ವಿಷಯಕ್ಕೆ ಹೋಗಿ

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಿ: ಶಾಸಕ ಸಿ.ಬಿ.ಎಸ್

ಹುಳಿಯಾರು ಹೋಬಳಿಯ ಜಿ.ಗೋಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಸಾಹುಕಾರ್ ಜಿ.ಸಿ.ಸಿದ್ದಲಿಂಗಪ್ಪ ಅವರ ಭಾವಚಿತ್ರದ ಅನಾವರಣವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ನೆರವೇರಿಸಿದರು. ಜಿ.ಪಂ.ಸದಸ್ಯೆ ನಿಂಗಮ್ಮ,ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯ ವಸಂತಯ್ಯ, ಇದ್ದಾರೆ.



ಗ್ರಾಮೀಣ ಭಾಗದ ಕೆಲ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸದೆ ತಮ್ಮ ಜೊತೆ ಕೂಲಿ ಕೆಲಸಕ್ಕೆ ಹಾಕಿಕೊಳ್ಳುವುದನ್ನು ಬಿಟ್ಟು ಅವರಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.


ಹುಳಿಯಾರು ಹೋಬಳಿ ಗಾಣಧಾಳು ಗ್ರಾಮಪಂಚಾಯ್ತಿಯ ಜಿ.ಗೊಲ್ಲರಹಟ್ಟಿ(ಸೋಮನಹಳ್ಳಿ) ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಕುಡಿಯುನ ನೀರಿನ ಯೋಜನೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು,ಕೊಡುವುದು ಪೋಷಕ ಹಾಗೂ ಶಿಕ್ಷಕರ ಕರ್ತವ್ಯವಾಗಿದೆ.ಪೋಷಕರು ತಮ್ಮ ಮಕ್ಕಳ ಮೇಲೆ ಪ್ರೀತಿಯನ್ನು ಹೊಂದಿರ ಬೇಕು ಅದರಂತೆ ಅವರಲ್ಲಿ ಉತ್ತಮಾಂಶಗಳು ಬೆಳೆಯುವ ರೀತಿಯಲ್ಲಿ ವಾತಾವರಣವನ್ನು ಸೃಷ್ಟಿಸಬೇಕು ಆಗ ಮಗು ತನ್ನಲ್ಲಿ ಉತ್ತಮ ಚಿಂತನೆ,ಆಲೋಚನೆಗಳನ್ನು ಮಾಡಿ ಮಹಾನ್ ವ್ಯಕ್ತಿಗಾಗಿ ಬೆಳೆಯುತ್ತಾನೆ ಎಂದರು. ಮಗುವಿಗೆ ಸ್ವಚ್ಚತೆ ಎಂಬುದು ತುಂಬಾ ಅವಶ್ಯ ಇದರಿಂದ ಮಗು ಉತ್ತಮ ಆರೋಗ್ಯದಿಂದಿರಲು ಸಹಕಾರಿಯಾಗುತ್ತದೆ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳ ಪ್ರಾರಂಭದಿಂದಾಗಿ ಅಲ್ಲಿನ ನವ ನವೀನತೆಗೆ ಪೋಷಕರು ಮಾರು ಹೋಗಿ ತಮ್ಮ ಮಕ್ಕಳನ್ನು ಸಾಲಸೋಲ ಮಾಡಿ ಆ ಶಾಲೆಗಳಿಗೆ ಕಳುಹಿಸುತ್ತಾರೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಸವಲತ್ತು ನೀಡುತ್ತಿದೆ. ಅದರಂತೆ ಸರ್ಕಾರಿ ಶಾಲೆಗಳಿಗೂ ಸರ್ಕಾರ ಹೆಚ್ಚಿನ ಬೋಧನ ಸಲಕರಣೆಗಳನ್ನು ಒದಗಿಸಿಕೊಡುತ್ತಿದ್ದು,ಇವುಗಳ ಸದುಪಯೋಗ ಪಡಿಸಿಕೊಂಡು ಶಿಕ್ಷಕರು ಮಕ್ಕಳಿಗೆ ಉತ್ತಮ ಹಾಗೂ ಚಿಂತನಾತ್ಮ ಶಿಕ್ಷಣವನ್ನು ನೀಡುವಲ್ಲಿ ಮುಂದಾಗಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಕಮ್ಮಿಯಿಲ್ಲ ಎಂಬುದನ್ನು ತೊರ್ಪಡಿಸಿ ಎಂದರು.



ಸನ್ಮಾನಿತರಾದ ಸಾಹುಕಾರ್ ಚನ್ನಬಸಪ್ಪನವರ ಮಗ ವಕೀಲ ಚನ್ನಬಸಪ್ಪ ಮಾತನಾಡಿ ಆಯಾ ಗ್ರಾಮಗಳ ಜನರು ಆಯಾ ಗ್ರಾಮಗಳ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ,ಅದರಲ್ಲಿಯೂ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ,ಇದರಿಂದ ಮಗು ಪ್ರತಿನಿತ್ಯ ತಂದೆ ತಾಯಿಗಳ ಜೊತೆ ಸೇರುತ್ತದೆ,ಯಾವುದೋ ದೂರದ ಊರುಗಳ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅವರಿಗೆ ತಮ್ಮ ಪೋಷಕರ ಸಂಪರ್ಕವಿಲ್ಲದಂತೆ ಮಾಡಿ ಮಕ್ಕಳ ಮೃದು ಮನಸ್ಸಿನ ಮೇಲೆ ಪೋಷಕರೆ ಬರೆ ಎಳೆಯುತ್ತಿದ್ದಾರೆ ಎಂದರು.



ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಿದರು.ತಾ.ಪಂ.ಸದಸ್ಯ ವಸಂತಯ್ಯ ಸಮಾರಂಭದ ಉದ್ಘಾಟನೆ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್,ಶಿಕ್ಷಣ ಸಂಯೋಜಕರಾದ ವಿಜಯಕುಮಾರಿ,ಪರಿವೀಕ್ಷಕ ನರಸಿಂಹಮೂರ್ತಿ, ಸಿ.ಆರ್.ಪಿ ಪುಟ್ಟಮಾದಪ್ಪ,ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ರಂಗನಕೆರೆ ಮಹೇಶ್, ಜಿ.ಪಂ.ಸದಸ್ಯೆ ನಿಂಗಮ್ಮ ರಾಮಯ್ಯ,ಗ್ರಾ.ಪಂ.ಯ ಗುಂಡಯ್ಯ,ಕಲ್ಪನಾಬಾಯಿ,ಲಕ್ಷ್ಮಿದೇವಿ,ಶಿವಣ್ಣ,ಪಿ.ಎಲ್.ಡಿ.ಬ್ಯಾಂಕ್ ನ ನಟರಾಜು,ಮೋಹನ್ ಕುಮಾರ್, ಸಾವಯವ ಕೃಷಿಕ ಮಲ್ಲೇಶಯ್ಯ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಮಕ್ಕಳು , ಗ್ರಾಮಸ್ಥರು ಉಪಸ್ಥಿತರಿದ್ದರು.




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.