ವಿಷಯಕ್ಕೆ ಹೋಗಿ

ಕೆಲವೇ ಮಂದಿ ಗ್ರಾಮಸ್ಥರೊಂದಿಗೆ ಅಂತು-ಇಂತು ನಡೆಯಿತು ಗ್ರಾಮ ಸಭೆ

ಹುಳಿಯಾರು ಗ್ರಾಮ ಪಂಚಾಯ್ತಿ ಗ್ರಾಮಭೆಯಲ್ಲಿ ಮನೆ ಗ್ರಾಂಟ್ ಹಂಚುವ ಕಾರ್ಯಕ್ಕೆ ಸೂಕ್ತ ಪ್ರಚಾರವಿಲ್ಲದೆ ಹಾಜರಿದ್ದ ಕೆಲವೇ ಮಂದಿ ಫಲಾನುಭವಿಗಳು

ಗ್ರಾಮ ಪಂಚಾಯ್ತಿಯ 2011-12ನೇ ವರ್ಷದ ಅಂಬೇಡ್ಕರ್ ವಸತಿ ಯೋಜನೆ ಹಾಗೂ 2012-13ನೇ ಸಾಲಿನ ಇಂದಿರಾ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಸೋಮವಾರ ಪಂಚಾಯ್ತಿ ಆವರಣದಲ್ಲಿ ಕೆಲವೇ ಸಂಖ್ಯೆಯ ಗ್ರಾಮಸ್ಥರೊಂದಿಗೆ ಗ್ರಾಮ ಸಭೆ ನಡೆಯಿತು. ಸಭೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಗ್ರಾಮಸ್ಥರು ಹಾಜರಿದ್ದುದು ಕುಂಡುಬಂದಿತು,

ಶನಿವಾರ ನಡೆಯಬೇಕಿದ್ದ ಸಭೆ ಸೋಮವಾರಕ್ಕೆ ಮುಂದೂಡಿದ್ದು, ಪ್ರಚಾರ ಕೊರತೆಯಿಂದಾಗಿ ಜನರಲ್ಲಿ ಗ್ರಾಮಸಭೆಯ ಬಗ್ಗೆ ತಿಳಿಯದ ವಿಷಯವಾಗಿದೆ.ಅದರೂ ಸಹ ಹಾಜರಿದ್ದ ಕೆಲ ಸ್ತ್ರೀ ಶಕ್ತಿ ಸಂಘಗಳ ಮಹಿಳಾ ಫಲಾನುಭವಿಗಳೊಂದಿಗೆ ಗ್ರಾಮ ಸಭೆ ಅಂತು ಇಂತು ಜರುಗಿತು.


ಅಂಬೇಡ್ಕರ್ ವಸತಿ ಯೋಜನೆಯಡಿ ಮಂಜೂರಾಗಿದ್ದ 15 ಮನೆ ಗ್ರಾಂಟ್ ಗಳಲ್ಲಿ 10 ಮನೆ ಎಸ್ಸಿ ವರ್ಗಕ್ಕೂ,5 ಮನೆ ಎಸ್ ಟಿ ವರ್ಗಕ್ಕೆ ಹಾಗೂ ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ 26 ಮನೆ ಗ್ರಾಂಟ್ ಗಳಲ್ಲಿ ