ವಿಷಯಕ್ಕೆ ಹೋಗಿ

ಮಾರ್ಕ್ ಗಳೇ ಮಕ್ಕಳ ಮುಂದಿನ ಭವಿಷ್ಯದ ಮಾನದಂಡ : ಮಾ.ಚಿ.ಕೈಲಾಸನಾಥ್

ಹುಳಿಯಾರು ಸಮೀಪದ ನಂದಿಹಳ್ಳಿಯಲ್ಲಿ ಕಳೆದ 7ದಿನಗಳಿಂದ ನಡೆಯುತ್ತಿದ್ದ ಎನ್,ಎಸ್,ಎಸ್, ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ಎನ್.ನಾಗರಾಜು ಮಾತನಾಡಿದರು.

ವಿದ್ಯಾರ್ಥಿಗಳು ಮುಂದಿನ ತಮ್ಮ ಜೀವನದಲ್ಲಿ ಒಂದು ಉನ್ನತ ಸ್ಥಾನವನ್ನು, ಕೆಲಸವನ್ನು ಪಡೆಬೇಕಾದರೆ ಅವರು ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಬೇಕು, ಈ ಪರೀಕ್ಷೆಗಳಲ್ಲಿ ಗಳಿಸಿದ ಮಾರ್ಕ್ ಗಳೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಮಾನದಂಡವಾಗುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕ ಮಾ.ಚಿ.ಕೈಲಾಸನಾಥ್ ತಿಳಿಸಿದರು.

ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಕಳೆದ 7ದಿನಗಳಿಂದ ನಂದಿಹಳ್ಳಿಯಲ್ಲಿ ನಡೆಯುತ್ತಿದ್ದ 2011-12ನೇ ಸಾಲಿನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.


ಕಾಲಕ್ಕೆ ತಕ್ಕಂತೆ ನಾವು ನೀವು ನಡೆಯಬೇಕಿದೆ.ಯಾವ ಕಾಲದಲ್ಲಿ ಯಾವ ಕಾರ್ಯ ಆಗಬೇಕಿರುತ್ತದೆ ಅದು ಖಂಡಿತವಾಗಿಯೂ ನಡೆದೇ ತೀರುತ್ತದೆ ಎಂದರು. ಇಲ್ಲಿ ಕೈಗೊಂಡಿದ್ದ 7ದಿನಗಳ ಶಿಬಿರ ಜನರಲ್ಲಿ ಸ್ವಚ್ಚತೆಯ ಬಗ್ಗೆ ಹರಿವು ಮೂಡಿಸುವುದ ಜೊತೆ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಗುಣಗಳು ಮೈಗೂಡುವಂತೆ ಮಾಡಿದೆ ಎಂದರು. ಇಂತಹ ಶಿಬಿರಗಳಿಗೆ ಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ಸ್ವಯಂ ಸೇವೆಯಲ್ಲಿ ತೊಡಗಿದಾಗ ಮಾತ್ರ ನಮ್ಮ ರಾಷ್ಟ್ರ ಉನ್ನತಿಯ ಶಿಖರವನ್ನು ತಲುಪುತ್ತದೆ ಅದಕ್ಕಾಗಿ ನಮ್ಮೆಲ್ಲರ ಪರಿಶ್ರಮ ಅತ್ಯಗತ್ಯವಾಗಿದೆ.ಅಲ್ಲದೆ ದೇಶಿ ಸಂಸ್ಕೃತಿಯನ್ನು ಕಟ್ಟುವ ಕಾರ್ಯ ವಿದ್ಯಾರ್ಥಿಗಳಿಂದ ಆಗಬೇಕಿದೆ ಎಂದರು. ಇಂದು ನಾವು ಕೆಟ್ಟ ರಾಸಾಯನಿಕ ಗೊಬ್ಬರವನ್ನು ಬಳಸಿ ನಾವು ಗೊಬ್ಬರವಾಗಿ ಹೋಗುತ್ತಿದ್ದೇವೆ.ಅದಕ್ಕೆ ಬದಲಾಗಿ ನಮ್ಮ ಸುತ್ತಮುತ್ತ ಸ್ವಚ್ಚತೆಯನ್ನು ಉಳಿಸಿ, ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದರು.


