ವಿಷಯಕ್ಕೆ ಹೋಗಿ

ನಿಯಮಿತ ಅವಧಿಯಲ್ಲಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗದಿದ್ದರೆ ಮತ್ತೆ ಧರಣಿ

ಹುಳಿಯಾರು ಸಮೀಪದ ದಸೂಡಿಯಲ್ಲಿ ಇನ್ನೂ ಪ್ರಾರಂಭವಾಗದ ವಿದ್ಯುತ್ ಉಪಸ್ಥಾವರವನ್ನು ಶೀಘ್ರವೇ ಪ್ರಾರಂಭಿಸಿ ಎಂದು ಆಗ್ರಹಿಸಿ ಧರಣಿಯಲ್ಲಿ ನಿರತರಾದ ರೈತರು,ಸಾರ್ವಜನಿಕರು.

ಜಿಲ್ಲೆಯ ಗಡಿಭಾಗದ ಪ್ರದೇಶಗಳಾದ ದಸೂಡಿ,ಗಾಣಧಾಳು,ಹೋಯ್ಸಳಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯಿಂದ ದಸೂಡಿ ಗ್ರಾಮದಲ್ಲಿ ಕಳೆದ 10ವರ್ಷಗಳ ಹಿಂದೆ ಶಂಕುಸ್ಥಾಪನೆಯಾಗಿದ್ದ 66/11 ಕೆವಿ ಸಾಮರ್ಥ್ಯದ ವಿದ್ಯುತ್ ಉಪಸ್ಥಾವರ ಇಂದಿಗೂ ಸಹ ಪ್ರಾರಂಭವಾಗದೆ ನೆನೆಗುದಿಗೆ ಬಿದ್ದಿದ್ದು ಇಲ್ಲಿನ ಗ್ರಾಮಗಳ ರೈತರು,ಸಾರ್ವಜನಿಕರು ಕಳೆದ 4ತಿಂಗಳ ಹಿಂದೆ ಧರಣಿ ನಡೆಸಿದ್ದರು. ಆಗ ಜನವರಿ 10ರೊಳಗೆ ಉಪಸ್ಥಾವರ ಪ್ರಾರಂಭಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಅದನ್ನು ಮರೆತು ಸುಮ್ಮನೆ ಇಲ್ಲ ಸಲ್ಲದ ಸಬೂಬು ಹೇಳುತ್ತಾ ಕುತಿದ್ದಾರೆ.ಇದನ್ನು ಕಂಡ ರೈತರು,ಸಾರ್ವಜನಿಕರು ಬುಧವಾರದಂದು ಪುನಃ ಧರಣಿ ನಡೆಸಿ, ಉಪಸ್ಥಾವರ ಪ್ರಾರಂಭವಾಗುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಈ ಗ್ರಾಮಗಳಿಗೆ ಹುಳಿಯಾರಿನ ವಿದ್ಯುತ್ ಉಪಸ್ಥಾವರದಿಂದ ವಿದ್ಯುತ್ ಪೂರೈಸಲಾಗುತ್ತಿತ್ತು.ಆದರೆ ಉತ್ತಮವಾದ ವೋಲ್ಟೇಜ್ ಪೋರೈಕೆ ಆಗದೆ ದೀಪದ ಬೆಳಕಿಗಿಂತ ಕಡಿಮೆ ವೋಲ್ಟೇಜ್ ಇರುತ್ತಿತ್ತು.ಇದರಿಂದ ಮಕ್ಕಳ ಓದಿಗೆ,ರೈತರಿಗೆ ತಮ್ಮ ಬೆಳೆಗಳಿಗೆ ನೀರುಹಾಯಿಸುವುದಕ್ಕೆ ,ಕುಡಿಯುವ ನೀರಿಗೂ ತೊಂದರೆಯಾಗಿತ್ತು. ಈ ಸಮಸ್ಯೆಯನ್ನು ನಿವಾರಿಸಿ ದಸೂಡಿಯ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಬಿಸಿ ಎಂದು ಕಳೆದ ಕೆಲವು ತಿಂಗಳ ಹಿಂದೆ ಧರಣಿ ಮಾಡಿದಾಗ ಆಗಮಿಸಿದ್ದ ಅಧಿಕಾರಿಗಳು ನಿಮಗೆ ವೋಲ್ಟೇಜ್ ಸಮಸ್ಯೆ ಉಂಟಾಗದಂತೆ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದರು.ಆದರೆ ಇಂದಿಗೂ ಸಹ ಆ ಸಮಸ್ಯೆ ಬಗೆಹರಿದಿಲ್ಲ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ರೈತಾಪಿ ವರ್ಗದವರು ಮರಳಿ ಧರಣಿ ನಡೆಸಿದ್ದಾರೆ.


