ವಿಷಯಕ್ಕೆ ಹೋಗಿ

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆ ಮೇಲು ; ಜಿಲ್ಲಾ ನ್ಯಾಯಾಧೀಶ ಹೆಚ್.ಬಿ.ಪ್ರಭಾಕರಶಾಸ್ತ್ರಿ

ಹುಳಿಯಾರಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಚಿ.ನಾ.ಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ ಮತ್ತು ಹೋಬಳಿಯ ನವ ಚೇತನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಸತ್ರನ್ಯಾಯಾಧೀಶರಾದ ಹೆಚ್.ಬಿ.ಪ್ರಭಾಕರಶಾಸ್ತ್ರಿ ಉದ್ಘಾಟಿಸಿದರು.

ಸರ್ವಜ್ಞ ಹೇಳಿರುವಂತೆ ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆ ಮೇಲು ಎಂಬುದು ಅಕ್ಷರಸಹ ಸತ್ಯ, ಎಲ್ಲಾ ವಿದ್ಯೆಗಳನ್ನು ಸುಲಭವಾಗಿ ತಿಳಿದು ಕರಗತ ಮಾಡಿಕೊಳ್ಳಬಹುದು ಆದರೆ ಮೇಟಿ ವಿದ್ಯೆಯನ್ನು ಅಂದರೆ ಕೃಷಿ ಮಾಡುವುದನ್ನು ಕಲಿಯುವುದು ಸುಲಭದ ಸಂಗತಿಯಲ್ಲ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಸತ್ರನ್ಯಾಯಾಧೀಶರು ಆದ ಹೆಚ್.ಬಿ.ಪ್ರಭಾಕರಶಾಸ್ತ್ರಿ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ , ಚಿ.ನಾ.ಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ ಮತ್ತು ಹೋಬಳಿಯ ನವ ಚೇತನ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಸಂಜೆ ನಡೆದ ರೈತಕೂಟ ಫಲಾನುಭವಿಗಳಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ಭಾರತ ದೇಶದ ಬೆನ್ನೆಲುಬೇ ಕೃಷಿಯಾಗಿದ್ದು, ಪ್ರಸ್ತುತ ಭಾರತದಲ್ಲಿ ಶೇ.65ರಷ್ಟು ಜನ ಕೃಷಿಯನ್ನೇ ಅವಲಂಭಿಸಿ ಕೃಷಿಕರಾಗಿದ್ದಾರೆ. ಇತರ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ದೇಶ ಆಗ್ರಸ್ಥಾನದಲ್ಲಿದೆ . ಹಾಗಿದ್ದೂ ಸಹ ಬದಲಾಗುತ್ತಿರುವ ಜಗತ್ತಿನಲ್ಲಿ ಕೃಷಿಯನ್ನು ನಂಬಿಕೂರುವುದು ಕಷ್ಟಕರ.ಅದರೂ ಕೂಡ ಕೃಷಿಯನ್ನು ಕೈಬಿಡದೆ ಅದರಲ್ಲಿನ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯಲ್ಲಿ ಯಶಸ್ಸು ಸಾಧಿಸಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು. ಯಾರು ಎಷ್ಟೆಲ್ಲಾ ಆದಾಯ ಗಳಿಸಿದರು ಹಸಿವು ನೀಗಿಸಲು ಕೃಷಿ ಬೇಕು, ಕೃಷಿಯ ರೀತಿನೀತಿಗಳು ಬದಲಾಗುತ್ತೆ ಹೊರತು ಕೃಷಿ ಯಾವುದೇ ಕಾಲಕ್ಕೂ ಬದಲಾಗುವುದಿಲ್ಲ ಎಂದರು.


