ವಿಷಯಕ್ಕೆ ಹೋಗಿ

ನಿಯಮಿತ ಅವಧಿಯಲ್ಲಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗದಿದ್ದರೆ ಮತ್ತೆ ಧರಣಿ

ಹುಳಿಯಾರು ಸಮೀಪದ ದಸೂಡಿಯಲ್ಲಿ ಇನ್ನೂ ಪ್ರಾರಂಭವಾಗದ ವಿದ್ಯುತ್ ಉಪಸ್ಥಾವರವನ್ನು ಶೀಘ್ರವೇ ಪ್ರಾರಂಭಿಸಿ ಎಂದು ಆಗ್ರಹಿಸಿ ಧರಣಿಯಲ್ಲಿ ನಿರತರಾದ ರೈತರು,ಸಾರ್ವಜನಿಕರು.

ಜಿಲ್ಲೆಯ ಗಡಿಭಾಗದ ಪ್ರದೇಶಗಳಾದ ದಸೂಡಿ,ಗಾಣಧಾಳು,ಹೋಯ್ಸಳಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆಯಿಂದ ದಸೂಡಿ ಗ್ರಾಮದಲ್ಲಿ ಕಳೆದ 10ವರ್ಷಗಳ ಹಿಂದೆ ಶಂಕುಸ್ಥಾಪನೆಯಾಗಿದ್ದ 66/11 ಕೆವಿ ಸಾಮರ್ಥ್ಯದ ವಿದ್ಯುತ್ ಉಪಸ್ಥಾವರ ಇಂದಿಗೂ ಸಹ ಪ್ರಾರಂಭವಾಗದೆ ನೆನೆಗುದಿಗೆ ಬಿದ್ದಿದ್ದು ಇಲ್ಲಿನ ಗ್ರಾಮಗಳ ರೈತರು,ಸಾರ್ವಜನಿಕರು ಕಳೆದ 4ತಿಂಗಳ ಹಿಂದೆ ಧರಣಿ ನಡೆಸಿದ್ದರು. ಆಗ ಜನವರಿ 10ರೊಳಗೆ ಉಪಸ್ಥಾವರ ಪ್ರಾರಂಭಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಅದನ್ನು ಮರೆತು ಸುಮ್ಮನೆ ಇಲ್ಲ ಸಲ್ಲದ ಸಬೂಬು ಹೇಳುತ್ತಾ ಕುತಿದ್ದಾರೆ.ಇದನ್ನು ಕಂಡ ರೈತರು,ಸಾರ್ವಜನಿಕರು ಬುಧವಾರದಂದು ಪುನಃ ಧರಣಿ ನಡೆಸಿ, ಉಪಸ್ಥಾವರ ಪ್ರಾರಂಭವಾಗುವವರೆಗೂ ಧರಣಿ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

ಈ ಗ್ರಾಮಗಳಿಗೆ ಹುಳಿಯಾರಿನ ವಿದ್ಯುತ್ ಉಪಸ್ಥಾವರದಿಂದ ವಿದ್ಯುತ್ ಪೂರೈಸಲಾಗುತ್ತಿತ್ತು.ಆದರೆ ಉತ್ತಮವಾದ ವೋಲ್ಟೇಜ್ ಪೋರೈಕೆ ಆಗದೆ ದೀಪದ ಬೆಳಕಿಗಿಂತ ಕಡಿಮೆ ವೋಲ್ಟೇಜ್ ಇರುತ್ತಿತ್ತು.ಇದರಿಂದ ಮಕ್ಕಳ ಓದಿಗೆ,ರೈತರಿಗೆ ತಮ್ಮ ಬೆಳೆಗಳಿಗೆ ನೀರುಹಾಯಿಸುವುದಕ್ಕೆ ,ಕುಡಿಯುವ ನೀರಿಗೂ ತೊಂದರೆಯಾಗಿತ್ತು. ಈ ಸಮಸ್ಯೆಯನ್ನು ನಿವಾರಿಸಿ ದಸೂಡಿಯ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಬಿಸಿ ಎಂದು ಕಳೆದ ಕೆಲವು ತಿಂಗಳ ಹಿಂದೆ ಧರಣಿ ಮಾಡಿದಾಗ ಆಗಮಿಸಿದ್ದ ಅಧಿಕಾರಿಗಳು ನಿಮಗೆ ವೋಲ್ಟೇಜ್ ಸಮಸ್ಯೆ ಉಂಟಾಗದಂತೆ ವಿದ್ಯುತ್ ಪೂರೈಸುವುದಾಗಿ ಭರವಸೆ ನೀಡಿದ್ದರು.ಆದರೆ ಇಂದಿಗೂ ಸಹ ಆ ಸಮಸ್ಯೆ ಬಗೆಹರಿದಿಲ್ಲ ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದ ರೈತಾಪಿ ವರ್ಗದವರು ಮರಳಿ ಧರಣಿ ನಡೆಸಿದ್ದಾರೆ.