ಪ್ರಾಚಾರ್ಯ ಎಂ.ಎನ್,ನಾಗರಾಜು ಮಾತನಾಡಿ ಶಿಬಿರ ಯಶಸ್ವಿಯಾಗಬೇಕಾದೆ ಶಿಬಿರಾರ್ಥಿಗಳು ಹಾಗೂ ಶಿಬಿರಾಧಿಕಾರಿಗಳ ಪಾತ್ರ ಪ್ರಮುಖ. ಅದರಂತೆ ಇಲ್ಲಿ ಎಲ್ಲರೂ ಪರಿಶ್ರಮದಿಂದ ನಡೆದುಕೊಂಡಿದ್ದು, ನಂದಿಹಳ್ಳಿಯ ಜನರಿಗೆ ಸ್ವಚ್ಚತೆಯನ್ನು ಯಾವರೀತಿ ಕಾಪಡಿಕೊಳ್ಳಬೇಕು,ಅದರಿಂದ ನಮಗಾಗುವ ಪ್ರಯೋಜನಗಳೇನು ಎಂಬುದನ್ನು ಮನವರಿಕೆ ಮಾಡಿ ಕೊಟ್ಟು,ಜನರಿಂದ ಉತ್ತಮ ಪ್ರಶಂಸೆಯನ್ನು ಗಳಿಸಿ ನಮ್ಮ ಕಾಲೇಜಿನ ಗೌರವವನ್ನು ಹೆಚ್ಚಿಸಿದ್ದಿರೆಂದು ತಿಳಿಸಿದರು.


ನಾವು ಶ್ರಮದಾನಕ್ಕೆಂದು ಹೋದಾಗ ಮನೆಮನೆಯಲ್ಲಿ ಶರಬತ್ತು,ಪಾನಕ,ಮಜ್ಜಿಗೆ,ಟೀ ಹೀಗೆ ನಾನ ರೀತಿ ಭಕ್ಷಗಳನ್ನು ಕೊಡುವುದರ ಜೊತೆಗೆ ಜನರಿಂದನಮಗೆ ಉತ್ತಮ ಸಹಕಾರವಿತ್ತು. ಸಮಾಜ ಸೇವೆಯ ರೀತಿನೀತಿಗಳನ್ನು, 7ದಿನಗಳ ಶಿಬಿರ ಕಲಿಸಿಕೊಟ್ಟಿತಲ್ಲದೆ, ಸಭಾಕಂಪನದ ಭಯವನ್ನು ನಮ್ಮಿಂದ ದೂರಮಾಡಿದೆ ಎಂದು ಶಿಬಿರಾರ್ಥಿಗಳಾದ ರಘು,ಹರೀಶ್,ಕಿರಣ್ ತಮ್ಮ ಅನಿಸಿಕೆಯನ್ನು ತಿಳಿಸಿದರು.


ಸಿ.ಡಿ.ಸಿ ಉಪಾಧ್ಯಕ್ಷರು ಹಾಗೂ ಜೆಡಿಎಸ್ ಮುಖಂಡರಾದ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಬರಗೂರು ಗ್ರಾ.ಪಂ.ಅಧ್ಯಕ್ಷ ಬಸವರಾಜು,ಪ್ರಬಾರಿ ಮುಖ್ಯಶಿಕ್ಷಕ ಯಲ್ಲಪ್ಪ,ಶಿಬಿರಾಧಿಕಾರಿಗಳಾದ ಶಂಕರಲಿಂಗಯ್ಯ,ಇಬ್ರಾಹಿಂ,ಜಯಪ್ರಕಾಶ್,ಅಶ್ವತ್ಥನಾರಾಯಣ,ಹಿರಿಯ ಉಪನ್ಯಾಸಕರಾದ ಮೂಗೇಶಪ್ಪ,ಶ್ರೀನಿವಾಸ್,ಹನುಮಂತಪ್ಪ ಗ್ರಾಮಸ್ಥರಾದ ನಂದೀಶಪ್ಪ,ರಾಜಮ್ಮ,ರಾಮಣ್ಣ ಇತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...