ವಿಷಯಕ್ಕೆ ಹೋಗಿ

ಸಮಾಜದಲ್ಲಿ ನಾನು,ನನ್ನದು ಎನ್ನುವುದಕ್ಕಿಂತ ನಾವು,ನಮ್ಮದು ಎಂದು ಬಾಳಿ : ಸಾ.ಚಿ.ನಾಗೇಶ್

ಹುಳಿಯಾರಿನ ಕನಕದಾಸ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಸಂಜೆ ನಡೆದ ಶಾಲಾವಾರ್ಷಿಕೋತ್ಸವ ಸಮಾರಭದಲ್ಲಿ ಮಕ್ಕಳು ಪ್ರದರ್ಶಿಸಿದ ಶಿವತಾಂಡವ ನೃತ್ಯದ ನೋಟ ನೋಡುಗರ ಕಣ್ಮನಸೆಳೆಯಿತು.


ಸಮಾಜದಲ್ಲಿ ನಾನು.ನನ್ನದು ಎಂದು ಸ್ವಾರ್ಥ ಜೀವನ ನಡೆಸುವುದಕ್ಕಿಂತ ನಾವು,ನಮ್ಮದು ಎಂಬ ಮನೋಭಾವನೆ ಬೆಳೆಸಿಕೊಂಡು ಬಾಳಬೇಕೆಂದು ಚಿ.ನಾ.ಹಳ್ಳಿ ಕ್ಷೇತ್ರಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್ ತಿಳಿಸಿದರು.

ಹುಳಿಯಾರಿನ ಕನಕದಾಸ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ 2011-12ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದ ಅವರು ಮಾತನಾಡಿದರು.


ನಮ್ಮ ಮಾನವ ಜನ್ಮ ಎಲ್ಲದಕ್ಕಿಂತಲೂ ಅಮೂಲ್ಯವಾದ್ದು,ಅದಕ್ಕಾಗಿ ನಾವು ಸಮಾಜದಲ್ಲಿ ಮಾನವೀಯ ಗುಣಗಳನ್ನು,ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು,ಇತರರಿಗೆ ನೋವುಂಟುಮಾಡದಂತೆ ಸಹಬಾಳ್ವೆಯಿಂದ ಜೀವಿಸಬೇಕಿದೆ ಎಂದರು. ಅಲ್ಲದೆ ಮುಂದಿನ 77ದಿನಗಳಲ್ಲಿ 10ನೇ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು,ಇನ್ನಾದರೂ ಕಠಿಣ ಪರಿಶ್ರಮದಿಂದ ಓದಿ,ಶಾಲೆಗೆ,ಪೋಷಕರಿಗೆ ಕೀರ್ತಿ,ಯಶಸ್ಸನ್ನು ತನ್ನಿ ಎಂದು ಮಕ್ಕಳಿಗೆ ಹಾರೈಸಿದರು.


ಚಿ.ನಾ.ಹಳ್ಳಿ ಪ್ರಾಚಾರ್ಯ ಸಂಘದ ಕಾರ್ಯದರ್ಶಿಗಳಾದ ಕರಿಸಿದ್ದಪ್ಪನವರು ಮಾತನಾಡಿ ಪ್ರತಿಯೊಂದು ಶಾಲೆಗಳಲ್ಲೂ ಚರ್ಚಾಸ್ಪರ್ಧೆ,ರಸಪ್ರಶ್ನೆ, ಆಟೋಟಗಳು,ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಇನ್ನೂ ಮುಂತಾದ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಮಕ್ಕಳಲ್ಲಿ ಸಹಕಾರ,ಒಗ್ಗೂಡುವಿಕೆ,ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತಿವೆ.ಅಲ್ಲದೆ ಮಕ್ಕಳು ತಮ್ಮ ಪ್ರತಿಭೆಯನ್ನು ತೋರ್ಪಡಿಸವ ಒಂದು ವೇದಿಕೆಯೇ ಶಾಲಾವಾರ್ಷಿಕೋತ್ಸವವಾಗಿದೆ ಎಂದರು.ಗ್ರಾ.ಪಂ.ಸದಸ್ಯ ರಂಗನಾಥ್ ಮಾತನಾಡಿ ನಾನು ಸಹ ಈ ಶಾಲೆಯ ಹಳೆವಿದ್ಯಾರ್ಥಿಯಾಗಿದ್ದು,ಇಲ್ಲಿ ಉತ್ತಮ ರೀತಿಯಲ್ಲಿ ಪಾಠಪ್ರವಚನಗಳು ನಡೆಯುತ್ತವೆ.ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಸಹಪಾಠಿಗಳು ವಿವಿಧ ಸರ್ಕಾರಿ,ಉನ್ನತ ಹುದ್ದೆಗಳಲ್ಲಿದ್ದಾರೆ ಎಂದರು.


ಸಮಾರಂಭದಲ್ಲಿ ಸಹ ಶಿಕ್ಷಕ ಎಸ್.ಚನ್ನಬಸಪ್ಪ 2011-12ನೇ ಸಾಲಿನ ಶಾಲಾವರದಿಯನ್ನು ಮಂಡಿಸಿ, ನಂತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚೆಕ್ ವಿತರಿಸುವ ಮೂಲಕ ಅವರನ್ನು ಸನ್ಮಾನಿಸಲಾಯಿತು.


ಕನಕದಾಸ ವಿದ್ಯಾಸಂಸ್ಥೆಯ ಗೌರವ ಸದಸ್ಯರಾದ ಮೈಲಾರಪ್ಪ ಅಧ್ಯಕ್ಷತೆವಹಿಸಿದ್ದ ಸಮಾರಂಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಆಂಜನೇಯ,ಸಂಸ್ಥೆಯ ಅಧ್ಯಕ್ಷೆ ದ್ರಾಕ್ಷಾಯಣಮ್ಮ, ಕಾರ್ಯದರ್ಶಿ ಶಿವಕುಮಾರ್, ಗ್ರಾ.ಪಂ.ಸದಸ್ಯ ಶಿವಕುಮಾರ್, ಕೆಂಚಮ್ಮ, ಸಿ.ಆರ್.ಪಿ.ಮಹಲಿಂಗಣ್ಣ,ಮುಖ್ಯಶಿಕ್ಷಕ ಕೃಷ್ಣಪ್ಪ ಸೆರಿದಂತೆ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...