ವಿಷಯಕ್ಕೆ ಹೋಗಿ

ನಿಯಮಿತ ಅವಧಿಯಲ್ಲಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗದಿದ್ದರೆ ಮತ್ತೆ ಧರಣಿ

ಹುಳಿಯಾರು ಸಮೀಪದ ದಸೂಡಿಯಲ್ಲಿ ಇನ್ನೂ ಪ್ರಾರಂಭವಾಗದ ವಿದ್ಯುತ್ ಉಪಸ್ಥಾವರವನ್ನು ಶೀಘ್ರವೇ ಪ್ರಾರಂಭಿಸಿ ಎಂದು ಆಗ್ರಹಿಸಿ ಧರಣಿಯಲ್ಲಿ ನಿರತರಾದ ರೈತರು,ಸಾರ್ವಜನಿಕರು.

ಜಿಲ್ಲೆಯ ಗಡಿಭಾಗದ ಪ್ರದೇಶಗಳಾದ ದಸೂಡಿ,ಗಾಣಧಾಳು,ಹೋಯ್ಸಳಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯಿಂದ ದಸೂಡಿ ಗ್ರಾಮದಲ್ಲಿ ಕಳೆದ 10ವರ್ಷಗಳ ಹಿಂದೆ ಶಂಕುಸ್ಥಾಪನೆಯಾಗಿದ್ದ 66/11 ಕೆವಿ ಸಾಮರ್ಥ್ಯದ ವಿದ್ಯುತ್ ಉಪಸ್ಥಾವರ ಇಂದಿಗೂ ಸಹ ಪ್ರಾರಂಭವಾಗದೆ ನೆನೆಗುದಿಗೆ ಬಿದ್ದಿದ್ದು ಇಲ್ಲಿನ ಗ್ರಾಮಗಳ ರೈತರು,ಸಾರ್ವಜನಿಕರು ಕಳೆದ 4ತಿಂಗಳ ಹಿಂದೆ ಧರಣಿ ನಡೆಸಿದ್ದರು. ಆಗ ಜನವರಿ 10ರೊಳಗೆ ಉಪಸ್ಥಾವರ ಪ್ರಾರಂಭಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಅದನ್ನು ಮರೆತು ಸುಮ್ಮನೆ ಇಲ್ಲ ಸಲ್ಲದ ಸಬೂಬು ಹೇಳುತ್ತಾ ಕುತಿದ್ದಾರೆ.ಇದನ್ನು ಕಂಡ ರೈತರು,ಸಾರ್ವಜನಿಕರು ಬುಧವಾರದಂದು ಪುನಃ ಧರಣಿ ನಡೆಸಿ, ಉಪಸ್ಥಾವರ ಪ್ರಾರಂಭವಾಗುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಈ ಗ್ರಾಮಗಳಿಗೆ ಹುಳಿಯಾರಿನ ವಿದ್ಯುತ್ ಉಪಸ್ಥಾವರದಿಂದ ವಿದ್ಯುತ್ ಪೂರೈಸಲಾಗುತ್ತಿತ್ತು.ಆದರೆ ಉತ್ತಮವಾದ ವೋಲ್ಟೇಜ್ ಪೋರೈಕೆ ಆಗದೆ ದೀಪದ ಬೆಳಕಿಗಿಂತ ಕಡಿಮೆ ವೋಲ್ಟೇಜ್ ಇರುತ್ತಿತ್ತು.ಇದರಿಂದ ಮಕ್ಕಳ ಓದಿಗೆ,ರೈತರಿಗೆ ತಮ್ಮ ಬೆಳೆಗಳಿಗೆ ನೀರುಹಾಯಿಸುವುದಕ್ಕೆ ,ಕುಡಿಯುವ ನೀರಿಗೂ ತೊಂದರೆಯಾಗಿತ್ತು. ಈ ಸಮಸ್ಯೆಯನ್ನು ನಿವಾರಿಸಿ ದಸೂಡಿಯ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಬಿಸಿ ಎಂದು ಕಳೆದ ಕೆಲವು ತಿಂಗಳ ಹಿಂದೆ ಧರಣಿ ಮಾಡಿದಾಗ ಆಗಮಿಸಿದ್ದ ಅಧಿಕಾರಿಗಳು ನಿಮಗೆ ವೋಲ್ಟೇಜ್ ಸಮಸ್ಯೆ ಉಂಟಾಗದಂತೆ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದರು.ಆದರೆ ಇಂದಿಗೂ ಸಹ ಆ ಸಮಸ್ಯೆ ಬಗೆಹರಿದಿಲ್ಲ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ರೈತಾಪಿ ವರ್ಗದವರು ಮರಳಿ ಧರಣಿ ನಡೆಸಿದ್ದಾರೆ.