ಈ ಸಂಬಂದ ಸ್ಥಳಕ್ಕೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ರೈತರು ಪ್ರಶ್ನೆಗಳ ಸುರಿಮಳೆಗೈದರು,ರೈತರ ಪ್ರಶ್ನೆಗಳಿಗೆ ತಕ್ಕ ಉತ್ತರ ನಿಡುವಲ್ಲಿ ಅಧಿಕಾರಿಗಳು ತಬ್ಬಿಬ್ಬಾಗಿ ಹೋದರು. ನೀವು ಸುಮ್ಮನೆ ಪೋಳ್ಳು ಭರವಸೆಗಳನ್ನು ನೀಡುತ್ತಾ ಇಂದು,ಅಂದು ಪ್ರಾರಂಭಿಸುತ್ತೇವೆಂದು ಹೇಳಿ ಇಲ್ಲಿಂದ ಜಾಗ ಖಾಲಿಮಾಡುತ್ತಿರ ಆದರೆ ವಿದ್ಯುತ್ ಉಪಸ್ಥಾವರ ಮಾತ್ರ ಪ್ರಾರಂಭವಾಗುವುದಿಲ್ಲ ಅದಕ್ಕಾಗಿ ಈ ಬಾರಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗುವವರೆಗೂ ನಮ್ಮ ಧರಣಿ ಮುಂದುವರೆಯುತ್ತಿರುತ್ತದೆ,ಅಲ್ಲದೆ ಇದನ್ನು ಯಾವಾಗ ಪ್ರಾರಂಭಿಸುವಿರಿ ಹೇಳಿ ಇಲ್ಲದಿದ್ದರೆ ಮುಂದೆ ನಡೆಯುವ ಅನಾಹುತಗಳಿಗೆ ನಾವು ಜವಬ್ದಾರರಲ್ಲವೆಂದು ರೈತರು ಎಚ್ಚರಿಯ ಮಾತನಾಡಿ ಧರಣಿಯನ್ನು ಮುಂದುವರೆಸಿದರು.


ಎಇಇ ಸತ್ಯನಾರಾಯಣ್ ಸ್ಥಳಕ್ಕೆ ಭೇಟಿ ನೀಡಿ ರೈತರ ಆಳಲನ್ನು ಕೇಳಿ ಫೆಬ್ರವರಿ 15ರ ಒಳಗಾಗಿ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಭಿಸಿ ಕರೆಂಟ್ ಕೊಡುತ್ತವೆಂದರು. ಆಗ ರೈತರು ನೀವು ಇದೇ ರೀತಿ ನಮಗೆ ಮಂಕುಬೂದಿ ಎರಚ್ಚುತ್ತಿರಾ ಎಂದಾಗ,ಇದೊಂದು ಬಾರಿ ನನ್ನನ್ನು ನಂಬಿ ಇನ್ನೂ 15 ದಿನಗಳಲ್ಲಿ ಇಲ್ಲಿನ ಸುತ್ತ ಮುತ್ತಲ 15 ಕಿ.ಮೀ ಸುತ್ತಮುತ್ತಲ ಎಲ್ಲಾ ಗ್ರಾಮಗಳಿಗೆ ಕರೆಂಟ್ ಕೊಡುವುದಾಗಿ ತಿಳಿಸಿ, ರೈತರ ಮನವೊಲಿಸಿ ಧರಣಿಯನ್ನು ಹಿಂಪಡೆಯುವಂತೆ ತಿಳಿಸಿದರು.ಇದೊಂದು ಬಾರಿ ಕಡೆಯದಾಗಿ ನೋಡೊಣ ಎಂದು ರೈತರು ಧರಣಿಯನ್ನು ಹಿಂಪಡೆದು,ಕಾಲಕ್ಕೆ ತಕ್ಕಾಗೆ ಪ್ರಾರಂಭಿಸದಿದ್ದರೆ ಮತ್ತೆ ಧರಣಿಯನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.