ವಿಷಯಕ್ಕೆ ಹೋಗಿ

100 ಮನೆಯಂಗಳದಲ್ಲಿ ಗಾಯನ ಮಾಡಿದ ಉಪಾಸನ ಮೊಹನ್ ಗೆ ಸನ್ಮಾನ

ಹುಳಿಯಾರಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಸತೀಶ್ ಅವರ ನಿವಾಸದಲ್ಲಿ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ನೂರು ಮನೆಯಂಗಳದಲ್ಲಿ ಕವಿತೆಗಾಯನ ಮಾಡಿದ ಗಾಯಕ ಉಪಾಸನ ಮೋಹನ್ ಅವರನ್ನು ಸ್ನೇಹ ಬಳಗವರು ಬಿನ್ನವತ್ತಳೆ ನೀಡುವಮೂಲಕ ಅಭಿನಂದಿಸಿದರು.

ಸಂಗೀತ ಸಂಯೋಜಕ, ಗಾಯಕ ಉಪಾಸನ ಮೊಹನ್ ಅವರ ಸಂಗೀತ ಕ್ಷೇತ್ರದಲ್ಲಿನ ಸಾಧನೆ ಹಾಗೂ ಮನೆಯಂಗಳದಲ್ಲಿ ಕವಿತಾ ಗಾಯನ ಕಾರ್ಯಕ್ರಮದ ಮೂಲಕ ನೂರಾರು ಕವಿತೆಗಳನ್ನು ಹಾಡಿ ಸಂಗೀತ ಪ್ರಿಯರ ಮನಸ್ಸು ಗೆದ್ದಿರುವ ಅವರ ಸಾಧನೆ ಗುರ್ತಿಸಿ ಸ್ನೇಹ ಬಳಗದ ವತಿಯಿಂದ ಹುಳಿಯಾರಿನ ಕೆನರಾಬ್ಯಾಂಕ್ ಸತೀಶ್ ನಿವಾಸದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಉಪಾಸನ ಮೊಹನ್ ಅವರ ಪರಿಚಯ ಮಾಡಿಕೊಟ್ಟ ಸತೀಶ್ ಮಾತನಾಡಿ ಮೂಲತಃ ಮೈಸೂರಿನವರಾದ ಮೋಹನ್ ಅವರು ಸಂಗೀತದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ಸಂಗೀತಾಭ್ಯಾಸದಲ್ಲಿ ನಿರತರಾಗಿ ಬೆಂಗಳೂರಿನಲ್ಲಿ ಉಪಾಸನ ಸಂಗೀತ ಶಾಲೆಯನ್ನು ಪ್ರಾರಂಭಿಸಿ ಅನೇಕ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸಿ ಜನರ ಹೃದಯದಲ್ಲಿ ಮನೆ ಮಾಡಿ ಅವರ ಅಭಿಮಾನವನ್ನು ಸಂಪಾದಿಸಿದ್ದಾರೆ. ಅನೇಕ ಕವಿತೆಗಳಿಗೆ ರಾಗ ಸಂಯೋಜನೆಯನ್ನು ಮಾಡಿ ಸುಮಾರು ನೂರು ಮನೆಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸುವ ಮೂಲಕ ಕನ್ನಡ ನಾಡಿನ,ಭಾಷೆಯ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಮನೆಮನೆ ಅಂಗಳದಲ್ಲಿ ಹರಡುವಂತೆ ಮಾಡಿದ ಕೀರ್ತಿ ಇವರಾದ್ದಾಗಿದ್ದೆ ಎಂದರು.


ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಮಾತನಾಡಿ ವರ್ಷ ಪೂರ್ತಿ ಅಭ್ಯಾಸ ಮಾಡಿದರು ಸುಗಮ ಸಂಗೀತವನ್ನು ಕಲಿಯಲು ಕಷ್ಟಕರ. ಆದರೆ ಇವರು ತಮ್ಮ ಕಲಿಕಾ ಶಿಬಿರದ ಮೂಲಕ ಎರಡುಮೂರು ದಿನಗಳಲ್ಲಿ ಮಕ್ಕಳಿಗೆ ಸುಗಮ ಸಂಗೀತವನ್ನು ಕಲಿಸಿ,ಅವರು ಹಾಡುವಂತೆ ಮಾಡುವುದು ನಿಜಕ್ಕೂ ಆಶ್ಚರ್ಯ. ಇವರ ಈ ಸಂಗೀತ ಸೇವೆ ಎಲ್ಲಾ ಹಳ್ಳಿಹಳ್ಳಿಗಳಲ್ಲೂ ಹರಡಲಿ ಎಂದು ಆಶಿಸಿದರು.


ಪತ್ರ ಬರಹಗಾರ ಹೆಚ್.ಎಸ್.ಲಕ್ಷ್ಮಿನರಸಿಂಹಯ್ಯ ಮಾತನಾಡಿ ಜಿ.ವಿ.ಯತ್ರಿಯವರನ್ನು ತನ್ನ ಗುರುಗಳಾಗಿ ಪಡೆದ ಮೋಹನ್ ಸಂಗೀತ ಕ್ಷೇತ್ರದಲ್ಲಿ ವಿದ್ವತ್ ಪಡೆದು, ನಂತರದಲ್ಲಿ ಸುಗಮಸಂಗೀತದ ಪರಂಪರೆಯನ್ನು ಇಂದಿಗೂ ಮುನ್ನೆಡೆಸಿಕೊಂಡು ಹೋಗುತ್ತಿರುವುದು ಗಮನಾರ್ಹವಾಗಿದ್ದು ಅವರ ಸಾಧೆನೆಯನ್ನು ಎಲ್ಲರೂ ಮೆಚ್ಚಬೇಕಾದ್ದು.ಅಲ್ಲದೇ ಇವರು ಸಂಗೀತ ಪರಂಪರೆಯನ್ನು ಗ್ರಾಮೀಣ ಮಟ್ಟದಲ್ಲಿ ಕೂಡ ಕೊಂಡೈಯುತ್ತಿರುವುದು ಶ್ಲಾಘನೀಯ ಎಂದರು.


ಹುಳಿಯಾರಿನ ಸ್ನೇಹ ಬಳಗದಿಂದ ಭಿನ್ನವತ್ತಳೆ ನೀಡುವ ಮೂಲಕ ಅವರನ್ನು ಅಭಿನಂದಿಸಲಾಯಿತು. ಲಕ್ಷ್ಮಿ ಸುಬ್ರಮಣ್ಯ,ಶೈಲರಮೇಶ್ ,ಜಯಶ್ರೀ,ಸತೀಶ್ ,ಶಾಂತಲಾಸುಬ್ರಮಣ್ಯ ವರ್ಷ,ಸಿರಿ,ಪ್ರಿಯಾಂಕ,ಅಕ್ಷಯ್ ಮುಂತಾದವರು ಉಪಾಸನ ಮೊಹನ್ ಸಂಗೀತ ಸಂಯೋಜಿಸಿದ ಕವಿತೆಗಳ ಗಾಯನವನ್ನು ಸುಶ್ರಾವ್ಯವಾಗಿ ಹಾಡಿದರು. ಸಮಾರಂಭದಲ್ಲಿ ಜೆ.ಗುಂಡಣ್ಣ , ಹು.ಕೃ.ವಿಶ್ವನಾಥ್,ಕೆಂಕೆರೆ ಸತೀಶ್,ಎಲ್.ಆರ್.ಚಂದ್ರಶೇಖರ್,ಶಿಕ್ಷಕರಾದ ರಮೇಶ್,ಗೋಪಿ,ಬಸವಮೂರ್ತಿ ಮುಂತಾದವರು ಸೇರಿದಂತೆ ಅನೇಕ ಸಂಗೀತ ಪ್ರಿಯರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.