ವಿಷಯಕ್ಕೆ ಹೋಗಿ

100 ಮನೆಯಂಗಳದಲ್ಲಿ ಗಾಯನ ಮಾಡಿದ ಉಪಾಸನ ಮೊಹನ್ ಗೆ ಸನ್ಮಾನ

ಹುಳಿಯಾರಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಸತೀಶ್ ಅವರ ನಿವಾಸದಲ್ಲಿ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ನೂರು ಮನೆಯಂಗಳದಲ್ಲಿ ಕವಿತೆಗಾಯನ ಮಾಡಿದ ಗಾಯಕ ಉಪಾಸನ ಮೋಹನ್ ಅವರನ್ನು ಸ್ನೇಹ ಬಳಗವರು ಬಿನ್ನವತ್ತಳೆ ನೀಡುವಮೂಲಕ ಅಭಿನಂದಿಸಿದರು.

ಸಂಗೀತ ಸಂಯೋಜಕ, ಗಾಯಕ ಉಪಾಸನ ಮೊಹನ್ ಅವರ ಸಂಗೀತ ಕ್ಷೇತ್ರದಲ್ಲಿನ ಸಾಧನೆ ಹಾಗೂ ಮನೆಯಂಗಳದಲ್ಲಿ ಕವಿತಾ ಗಾಯನ ಕಾರ್ಯಕ್ರಮದ ಮೂಲಕ ನೂರಾರು ಕವಿತೆಗಳನ್ನು ಹಾಡಿ ಸಂಗೀತ ಪ್ರಿಯರ ಮನಸ್ಸು ಗೆದ್ದಿರುವ ಅವರ ಸಾಧನೆ ಗುರ್ತಿಸಿ ಸ್ನೇಹ ಬಳಗದ ವತಿಯಿಂದ ಹುಳಿಯಾರಿನ ಕೆನರಾಬ್ಯಾಂಕ್ ಸತೀಶ್ ನಿವಾಸದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಉಪಾಸನ ಮೊಹನ್ ಅವರ ಪರಿಚಯ ಮಾಡಿಕೊಟ್ಟ ಸತೀಶ್ ಮಾತನಾಡಿ ಮೂಲತಃ ಮೈಸೂರಿನವರಾದ ಮೋಹನ್ ಅವರು ಸಂಗೀತದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ಸಂಗೀತಾಭ್ಯಾಸದಲ್ಲಿ ನಿರತರಾಗಿ ಬೆಂಗಳೂರಿನಲ್ಲಿ ಉಪಾಸನ ಸಂಗೀತ ಶಾಲೆಯನ್ನು ಪ್ರಾರಂಭಿಸಿ ಅನೇಕ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸಿ ಜನರ ಹೃದಯದಲ್ಲಿ ಮನೆ ಮಾಡಿ ಅವರ ಅಭಿಮಾನವನ್ನು ಸಂಪಾದಿಸಿದ್ದಾರೆ. ಅನೇಕ ಕವಿತೆಗಳಿಗೆ ರಾಗ ಸಂಯೋಜನೆಯನ್ನು ಮಾಡಿ ಸುಮಾರು ನೂರು ಮನೆಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸುವ ಮೂಲಕ ಕನ್ನಡ ನಾಡಿನ,ಭಾಷೆಯ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಮನೆಮನೆ ಅಂಗಳದಲ್ಲಿ ಹರಡುವಂತೆ ಮಾಡಿದ ಕೀರ್ತಿ ಇವರಾದ್ದಾಗಿದ್ದೆ ಎಂದರು.


ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಮಾತನಾಡಿ ವರ್ಷ ಪೂರ್ತಿ ಅಭ್ಯಾಸ ಮಾಡಿದರು ಸುಗಮ ಸಂಗೀತವನ್ನು ಕಲಿಯಲು ಕಷ್ಟಕರ. ಆದರೆ ಇವರು ತಮ್ಮ ಕಲಿಕಾ ಶಿಬಿರದ ಮೂಲಕ ಎರಡುಮೂರು ದಿನಗಳಲ್ಲಿ ಮಕ್ಕಳಿಗೆ ಸುಗಮ ಸಂಗೀತವನ್ನು ಕಲಿಸಿ,ಅವರು ಹಾಡುವಂತೆ ಮಾಡುವುದು ನಿಜಕ್ಕೂ ಆಶ್ಚರ್ಯ. ಇವರ ಈ ಸಂಗೀತ ಸೇವೆ ಎಲ್ಲಾ ಹಳ್ಳಿಹಳ್ಳಿಗಳಲ್ಲೂ ಹರಡಲಿ ಎಂದು ಆಶಿಸಿದರು.


ಪತ್ರ ಬರಹಗಾರ ಹೆಚ್.ಎಸ್.ಲಕ್ಷ್ಮಿನರಸಿಂಹಯ್ಯ ಮಾತನಾಡಿ ಜಿ.ವಿ.ಯತ್ರಿಯವರನ್ನು ತನ್ನ ಗುರುಗಳಾಗಿ ಪಡೆದ ಮೋಹನ್ ಸಂಗೀತ ಕ್ಷೇತ್ರದಲ್ಲಿ ವಿದ್ವತ್ ಪಡೆದು, ನಂತರದಲ್ಲಿ ಸುಗಮಸಂಗೀತದ ಪರಂಪರೆಯನ್ನು ಇಂದಿಗೂ ಮುನ್ನೆಡೆಸಿಕೊಂಡು ಹೋಗುತ್ತಿರುವುದು ಗಮನಾರ್ಹವಾಗಿದ್ದು ಅವರ ಸಾಧೆನೆಯನ್ನು ಎಲ್ಲರೂ ಮೆಚ್ಚಬೇಕಾದ್ದು.ಅಲ್ಲದೇ ಇವರು ಸಂಗೀತ ಪರಂಪರೆಯನ್ನು ಗ್ರಾಮೀಣ ಮಟ್ಟದಲ್ಲಿ ಕೂಡ ಕೊಂಡೈಯುತ್ತಿರುವುದು ಶ್ಲಾಘನೀಯ ಎಂದರು.


ಹುಳಿಯಾರಿನ ಸ್ನೇಹ ಬಳಗದಿಂದ ಭಿನ್ನವತ್ತಳೆ ನೀಡುವ ಮೂಲಕ ಅವರನ್ನು ಅಭಿನಂದಿಸಲಾಯಿತು. ಲಕ್ಷ್ಮಿ ಸುಬ್ರಮಣ್ಯ,ಶೈಲರಮೇಶ್ ,ಜಯಶ್ರೀ,ಸತೀಶ್ ,ಶಾಂತಲಾಸುಬ್ರಮಣ್ಯ ವರ್ಷ,ಸಿರಿ,ಪ್ರಿಯಾಂಕ,ಅಕ್ಷಯ್ ಮುಂತಾದವರು ಉಪಾಸನ ಮೊಹನ್ ಸಂಗೀತ ಸಂಯೋಜಿಸಿದ ಕವಿತೆಗಳ ಗಾಯನವನ್ನು ಸುಶ್ರಾವ್ಯವಾಗಿ ಹಾಡಿದರು. ಸಮಾರಂಭದಲ್ಲಿ ಜೆ.ಗುಂಡಣ್ಣ , ಹು.ಕೃ.ವಿಶ್ವನಾಥ್,ಕೆಂಕೆರೆ ಸತೀಶ್,ಎಲ್.ಆರ್.ಚಂದ್ರಶೇಖರ್,ಶಿಕ್ಷಕರಾದ ರಮೇಶ್,ಗೋಪಿ,ಬಸವಮೂರ್ತಿ ಮುಂತಾದವರು ಸೇರಿದಂತೆ ಅನೇಕ ಸಂಗೀತ ಪ್ರಿಯರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...