ಈ ಸಂಬಂದ ಸ್ಥಳಕ್ಕೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ರೈತರು ಪ್ರಶ್ನೆಗಳ ಸುರಿಮಳೆಗೈದರು,ರೈತರ ಪ್ರಶ್ನೆಗಳಿಗೆ ತಕ್ಕ ಉತ್ತರ ನಿಡುವಲ್ಲಿ ಅಧಿಕಾರಿಗಳು ತಬ್ಬಿಬ್ಬಾಗಿ ಹೋದರು. ನೀವು ಸುಮ್ಮನೆ ಪೋಳ್ಳು ಭರವಸೆಗಳನ್ನು ನೀಡುತ್ತಾ ಇಂದು,ಅಂದು ಪ್ರಾರಂಭಿಸುತ್ತೇವೆಂದು ಹೇಳಿ ಇಲ್ಲಿಂದ ಜಾಗ ಖಾಲಿಮಾಡುತ್ತಿರ ಆದರೆ ವಿದ್ಯುತ್ ಉಪಸ್ಥಾವರ ಮಾತ್ರ ಪ್ರಾರಂಭವಾಗುವುದಿಲ್ಲ ಅದಕ್ಕಾಗಿ ಈ ಬಾರಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗುವವರೆಗೂ ನಮ್ಮ ಧರಣಿ ಮುಂದುವರೆಯುತ್ತಿರುತ್ತದೆ,ಅಲ್ಲದೆ ಇದನ್ನು ಯಾವಾಗ ಪ್ರಾರಂಭಿಸುವಿರಿ ಹೇಳಿ ಇಲ್ಲದಿದ್ದರೆ ಮುಂದೆ ನಡೆಯುವ ಅನಾಹುತಗಳಿಗೆ ನಾವು ಜವಬ್ದಾರರಲ್ಲವೆಂದು ರೈತರು ಎಚ್ಚರಿಯ ಮಾತನಾಡಿ ಧರಣಿಯನ್ನು ಮುಂದುವರೆಸಿದರು.


ಎಇಇ ಸತ್ಯನಾರಾಯಣ್ ಸ್ಥಳಕ್ಕೆ ಭೇಟಿ ನೀಡಿ ರೈತರ ಆಳಲನ್ನು ಕೇಳಿ ಫೆಬ್ರವರಿ 15ರ ಒಳಗಾಗಿ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಭಿಸಿ ಕರೆಂಟ್ ಕೊಡುತ್ತವೆಂದರು. ಆಗ ರೈತರು ನೀವು ಇದೇ ರೀತಿ ನಮಗೆ ಮಂಕುಬೂದಿ ಎರಚ್ಚುತ್ತಿರಾ ಎಂದಾಗ,ಇದೊಂದು ಬಾರಿ ನನ್ನನ್ನು ನಂಬಿ ಇನ್ನೂ 15 ದಿನಗಳಲ್ಲಿ ಇಲ್ಲಿನ ಸುತ್ತ ಮುತ್ತಲ 15 ಕಿ.ಮೀ ಸುತ್ತಮುತ್ತಲ ಎಲ್ಲಾ ಗ್ರಾಮಗಳಿಗೆ ಕರೆಂಟ್ ಕೊಡುವುದಾಗಿ ತಿಳಿಸಿ, ರೈತರ ಮನವೊಲಿಸಿ ಧರಣಿಯನ್ನು ಹಿಂಪಡೆಯುವಂತೆ ತಿಳಿಸಿದರು.ಇದೊಂದು ಬಾರಿ ಕಡೆಯದಾಗಿ ನೋಡೊಣ ಎಂದು ರೈತರು ಧರಣಿಯನ್ನು ಹಿಂಪಡೆದು,ಕಾಲಕ್ಕೆ ತಕ್ಕಾಗೆ ಪ್ರಾರಂಭಿಸದಿದ್ದರೆ ಮತ್ತೆ ಧರಣಿಯನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...