ವಿಷಯಕ್ಕೆ ಹೋಗಿ

ಮಾರ್ಕ್ ಗಳೇ ಮಕ್ಕಳ ಮುಂದಿನ ಭವಿಷ್ಯದ ಮಾನದಂಡ : ಮಾ.ಚಿ.ಕೈಲಾಸನಾಥ್

ಹುಳಿಯಾರು ಸಮೀಪದ ನಂದಿಹಳ್ಳಿಯಲ್ಲಿ ಕಳೆದ 7ದಿನಗಳಿಂದ ನಡೆಯುತ್ತಿದ್ದ ಎನ್,ಎಸ್,ಎಸ್, ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ಎನ್.ನಾಗರಾಜು ಮಾತನಾಡಿದರು.

ವಿದ್ಯಾರ್ಥಿಗಳು ಮುಂದಿನ ತಮ್ಮ ಜೀವನದಲ್ಲಿ ಒಂದು ಉನ್ನತ ಸ್ಥಾನವನ್ನು, ಕೆಲಸವನ್ನು ಪಡೆಬೇಕಾದರೆ ಅವರು ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಬೇಕು, ಈ ಪರೀಕ್ಷೆಗಳಲ್ಲಿ ಗಳಿಸಿದ ಮಾರ್ಕ್ ಗಳೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಮಾನದಂಡವಾಗುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕ ಮಾ.ಚಿ.ಕೈಲಾಸನಾಥ್ ತಿಳಿಸಿದರು.

ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಕಳೆದ 7ದಿನಗಳಿಂದ ನಂದಿಹಳ್ಳಿಯಲ್ಲಿ ನಡೆಯುತ್ತಿದ್ದ 2011-12ನೇ ಸಾಲಿನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.


ಕಾಲಕ್ಕೆ ತಕ್ಕಂತೆ ನಾವು ನೀವು ನಡೆಯಬೇಕಿದೆ.ಯಾವ ಕಾಲದಲ್ಲಿ ಯಾವ ಕಾರ್ಯ ಆಗಬೇಕಿರುತ್ತದೆ ಅದು ಖಂಡಿತವಾಗಿಯೂ ನಡೆದೇ ತೀರುತ್ತದೆ ಎಂದರು. ಇಲ್ಲಿ ಕೈಗೊಂಡಿದ್ದ 7ದಿನಗಳ ಶಿಬಿರ ಜನರಲ್ಲಿ ಸ್ವಚ್ಚತೆಯ ಬಗ್ಗೆ ಹರಿವು ಮೂಡಿಸುವುದ ಜೊತೆ ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯ ಗುಣಗಳು ಮೈಗೂಡುವಂತೆ ಮಾಡಿದೆ ಎಂದರು. ಇಂತಹ ಶಿಬಿರಗಳಿಗೆ ಎಲ್ಲಾ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಂಡು ಸ್ವಯಂ ಸೇವೆಯಲ್ಲಿ ತೊಡಗಿದಾಗ ಮಾತ್ರ ನಮ್ಮ ರಾಷ್ಟ್ರ ಉನ್ನತಿಯ ಶಿಖರವನ್ನು ತಲುಪುತ್ತದೆ ಅದಕ್ಕಾಗಿ ನಮ್ಮೆಲ್ಲರ ಪರಿಶ್ರಮ ಅತ್ಯಗತ್ಯವಾಗಿದೆ.ಅಲ್ಲದೆ ದೇಶಿ ಸಂಸ್ಕೃತಿಯನ್ನು ಕಟ್ಟುವ ಕಾರ್ಯ ವಿದ್ಯಾರ್ಥಿಗಳಿಂದ ಆಗಬೇಕಿದೆ ಎಂದರು. ಇಂದು ನಾವು ಕೆಟ್ಟ ರಾಸಾಯನಿಕ ಗೊಬ್ಬರವನ್ನು ಬಳಸಿ ನಾವು ಗೊಬ್ಬರವಾಗಿ ಹೋಗುತ್ತಿದ್ದೇವೆ.ಅದಕ್ಕೆ ಬದಲಾಗಿ ನಮ್ಮ ಸುತ್ತಮುತ್ತ ಸ್ವಚ್ಚತೆಯನ್ನು ಉಳಿಸಿ, ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದರು.