ಇಂದು ಶ್ರೀಮಂತರು ತೆರಿಗೆಯಿಂದ ತಪ್ಪಿಸಿಕೊಳ್ಳಲು ಕೃಷಿಯ ಮೊರೆ ಹೋಗುತ್ತಾರೆ.ಕಾರಣ ಕೃಷಿಯಿಂದ ಬಂದ ಆದಾಯ ತೆರಿಗೆ ವಿನಾಯಿತಿಯನ್ನು ಹೊಂದಿರುತ್ತದೆ. ಇಂದು ರೈತ ತನ್ನ ಜಮೀನನ್ನು ಇನ್ನೊಬ್ಬರಿಗೆ ಕೊಟ್ಟು, ಅದೇ ಜಮೀನಿನಲ್ಲಿ ಮೂರನೇ ವ್ಯಕ್ತಿಯಾಗಿ ಕೂಲಿ ಕೆಲಸ ಮಾಡುತ್ತಿದ್ದಾನೆ.ಈ ರೀತಿ ಮಾಡದೆ ತಮ್ಮತಮ್ಮ ಜಮೀನಿನಲ್ಲೇ ವ್ಯವಸಾಯವನ್ನು ಮಾಡಿ,ಅದಕ್ಕೆ ಬೇಕಾದ ಸವಲತ್ತನ್ನು ಸರ್ಕಾರ ಒದಗಿಸಿ ಕೊಡುತ್ತದೆ. ಕಾನೂನುಗಳನ್ನು ತಿಳಿದು,ತಮ್ಮ ಹಕ್ಕನ್ನು ಪಡೆಯುವ ಮೂಲಕ ಪ್ರಗತಿಪರ ಹಾಗೂ ಪ್ರತಿಭಾವಂತ ರೈತರಾಗಿ ಎಂದು ಆಶಿಸಿದರು.


ರೈತರಿಗೆ ಕಾನೂನು ಅರಿವು ಏಕೆ ಬೇಕು? : ಜಗತ್ತಿಗೆ ಅನ್ನ ಕೊಡುವವನು ಕೃಷಿಕ, ಇತ ತಾನು ಬೆಳೆದ ಬೆಳೆಗೆ ಉತ್ತಮ ಬೆಲೆಯನ್ನು ಪಡೆಯಲು, ಮಧ್ಯವರ್ತಿಗಳ ಹಾವಳಿಯಿಂದ ತಪ್ಪಸಿ ಕೊಳ್ಳಲು,ನೌಕರಶಾಹಿ ವರ್ಗದವರ ಶೋಷಣೆಯಿಂದ ಪಾರಾಗಲು ಹಾಗೂ ನಮ್ಮ ಸಂವಿಧಾನದಲ್ಲಿ ಯಾವ ಕಾನೂನುಗಳು ರೈತರಿಗೆ ಉಪಯುಕ್ತವಾಗಿವೆ,ಅದರಿಂದ ನಾವು ಅಭಿವೃದ್ದಿ ಹೊಂದಬಹುದೆ, ಇಲ್ಲವೆ ಎಂಬುದನ್ನು ತಿಳಿಯಲು ಕಾನೂನಿನ ಅರಿವು ಬೇಕಿದೆ ಎಂದು ತಿಳಿಸಿದರು.


ವಕೀಲರಾದ ಕೆ.ಎಸ್.ಚಂದ್ರಶೇಖರ್ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಹಾಗೂ ವಕೀಲ ಜ್ಞಾನಮೂರ್ತಿ ಭೂ ಮಂಜೂರಾತಿ ಮತ್ತು ನೊಂದಣಿ ಕಾಯ್ದೆ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.


ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಾನಂದ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಕೆ.ಎಂ.ರಾಜಶೇಖರ್,ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ನಿರ್ಮಲ,ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎ.ಜಿ.ಶಿಲ್ಪ, ಜಿಲ್ಲಾ ಎಸ್.ಬಿ.ಎಂ. ಬ್ಯಾಂಕ್ ನ ಮಾರ್ಗದರ್ಶಕ ಶ್ರೀನಿವಾಸ್, ಶಿರಾ ವಕೀಲ ಸಂಘದ ಅಧ್ಯಕ್ಷ ಮುರುಳೀಧರ್, ಶಿರಾ ನವಚೇತನ ಸಂಸ್ಥೆಯ ಅಧ್ಯಕ್ಷ ಸತ್ಯನಾರಾಯಣಗುಪ್ತ,ನವ ಚೇತನ ಸಂಸ್ಥೆ ಕಾರ್ಯದರ್ಶಿ ಮಂಜುನಾಥ್ , ವಕೀಲರಾದ ಬಿ.ಕೆ. ಸದಾಶಿವು,ಚಂದ್ರಶೇಖರ್, ಷಡಾಕ್ಷರಿ,ವಿಶ್ವನಾಥ್, ರಮೇಶ್, ರಾಮಕೃಷ್ಣ ಸೇರಿದಂತೆ ಚಿ.ನಾ.ಹಳ್ಳಿ ವಕೀಲರ ಸಂಘದ ವಕೀಲರು ಹಾಗೂ ಸುತ್ತಮುತ್ತಲ ರೈತರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...