೇರ್ಮನ್ ರಾಜಶೇಖರ್,ಪ್ರಖ್ಯಾತ ಚಿತ್ರನಟ ಪವರ್ ಸ್ಟಾರ್ ಪವನ್ ಕಲ್ಯಾಣ್,ನಟ ಶಿವಾಜಿ ಅವರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಟೂನರ್ಿಯಲ್ಲಿ ಉತ್ತಮ ಕ್ರೀಡಾಪಟುಗೆ ನೀಡುವ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಯನ್ನು ಕರ್ನಾಟಕ ಪುರುಷರ ತಂಡದ ಶ್ರೀರಂಗಪಟ್ಟಣದ ಎಸ್.ಜಿ.ವೆಂಕಟರಾಮನ್ ಹಾಗೂ ತುಮಕೂರಿನ ದಿವಾಕರ್ ಅವರಿಗೆ ಪ್ರದಾನ ಮಾಡಲಾಯಿತು.



ಪ್ರಶಸ್ತಿಯನ್ನು ಪಡೆದ ಕರ್ನಾಟಕ ತಂಡದ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ನ ಕ್ರೀಡಾಪಟು ಎಚ್.ಎಲ್.ಸತೀಶ್ ಪತ್ರಿಕೆಯೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡು,ಹುಳಿಯಾರಿನಲ್ಲಿ ನಡೆದ ಫಿಟ್ ನೆಸ್ ಕ್ಯಾಂಪ್ ಆಟಗಾರರ ಸದೃಡತೆಗೆ ನೆರವಾಯಿತು. ಹುಳಿಯಾರಿನಲ್ಲಿ ಒಂದುವಾರಗಳ ಕಾಲ ನಡೆದ ಆಯ್ಕೆ ಶಿಬಿರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಆಟಗಾರರಲ್ಲಿನ ಪ್ರತಿಭೆಯನ್ನು ಗುರ್ತಿಸಲು ಶಿಬಿರ ನಡೆಸಲು ನೆರವಾದ ಸುಶೀಲಮ್ಮ ಮೈನ್ಸ್ ಹಾಗೂ ಕ್ರಿಯಾಶೀಲಾ ಕ್ರೀಡಾ ಸಂಸ್ಥೆಯ ನರೇಂದ್ರಬಾಬು,ಸೀತಾರಾಮ ಪ್ರತಿಷ್ಠಾನದ ವಿಶ್ವನಾಥ್ ಮತ್ತು ರಂಗನಾಥ ಪ್ರಸಾದ್,ವಾಸವಿ ಸಂಸ್ಥೆಯ ಲಕ್ಷ್ಮಿಕಾಂತ್,ಚಂದ್ರಶೇಖರ್ ಹಾಗೂ ರೋಟರಿ ಸಂಸ್ಥೆಯ ಮಂಜುನಾಥ ಗುಪ್ತ ಅವರ ಸಹಕಾರಕ್ಕೆ ನಾವೆಲ್ಲರೂ ಆಬಾರಿಯಾಗಿದ್ದೇವೆ ಎಂದರು. ಬಾಲ್ ಬ್ಯಾಡ್ಮಿಂಟನ್ ಕ್ರೀಡೆ ಕಲಾತ್ಮಕ ಕ್ರೀಡೆಯಾಗಿದ್ದರೂ ಸಹ ಕೇವಲ ದಕ್ಷಿಣ ಭಾರತದ ಕ್ರೀಡೆ ಎಂಬ ನೆಪದಿಂದ ಪ್ರಚಾರದಿಂದ ಹೊರಗುಳಿದಿದೆ. ಈ ಕ್ರೀಡೆ ದಕ್ಷಿಣಭಾರತಕ್ಕೆ ಸೀಮಿತವಾಗಿರದೇ ಇಡೀ ದೇಶದ ಕ್ರೀಡೆಯಾಗುವಂತೆ ಮಾಡುವ ಗುರಿ ನಮ್ಮದಾಗಿದೆ ಎಂದರು. ಮಾದ್ಯಮಗಳಲ್ಲಿ ಇತರೆ ಕ್ರೀಡೆಗಳಿಗೆ ದೊರೆಯುವಷ್ಟು ಪ್ರಚಾರ ಈ ಕ್ರೀಡೆಗೆ ಸಿಗದಿರುವುದಕ್ಕೆ ಬೇಸಕ ವ್ಯಕ್ತಪಡಿಸಿದ ಅವರು ಇನ್ನಾದರೂ ಸಹ ಮಾದ್ಯಮಗಳು ಸಾಕಷ್ಟು ಪ್ರಚಾರ ನೀಡಿದಲ್ಲಿ ಹೆಚ್ಚನ ಕ್ರೀಡಾಪಟುಗಳು ಆಸಕ್ತಿವಹಿಸುವ ಮೂಲಕ ಇನ್ನಷ್ಟೂ ಸಾಧನೆಗೈಯಬಹುದೆಂದ ಅಭಿಪ್ರಾಯ ವ್ಯಕ್ತಪಡಿಸಿದರು.



ಈ ಟೂರ್ನಿಯಲ್ಲಿ ಕರ್ನಾಟಕದ ಸೀನಿಯರ್ಸ್ ಪುರುಷರ ತಂಡ ಮೊದಲ ಸ್ಥಾನ ಪಡೆದರೆ,ಫೈನಲ್ ಪ್ರವೇಶಿಸಿದ್ದ ಸೀನಿಯರ್ಸ್ ಮಹಿಳೆಯರ ತಂಡ ಕೂಡ ಫೈನಲ್ ಪ್ರವೇಶಿಸಿದ್ದರೂ ತಮಿಳುನಾಡು ತಂಡದ ವಿರುದ್ದ 29-24,29-26ರ ನೇರ ಸೆಟ್ ನ ಸಮೀಪದಲ್ಲಿ ಪರಾಭವಗೊಂಡು ದ್ವಿತೀಯ ಸ್ಥಾನಪಡೆದುಕೊಂಡಿದೆ.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.