ವಿಷಯಕ್ಕೆ ಹೋಗಿ

100 ಮನೆಯಂಗಳದಲ್ಲಿ ಗಾಯನ ಮಾಡಿದ ಉಪಾಸನ ಮೊಹನ್ ಗೆ ಸನ್ಮಾನ

ಹುಳಿಯಾರಿನ ಕೆನರಾ ಬ್ಯಾಂಕ್ ಮ್ಯಾನೇಜರ್ ಸತೀಶ್ ಅವರ ನಿವಾಸದಲ್ಲಿ ನಡೆದ ಅಭಿನಂದನ ಕಾರ್ಯಕ್ರಮದಲ್ಲಿ ನೂರು ಮನೆಯಂಗಳದಲ್ಲಿ ಕವಿತೆಗಾಯನ ಮಾಡಿದ ಗಾಯಕ ಉಪಾಸನ ಮೋಹನ್ ಅವರನ್ನು ಸ್ನೇಹ ಬಳಗವರು ಬಿನ್ನವತ್ತಳೆ ನೀಡುವಮೂಲಕ ಅಭಿನಂದಿಸಿದರು.

ಸಂಗೀತ ಸಂಯೋಜಕ, ಗಾಯಕ ಉಪಾಸನ ಮೊಹನ್ ಅವರ ಸಂಗೀತ ಕ್ಷೇತ್ರದಲ್ಲಿನ ಸಾಧನೆ ಹಾಗೂ ಮನೆಯಂಗಳದಲ್ಲಿ ಕವಿತಾ ಗಾಯನ ಕಾರ್ಯಕ್ರಮದ ಮೂಲಕ ನೂರಾರು ಕವಿತೆಗಳನ್ನು ಹಾಡಿ ಸಂಗೀತ ಪ್ರಿಯರ ಮನಸ್ಸು ಗೆದ್ದಿರುವ ಅವರ ಸಾಧನೆ ಗುರ್ತಿಸಿ ಸ್ನೇಹ ಬಳಗದ ವತಿಯಿಂದ ಹುಳಿಯಾರಿನ ಕೆನರಾಬ್ಯಾಂಕ್ ಸತೀಶ್ ನಿವಾಸದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಉಪಾಸನ ಮೊಹನ್ ಅವರ ಪರಿಚಯ ಮಾಡಿಕೊಟ್ಟ ಸತೀಶ್ ಮಾತನಾಡಿ ಮೂಲತಃ ಮೈಸೂರಿನವರಾದ ಮೋಹನ್ ಅವರು ಸಂಗೀತದಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ಸಂಗೀತಾಭ್ಯಾಸದಲ್ಲಿ ನಿರತರಾಗಿ ಬೆಂಗಳೂರಿನಲ್ಲಿ ಉಪಾಸನ ಸಂಗೀತ ಶಾಲೆಯನ್ನು ಪ್ರಾರಂಭಿಸಿ ಅನೇಕ ವಿದ್ಯಾರ್ಥಿಗಳಿಗೆ ಸಂಗೀತವನ್ನು ಕಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸಿ ಜನರ ಹೃದಯದಲ್ಲಿ ಮನೆ ಮಾಡಿ ಅವರ ಅಭಿಮಾನವನ್ನು ಸಂಪಾದಿಸಿದ್ದಾರೆ. ಅನೇಕ ಕವಿತೆಗಳಿಗೆ ರಾಗ ಸಂಯೋಜನೆಯನ್ನು ಮಾಡಿ ಸುಮಾರು ನೂರು ಮನೆಗಳಲ್ಲಿ ತಮ್ಮ ಸಂಗೀತ ಕಛೇರಿಗಳನ್ನು ನಡೆಸುವ ಮೂಲಕ ಕನ್ನಡ ನಾಡಿನ,ಭಾಷೆಯ ಹಾಗೂ ಸಂಸ್ಕೃತಿಯ ಹಿರಿಮೆಯನ್ನು ಮನೆಮನೆ ಅಂಗಳದಲ್ಲಿ ಹರಡುವಂತೆ ಮಾಡಿದ ಕೀರ್ತಿ ಇವರಾದ್ದಾಗಿದ್ದೆ ಎಂದರು.


ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಮಾತನಾಡಿ ವರ್ಷ ಪೂರ್ತಿ ಅಭ್ಯಾಸ ಮಾಡಿದರು ಸುಗಮ ಸಂಗೀತವನ್ನು ಕಲಿಯಲು ಕಷ್ಟಕರ. ಆದರೆ ಇವರು ತಮ್ಮ ಕಲಿಕಾ ಶಿಬಿರದ ಮೂಲಕ ಎರಡುಮೂರು ದಿನಗಳಲ್ಲಿ ಮಕ್ಕಳಿಗೆ ಸುಗಮ ಸಂಗೀತವನ್ನು ಕಲಿಸಿ,ಅವರು ಹಾಡುವಂತೆ ಮಾಡುವುದು ನಿಜಕ್ಕೂ ಆಶ್ಚರ್ಯ. ಇವರ ಈ ಸಂಗೀತ ಸೇವೆ ಎಲ್ಲಾ ಹಳ್ಳಿಹಳ್ಳಿಗಳಲ್ಲೂ ಹರಡಲಿ ಎಂದು ಆಶಿಸಿದರು.


ಪತ್ರ ಬರಹಗಾರ ಹೆಚ್.ಎಸ್.ಲಕ್ಷ್ಮಿನರಸಿಂಹಯ್ಯ ಮಾತನಾಡಿ ಜಿ.ವಿ.ಯತ್ರಿಯವರನ್ನು ತನ್ನ ಗುರುಗಳಾಗಿ ಪಡೆದ ಮೋಹನ್ ಸಂಗೀತ ಕ್ಷೇತ್ರದಲ್ಲಿ ವಿದ್ವತ್ ಪಡೆದು, ನಂತರದಲ್ಲಿ ಸುಗಮಸಂಗೀತದ ಪರಂಪರೆಯನ್ನು ಇಂದಿಗೂ ಮುನ್ನೆಡೆಸಿಕೊಂಡು ಹೋಗುತ್ತಿರುವುದು ಗಮನಾರ್ಹವಾಗಿದ್ದು ಅವರ ಸಾಧೆನೆಯನ್ನು ಎಲ್ಲರೂ ಮೆಚ್ಚಬೇಕಾದ್ದು.ಅಲ್ಲದೇ ಇವರು ಸಂಗೀತ ಪರಂಪರೆಯನ್ನು ಗ್ರಾಮೀಣ ಮಟ್ಟದಲ್ಲಿ ಕೂಡ ಕೊಂಡೈಯುತ್ತಿರುವುದು ಶ್ಲಾಘನೀಯ ಎಂದರು.


ಹುಳಿಯಾರಿನ ಸ್ನೇಹ ಬಳಗದಿಂದ ಭಿನ್ನವತ್ತಳೆ ನೀಡುವ ಮೂಲಕ ಅವರನ್ನು ಅಭಿನಂದಿಸಲಾಯಿತು. ಲಕ್ಷ್ಮಿ ಸುಬ್ರಮಣ್ಯ,ಶೈಲರಮೇಶ್ ,ಜಯಶ್ರೀ,ಸತೀಶ್ ,ಶಾಂತಲಾಸುಬ್ರಮಣ್ಯ ವರ್ಷ,ಸಿರಿ,ಪ್ರಿಯಾಂಕ,ಅಕ್ಷಯ್ ಮುಂತಾದವರು ಉಪಾಸನ ಮೊಹನ್ ಸಂಗೀತ ಸಂಯೋಜಿಸಿದ ಕವಿತೆಗಳ ಗಾಯನವನ್ನು ಸುಶ್ರಾವ್ಯವಾಗಿ ಹಾಡಿದರು. ಸಮಾರಂಭದಲ್ಲಿ ಜೆ.ಗುಂಡಣ್ಣ , ಹು.ಕೃ.ವಿಶ್ವನಾಥ್,ಕೆಂಕೆರೆ ಸತೀಶ್,ಎಲ್.ಆರ್.ಚಂದ್ರಶೇಖರ್,ಶಿಕ್ಷಕರಾದ ರಮೇಶ್,ಗೋಪಿ,ಬಸವಮೂರ್ತಿ ಮುಂತಾದವರು ಸೇರಿದಂತೆ ಅನೇಕ ಸಂಗೀತ ಪ್ರಿಯರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...