ಹೋಬಳಿ ವಾಸವಿ ಸಂಸ್ಥೆಯ ಟಿ.ಆರ್.ಶ್ರೀನಿವಾಸಶ್ರೇಷ್ಠಿ ರುಕ್ಮಿಣಮ್ಮ ಪ್ರೌಢಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಉದ್ಘಾಟಸಿ ಮಾತನಾಡಿದರು.
ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ.ಇದರಿಂದ ಮಕ್ಕಳು ತಮ್ಮ ಸುಪ್ತ ಪ್ರತಿಭೆಯನ್ನು ಅಭಿವ್ಯಕ್ತಿಸಲು ಸಹಕಾರಿಯಾಗುತ್ತದೆ ಎಂದರು. ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ವಿವಿಧ ಸಂಘಗಳನ್ನು ರಚನೆ ಮಾಡಿ, ಮಗು ಈ ಸಂಘಗಳಿಗೆ ಸೇರಿ ಪ್ರತಿಯೊಂದು ಕ್ಷೇತ್ರದಲ್ಲಿ ಮುನ್ನೆಡೆದು,ನಾಯಕತ್ವ ಗುಣ,ಸಹಕಾರ ಮನೋಭಾವ ಹಾಗೂ ಕೂಡಿಬಾಳುವುದರ ಬಗ್ಗೆ ತಿಳಿಯಲು ನೆರವಾಗುತ್ತವೆ ಎಂದರು.ಶಾಲೆ ಪ್ರಾರಂಭದಿಂದ ಇಲ್ಲಿಯವರೆಗೆ ಮಗು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಎಷ್ಟರ ಮಟ್ಟಿಗೆ ಪ್ರಗತಿಯನ್ನು ಹೊಂದಿದ್ದಾನೆ ಎಂಬುದನ್ನು ತಿಳಿಸುವ ಶಾಲಾ ವಾರ್ಷಿಕೋತ್ಸವ ಮಗುವಿನ ಅಂತರಾಳದ ಸುಪ್ತ ಪ್ರತಿಭೆಯನ್ನು ಬಿಂಬಿಸುತ್ತದೆ ಎಂದರು.
ಸಂಸ್ಥೆಯ ಸಹಕಾರ್ಯದರ್ಶಿ ಎಲ್.ಆರ್.ಚಂದ್ರಶೇಖರ್ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ವಾಸವಿಸಂಸ್ಥೆ ಪ್ರಾರಂಭವಾಗಿ ಇಲ್ಲಿಗೆ 43ವರ್ಷಗಳಾಗಿವೆ,ನಮ್ಮ ತಾಲ್ಲೂಕಿನಲ್ಲೆ 2ನೇದಾಗಿ ಪ್ರಾರಂಭವಾದ ಖಾಸಗಿ ಶಾಲೆ ಇದಾಗಿದ್ದು,ಇಲ್ಲಿ ಅಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶವಿದೇಶಗಳಲ್ಲೂ ಕಾರ್ಯನಿರ್ವಹಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ.ಈ ಶಾಲೆಯ ಸಂಸ್ಥಾಪಕರ ಹಾಗೂ ಶಿಕ್ಷಕರ ಪರಿಶ್ರಮದಿಂದಾಗಿ ಇಲ್ಲಿಯವರೆ ಸಾಗುತ್ತಾ ಬಂದಿರುವ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಕಲ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸಿ,ಅವರಿಗೆ ಉತ್ತಮ ಭವಿಷ್ಯವನ್ನು ರೂಪಿಸಲಿದೆ ಎಂದರು.
ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಪಟು ಹಾಗೂ ಕೆನರಾಬ್ಯಾಂಕ್ ಮ್ಯಾನೇಜರ್ ಸತೀಶ್ 10ನೇ ತರಗತಿಯ ಮಕ್ಕಳಿಗೆ ಶುಭಹಾರೈಸಿದರು,ಸಂಸ್ಥೆಯ ಅಧ್ಯಕ್ಷ ಟಿ.ಆರ್.ಲಕ್ಷ್ಮಿಕಾಂತ್, ಚಿ.ನಾ.ಹಳ್ಳಿಯ ತಿಮ್ಮಯ್ಯ, ಇಂದಿರಾಗಾಂಧಿ ಶಾಲೆಯ ಮುಖ್ಯಶಿಕ್ಷಕ ದೇವೇಂದ್ರಪ್ಪ, ವಾಸವಿ ಶಾಲೆಯ ಮುಖ್ಯಶಿಕ್ಷಕಿ ಗಾಯತ್ರಿ,ಶಿಕ್ಷಕರಾದ ರಮೇಶ್,ಗಂಗಾದರಯ್ಯ,ಮಂಜುನಾಥ್ ಹಾಗೂ ಶಿಕ್ಷಕರು,ಮಕ್ಕಳು ಹಾಜರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