ಪ್ರಾಚಾರ್ಯ ಎಂ.ಎನ್,ನಾಗರಾಜು ಮಾತನಾಡಿ ಶಿಬಿರ ಯಶಸ್ವಿಯಾಗಬೇಕಾದೆ ಶಿಬಿರಾರ್ಥಿಗಳು ಹಾಗೂ ಶಿಬಿರಾಧಿಕಾರಿಗಳ ಪಾತ್ರ ಪ್ರಮುಖ. ಅದರಂತೆ ಇಲ್ಲಿ ಎಲ್ಲರೂ ಪರಿಶ್ರಮದಿಂದ ನಡೆದುಕೊಂಡಿದ್ದು, ನಂದಿಹಳ್ಳಿಯ ಜನರಿಗೆ ಸ್ವಚ್ಚತೆಯನ್ನು ಯಾವರೀತಿ ಕಾಪಡಿಕೊಳ್ಳಬೇಕು,ಅದರಿಂದ ನಮಗಾಗುವ ಪ್ರಯೋಜನಗಳೇನು ಎಂಬುದನ್ನು ಮನವರಿಕೆ ಮಾಡಿ ಕೊಟ್ಟು,ಜನರಿಂದ ಉತ್ತಮ ಪ್ರಶಂಸೆಯನ್ನು ಗಳಿಸಿ ನಮ್ಮ ಕಾಲೇಜಿನ ಗೌರವವನ್ನು ಹೆಚ್ಚಿಸಿದ್ದಿರೆಂದು ತಿಳಿಸಿದರು.


ನಾವು ಶ್ರಮದಾನಕ್ಕೆಂದು ಹೋದಾಗ ಮನೆಮನೆಯಲ್ಲಿ ಶರಬತ್ತು,ಪಾನಕ,ಮಜ್ಜಿಗೆ,ಟೀ ಹೀಗೆ ನಾನ ರೀತಿ ಭಕ್ಷಗಳನ್ನು ಕೊಡುವುದರ ಜೊತೆಗೆ ಜನರಿಂದನಮಗೆ ಉತ್ತಮ ಸಹಕಾರವಿತ್ತು. ಸಮಾಜ ಸೇವೆಯ ರೀತಿನೀತಿಗಳನ್ನು, 7ದಿನಗಳ ಶಿಬಿರ ಕಲಿಸಿಕೊಟ್ಟಿತಲ್ಲದೆ, ಸಭಾಕಂಪನದ ಭಯವನ್ನು ನಮ್ಮಿಂದ ದೂರಮಾಡಿದೆ ಎಂದು ಶಿಬಿರಾರ್ಥಿಗಳಾದ ರಘು,ಹರೀಶ್,ಕಿರಣ್ ತಮ್ಮ ಅನಿಸಿಕೆಯನ್ನು ತಿಳಿಸಿದರು.


ಸಿ.ಡಿ.ಸಿ ಉಪಾಧ್ಯಕ್ಷರು ಹಾಗೂ ಜೆಡಿಎಸ್ ಮುಖಂಡರಾದ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಬರಗೂರು ಗ್ರಾ.ಪಂ.ಅಧ್ಯಕ್ಷ ಬಸವರಾಜು,ಪ್ರಬಾರಿ ಮುಖ್ಯಶಿಕ್ಷಕ ಯಲ್ಲಪ್ಪ,ಶಿಬಿರಾಧಿಕಾರಿಗಳಾದ ಶಂಕರಲಿಂಗಯ್ಯ,ಇಬ್ರಾಹಿಂ,ಜಯಪ್ರಕಾಶ್,ಅಶ್ವತ್ಥನಾರಾಯಣ,ಹಿರಿಯ ಉಪನ್ಯಾಸಕರಾದ ಮೂಗೇಶಪ್ಪ,ಶ್ರೀನಿವಾಸ್,ಹನುಮಂತಪ್ಪ ಗ್ರಾಮಸ್ಥರಾದ ನಂದೀಶಪ್ಪ,ರಾಜಮ್ಮ,ರಾಮಣ್ಣ ಇತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...