ಈ ಸಂಬಂದ ಸ್ಥಳಕ್ಕೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ರೈತರು ಪ್ರಶ್ನೆಗಳ ಸುರಿಮಳೆಗೈದರು,ರೈತರ ಪ್ರಶ್ನೆಗಳಿಗೆ ತಕ್ಕ ಉತ್ತರ ನಿಡುವಲ್ಲಿ ಅಧಿಕಾರಿಗಳು ತಬ್ಬಿಬ್ಬಾಗಿ ಹೋದರು. ನೀವು ಸುಮ್ಮನೆ ಪೋಳ್ಳು ಭರವಸೆಗಳನ್ನು ನೀಡುತ್ತಾ ಇಂದು,ಅಂದು ಪ್ರಾರಂಭಿಸುತ್ತೇವೆಂದು ಹೇಳಿ ಇಲ್ಲಿಂದ ಜಾಗ ಖಾಲಿಮಾಡುತ್ತಿರ ಆದರೆ ವಿದ್ಯುತ್ ಉಪಸ್ಥಾವರ ಮಾತ್ರ ಪ್ರಾರಂಭವಾಗುವುದಿಲ್ಲ ಅದಕ್ಕಾಗಿ ಈ ಬಾರಿ ವಿದ್ಯುತ್ ಉಪಸ್ಥಾವರ ಪ್ರಾರಂಭವಾಗುವವರೆಗೂ ನಮ್ಮ ಧರಣಿ ಮುಂದುವರೆಯುತ್ತಿರುತ್ತದೆ,ಅಲ್ಲದೆ ಇದನ್ನು ಯಾವಾಗ ಪ್ರಾರಂಭಿಸುವಿರಿ ಹೇಳಿ ಇಲ್ಲದಿದ್ದರೆ ಮುಂದೆ ನಡೆಯುವ ಅನಾಹುತಗಳಿಗೆ ನಾವು ಜವಬ್ದಾರರಲ್ಲವೆಂದು ರೈತರು ಎಚ್ಚರಿಯ ಮಾತನಾಡಿ ಧರಣಿಯನ್ನು ಮುಂದುವರೆಸಿದರು.


ಎಇಇ ಸತ್ಯನಾರಾಯಣ್ ಸ್ಥಳಕ್ಕೆ ಭೇಟಿ ನೀಡಿ ರೈತರ ಆಳಲನ್ನು ಕೇಳಿ ಫೆಬ್ರವರಿ 15ರ ಒಳಗಾಗಿ ವಿದ್ಯುತ್ ಉಪಸ್ಥಾವರವನ್ನು ಪ್ರಾರಂಭಿಸಿ ಕರೆಂಟ್ ಕೊಡುತ್ತವೆಂದರು. ಆಗ ರೈತರು ನೀವು ಇದೇ ರೀತಿ ನಮಗೆ ಮಂಕುಬೂದಿ ಎರಚ್ಚುತ್ತಿರಾ ಎಂದಾಗ,ಇದೊಂದು ಬಾರಿ ನನ್ನನ್ನು ನಂಬಿ ಇನ್ನೂ 15 ದಿನಗಳಲ್ಲಿ ಇಲ್ಲಿನ ಸುತ್ತ ಮುತ್ತಲ 15 ಕಿ.ಮೀ ಸುತ್ತಮುತ್ತಲ ಎಲ್ಲಾ ಗ್ರಾಮಗಳಿಗೆ ಕರೆಂಟ್ ಕೊಡುವುದಾಗಿ ತಿಳಿಸಿ, ರೈತರ ಮನವೊಲಿಸಿ ಧರಣಿಯನ್ನು ಹಿಂಪಡೆಯುವಂತೆ ತಿಳಿಸಿದರು.ಇದೊಂದು ಬಾರಿ ಕಡೆಯದಾಗಿ ನೋಡೊಣ ಎಂದು ರೈತರು ಧರಣಿಯನ್ನು ಹಿಂಪಡೆದು,ಕಾಲಕ್ಕೆ ತಕ್ಕಾಗೆ ಪ್ರಾರಂಭಿಸದಿದ್ದರೆ ಮತ್ತೆ ಧರಣಿಯನ್ನು ತೀವ್ರಗೊಳಿಸುವುದಾಗಿ ತಿಳಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...