ವಿಷಯಕ್ಕೆ ಹೋಗಿ

ವಿವೇಕಾನಂದರ ಆದರ್ಶಗುಣಗಳು ಇಂದಿನ ಯುವಜನತೆಗೆ ಅಗತ್ಯ : ಕೆಂಕೆರೆ ಸತೀಶ್

ಹುಳಿಯಾರಿನ ಟಿಪ್ಪು ಯುವಕ ಸಂಘದವರು ನಡೆಸಿದ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವಕ ದಿನವನ್ನು ರಾಜ್ಯ ರೈತ ಸಂಘದ ಕೆಂಕೆರೆ ಸತೀಶ್ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ನರೇಂದ್ರಬಾಬು,ರಾಘವೇಂದ್ರ,ಡಿಶ್ ಬಾಬು,ಆಶೋಕ್ ಬಾಬು, ಕರವೇ ರಘು,ಟಿಪ್ಪು ಸಂಘದ ಪದಾಧಿಕಾರಿಗಳು ಇದ್ದಾರೆ.



ಇಂದಿನ ಯುವಕರು ತಾವು ಕೈಗೊಳ್ಳುವ ಕಾರ್ಯಗಳಲ್ಲಿ ಯಶಸ್ಸು ಗಳಿಸಿ,ಸಮಾಜದಲ್ಲಿ ಇಂದು ಉನ್ನತ ಸ್ಥಾನ ಪಡೆಯಬೇಕಾದರೆ ಅವರಿಗೆ ಸ್ವಾಮಿ ವಿವೇಕಾನಂದರಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳು ಹಾಗೂ ತತ್ವಗಳ ಅರಿವು ಅತ್ಯಗತ್ಯವೆಂದು ರಾಜ್ಯ ರೈತ ಸಂಘದ ಸಂಚಾಲಕ ಕೆಂಕೆರೆ ಸತೀಶ್ ಕರೆನೀಡಿದ್ದಾರೆ.

ಹೋಬಳಿಯ ಟಿಪ್ಪುಸುಲ್ತಾನ್ ಯುವಕಸಂಘದವರು ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಯುವ ದಿನದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸ್ವಾಮಿ ವಿವೇಕಾನಂದರು ಒಬ್ಬ ಮಹಾನ್ ವ್ಯಕ್ತಿ ಉತ್ತಮ ಚಿಂತನೆಗಳನ್ನು,ಆದರ್ಶಗಳನ್ನು ಹೊಂದಿದ್ದು,ನಮ್ಮ ದೇಶದ ಬಗ್ಗೆ ಇತರೆ ರಾಷ್ಟ್ರಗಳಿಗೆ ತಿಳಿಸಿದಂತಹವರು. ಅವರು ಯುವ ಪೀಳಿಗೆಯ ಉದ್ದಾರಕ್ಕಾಗಿ ಹತ್ತು ಹಲವು ಮಾರ್ಗಗಳನ್ನು ಹಾಕಿಕೊಟ್ಟಿದ್ದು,ಅದರಂತೆ ನೆಡೆಯುವುದು ನಮ್ಮೆಲರ ಹೊಣೆಯಾಗಿದೆ ಎಂದರು. ಅಲ್ಲದೆ ನಾವು ಸದಾ ಕಾಲ ಸದೃಢ ಮನಸ್ಸನ್ನು ಹೊಂದಿದ್ದೇ ಆದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು.ಅಲ್ಲದೆ ಟಿಪ್ಪು ಸಂಘದವರು ಇಂತಹ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದು,ಮುಂದಿನ ದಿನಗಳಲ್ಲಿ ಅವರು ಇನ್ನೂ ಹೆಚ್ಚಿನ ಸೇವೆಯನ್ನು ಸಾರ್ವಜನಿಕರಿಗೆ ನೀಡಲಿ ಎಂದು ಆಶಿಸಿದರು.ಗ್ರಾ.ಪಂ.ಸದಸ್ಯ ಆಶೋಕ್ ಬಾಬು ಅವರು ಮಾತನಾಡಿ ವಿವೇಕಾನಂದರು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನಮ್ಮ ಸಂಸ್ಕೃತಿ ಎಂಹದ್ದು ಎಂಬುದನ್ನು ತಿಳಿಸಿ,ಅಲ್ಲಿನ ಜನರಲ್ಲಿ ಪ್ರೀತಿ,ವಿಶ್ವಾಸವನ್ನು ನೆಲೆಯೂರುವಂತೆ ಮಾಡಿದ್ದಾರೆ ಎಂದರು.ಅಲ್ಲದೆ ಇಂದಿನ ಯುವ ಸಮುದಾಯ ಇವರ ಜಯಂತಿಯನ್ನು ಆಚರಿಸುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಿದೆ ಎಂದರು.ಸಮಾರಂಭದಲ್ಲಿ ಉಪಸ್ಥಿತರಿದ್ದ ಗ್ರಾ.ಪಂ.ಸದಸ್ಯ ರಾಘವೇಂದ್ರ ,ಎ.ಬಿ.ವಿ.ಪಿಯ ನರೇಂದ್ರಬಾಬು ವಿವೇಕಾನಂದರ ಜೀವನ ಶೈಲಿಯ ಬಗ್ಗೆ ತಿಳಿಸಿದರು.


ಗ್ರಾ.ಪಂ.ಸದಸ್ಯ ರಿಯಾಜ್ ಅಹಮದ್,ಕ.ರ.ವೇ ರಘುಪತಿಗೌಡ,ನೆಹರು ಯುವಕ ಸಂಘದ ಕೋದಂಡರಾಮು,ತಾಲ್ಲೂಕು ಜಯ ಕರ್ನಾಟಕ ಸಂಘದ ಅಧ್ಯಕ್ಷ ವೇಂಕಟೇಶ್,ಟಿಪ್ಪು ಸಂಘದ ಉಪಾಧ್ಯಕ್ಷ ಅಪ್ಸರ್ ಆಲಿ,ಕಾರ್ಯದರ್ಶಿ ಸಯ್ಯದ್,ಇರ್ಫಾನ್,ಮುಜೀಬ್ ಆಲಿಖಾನ್ ಸೇರಿದಂತೆ ಪದಾಧಿಕಾರಿಗಳು ಇದ್ದರು.ಶಾಹಿದ್ ನಿರೂಪಿಸಿ,ವಂದಿಸಿದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...