ವಿಷಯಕ್ಕೆ ಹೋಗಿ

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಿ: ಶಾಸಕ ಸಿ.ಬಿ.ಎಸ್

ಹುಳಿಯಾರು ಹೋಬಳಿಯ ಜಿ.ಗೋಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಸಮಾರೋಪ ಸಮಾರಂಭದಲ್ಲಿ ದಾನಿಗಳಾದ ಸಾಹುಕಾರ್ ಜಿ.ಸಿ.ಸಿದ್ದಲಿಂಗಪ್ಪ ಅವರ ಭಾವಚಿತ್ರದ ಅನಾವರಣವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ನೆರವೇರಿಸಿದರು. ಜಿ.ಪಂ.ಸದಸ್ಯೆ ನಿಂಗಮ್ಮ,ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯ ವಸಂತಯ್ಯ, ಇದ್ದಾರೆ.



ಗ್ರಾಮೀಣ ಭಾಗದ ಕೆಲ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸದೆ ತಮ್ಮ ಜೊತೆ ಕೂಲಿ ಕೆಲಸಕ್ಕೆ ಹಾಕಿಕೊಳ್ಳುವುದನ್ನು ಬಿಟ್ಟು ಅವರಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಿ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.


ಹುಳಿಯಾರು ಹೋಬಳಿ ಗಾಣಧಾಳು ಗ್ರಾಮಪಂಚಾಯ್ತಿಯ ಜಿ.ಗೊಲ್ಲರಹಟ್ಟಿ(ಸೋಮನಹಳ್ಳಿ) ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕೋತ್ಸವ ಹಾಗೂ ಕುಡಿಯುನ ನೀರಿನ ಯೋಜನೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.



ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದು,ಕೊಡುವುದು ಪೋಷಕ ಹಾಗೂ ಶಿಕ್ಷಕರ ಕರ್ತವ್ಯವಾಗಿದೆ.ಪೋಷಕರು ತಮ್ಮ ಮಕ್ಕಳ ಮೇಲೆ ಪ್ರೀತಿಯನ್ನು ಹೊಂದಿರ ಬೇಕು ಅದರಂತೆ ಅವರಲ್ಲಿ ಉತ್ತಮಾಂಶಗಳು ಬೆಳೆಯುವ ರೀತಿಯಲ್ಲಿ ವಾತಾವರಣವನ್ನು ಸೃಷ್ಟಿಸಬೇಕು ಆಗ ಮಗು ತನ್ನಲ್ಲಿ ಉತ್ತಮ ಚಿಂತನೆ,ಆಲೋಚನೆಗಳನ್ನು ಮಾಡಿ ಮಹಾನ್ ವ್ಯಕ್ತಿಗಾಗಿ ಬೆಳೆಯುತ್ತಾನೆ ಎಂದರು. ಮಗುವಿಗೆ ಸ್ವಚ್ಚತೆ ಎಂಬುದು ತುಂಬಾ ಅವಶ್ಯ ಇದರಿಂದ ಮಗು ಉತ್ತಮ ಆರೋಗ್ಯದಿಂದಿರಲು ಸಹಕಾರಿಯಾಗುತ್ತದೆ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳ ಪ್ರಾರಂಭದಿಂದಾಗಿ ಅಲ್ಲಿನ ನವ ನವೀನತೆಗೆ ಪೋಷಕರು ಮಾರು ಹೋಗಿ ತಮ್ಮ ಮಕ್ಕಳನ್ನು ಸಾಲಸೋಲ ಮಾಡಿ ಆ ಶಾಲೆಗಳಿಗೆ ಕಳುಹಿಸುತ್ತಾರೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಸವಲತ್ತು ನೀಡುತ್ತಿದೆ. ಅದರಂತೆ ಸರ್ಕಾರಿ ಶಾಲೆಗಳಿಗೂ ಸರ್ಕಾರ ಹೆಚ್ಚಿನ ಬೋಧನ ಸಲಕರಣೆಗಳನ್ನು ಒದಗಿಸಿಕೊಡುತ್ತಿದ್ದು,ಇವುಗಳ ಸದುಪಯೋಗ ಪಡಿಸಿಕೊಂಡು ಶಿಕ್ಷಕರು ಮಕ್ಕಳಿಗೆ ಉತ್ತಮ ಹಾಗೂ ಚಿಂತನಾತ್ಮ ಶಿಕ್ಷಣವನ್ನು ನೀಡುವಲ್ಲಿ ಮುಂದಾಗಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಕಮ್ಮಿಯಿಲ್ಲ ಎಂಬುದನ್ನು ತೊರ್ಪಡಿಸಿ ಎಂದರು.



ಸನ್ಮಾನಿತರಾದ ಸಾಹುಕಾರ್ ಚನ್ನಬಸಪ್ಪನವರ ಮಗ ವಕೀಲ ಚನ್ನಬಸಪ್ಪ ಮಾತನಾಡಿ ಆಯಾ ಗ್ರಾಮಗಳ ಜನರು ಆಯಾ ಗ್ರಾಮಗಳ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ,ಅದರಲ್ಲಿಯೂ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ,ಇದರಿಂದ ಮಗು ಪ್ರತಿನಿತ್ಯ ತಂದೆ ತಾಯಿಗಳ ಜೊತೆ ಸೇರುತ್ತದೆ,ಯಾವುದೋ ದೂರದ ಊರುಗಳ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅವರಿಗೆ ತಮ್ಮ ಪೋಷಕರ ಸಂಪರ್ಕವಿಲ್ಲದಂತೆ ಮಾಡಿ ಮಕ್ಕಳ ಮೃದು ಮನಸ್ಸಿನ ಮೇಲೆ ಪೋಷಕರೆ ಬರೆ ಎಳೆಯುತ್ತಿದ್ದಾರೆ ಎಂದರು.



ತಾ.ಪಂ.ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ನೆರವೇರಿಸಿದರು.ತಾ.ಪಂ.ಸದಸ್ಯ ವಸಂತಯ್ಯ ಸಮಾರಂಭದ ಉದ್ಘಾಟನೆ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್,ಶಿಕ್ಷಣ ಸಂಯೋಜಕರಾದ ವಿಜಯಕುಮಾರಿ,ಪರಿವೀಕ್ಷಕ ನರಸಿಂಹಮೂರ್ತಿ, ಸಿ.ಆರ್.ಪಿ ಪುಟ್ಟಮಾದಪ್ಪ,ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ರಂಗನಕೆರೆ ಮಹೇಶ್, ಜಿ.ಪಂ.ಸದಸ್ಯೆ ನಿಂಗಮ್ಮ ರಾಮಯ್ಯ,ಗ್ರಾ.ಪಂ.ಯ ಗುಂಡಯ್ಯ,ಕಲ್ಪನಾಬಾಯಿ,ಲಕ್ಷ್ಮಿದೇವಿ,ಶಿವಣ್ಣ,ಪಿ.ಎಲ್.ಡಿ.ಬ್ಯಾಂಕ್ ನ ನಟರಾಜು,ಮೋಹನ್ ಕುಮಾರ್, ಸಾವಯವ ಕೃಷಿಕ ಮಲ್ಲೇಶಯ್ಯ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ಮಕ್ಕಳು , ಗ್ರಾಮಸ್ಥರು ಉಪಸ್ಥಿತರಿದ್ದರು.




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...