ವಿಷಯಕ್ಕೆ ಹೋಗಿ

ಇಂದಿನ ಯುಜಜನತೆಯಲ್ಲಿ ಏಡ್ಸ್ ಬಗ್ಗೆ ಜಾಗೃತಿ ಮೂಡಬೇಕಿದೆ

ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್,ರಾಜ್ಯ ಏಡ್ಸ್ ಪ್ರಿವೆನ್ಸ್ ನ್ ಸಂಸ್ಥೆ,ಕಾಲೇಜಿನ ಎನ್.ಎಸ್.ಎಸ್. ಘಟಕವರು ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಧ್ಯಪಕ ಮಾ.ಚಿ. ಕೈಲಾಸನಾಥ್ ಮಾತನಾಡಿದರು.ಡಾರಜನೀಶ್ ಬಾಬು,ಪ್ರಾಂಶುಪಾಲ ಎಂ.ಎನ್.ನಾಗರಾಜು, ಡಾಜಯಶೀಲಾ ಇದ್ದಾರೆ.


ಇಂದಿನ ದಿನಗಳಲ್ಲಿ ಏಡ್ಸ್ ಎಂಬ ಮಹಾಮಾರಿ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿರುವುದು ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಹಾಗೂ ಯುವಜನತೆಯಲ್ಲಿ, ಅದಕ್ಕಾಗಿ ಏಡ್ಸ್ ಬಗ್ಗೆ ಯುವಜನತೆಯಲ್ಲಿ ಜಾಗೃತಿಯನ್ನು ಮೂಡಿಸಬೇಕಿದೆ ಎಂದು ಚಿ.ನಾ.ಹಳ್ಳಿಯ ನಿವೃತ್ತ ಪ್ರಾಧ್ಯಪಕ ಮಾ.ಚಿ. ಕೈಲಾಸನಾಥ್ ಆಭಿಪ್ರಾಯಪಟ್ಟರು.

ಹೋಬಳಿಯ ಹುಳಿಯಾರು-ಕೆಂಕರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್,ರಾಜ್ಯ ಏಡ್ಸ್ ಪ್ರಿವೆನ್ಸ್ ನ್ ಸಂಸ್ಥೆ,ಕಾಲೇಜಿನ ಎನ್.ಎಸ್.ಎಸ್. ಘಟಕವರು ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು.


ಏಡ್ಸ್ ರೋಗ ಹೆಚ್.ಐ.ವಿ ಎಂಬ ವೈರಸ್ ನಿಂದ ಹರಡುವಂತ ರೋಗವಾಗಿದ್ದು,ಇದು ಮೂಲತಃ ಅಮೇರಿಕಾದ ಚಿಕಾಗೋದಿಂದ ಭಾರತವನ್ನು ಪ್ರವೇಶಿಸಿತು.ಜೊತೆಗೆ ಈಡಿ ಜಗತ್ತಿನಾದ್ಯಂತ ಹರಡುವ ಮೂಲಕ ಮಹಾಮಾರಿ ರೋಗವೆಂದು ಗುರ್ತಿಸಿಕೊಂಡಿದೆ. ಇದಕ್ಕೆ ಹೆಚ್ಚಿನದಾಗಿ ಯುವಜನತೆ ಏಕೆ ಬಲಿಯಾಗುತ್ತಿದ್ದಾರೆ ಎಂಬುದರ ಬಗ್ಗೆ ತಿಳಿಸಿದರು.ಅದಕ್ಕಾಗಿ ಇಂದಿನ ಯುವಜನತೆ ಏಡ್ಸ್ ಹರಡುವ ರೀತಿಯನ್ನು ತಿಳಿದು,ಅದಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.


ಡಾಜಯಶೀಲಾ ಮಾತನಾಡಿ ಹೆಚ್.ಐ.ವಿ ರೋಗ ಹರಡುವ ಬಗೆ,ಅದರ ಗುಣ ಲಕ್ಷಣಗಳು,ಅದು ತಮ್ಮನ್ನು ಅವರಿಸದಂತೆ ಕೈಗೊಳ್ಳಬಹುದಾದ ಸುರಕ್ಷತಾ ಕ್ರಮಗಳನ್ನು ತಿಳಿಸಿದರು.ಅಲ್ಲದೆ ಏಡ್ಸ್ ರೋಗವಿರುವವರನ್ನು ದೂರವಿಡದೆ,ಅವರಿಂದ ಮತ್ತೊಬ್ಬರಿಗೆ ರೋಗ ಹರಡದಂತೆ ನೋಡಿಕೊಳ್ಳಬೇಕಿದೆ.ಇಂದಿನ ವಿದ್ಯಾರ್ಥಿಗಳು ಏಡ್ಸ್ ರೋಗದ ಬಗ್ಗೆ ತಿಳಿದು ತಮ್ಮ ಸುತ್ತಲಿನ ಮನೆಯವರಿಗೆ, ಸ್ನೇಹಿತರಿಗೆ ಇದರ ಬಗ್ಗೆ ತಿಳಿಸುವ ಕಾರ್ಯ ನಡೆಯಬೇಕಿದೆ ಎಂದರು.


ಡಾರಜನೀಶ್ ಬಾಬು ಮಾತನಾಡಿ ಹೆಚ್.ಐ.ವಿ ಹರಡುವ ಪ್ರಮುಖ 4ಹಂತಗಳು,ಅದನ್ನು ತಡೆಯುವ ವಿಧಾನಗಳನ್ನು ಸೂಕ್ಷ್ಮವಾಗಿ ತಿಳಿಸಿದರು.ಅಲ್ಲದೆ ಈ ರೋಗ ತನಗೆ ತಾನೇ ಬರುವುದಿಲ್ಲ, ಅದಕ್ಕಾಗಿ ಸುರಕ್ಷಿತ ಲೈಂಗಿಕತೆ, ವಿವಾಹ ಪೂರ್ವ ಲೈಂಗಿಕತೆ ಹೊಂದದಂತೆ ಎಚ್ಚರ ವಹಿಸಬೇಕಿದೆ ಎಂದರು.


ಪ್ರಾಂಶುಪಾಲ ಎಂ.ಎನ್.ನಾಗರಾಜು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕದ ಅಧಿಕಾರಿಗಳಾದ ಶಂಕರಲಿಂಗಯ್ಯ,ಉಪನ್ಯಾಸಕ ಇಬ್ರಾಹಿಂ,ಆಂಗ್ಲ ಉಪನ್ಯಾಸಕ ಶ್ರೀನಿವಾಸ್ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಕಾವ್ಯ ಪ್ರಾರ್ಥಿಸಿ,ನಯನ ಸ್ವಾಗತಿಸಿ,ಶಿವಗಂಗಾ ವಂದಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...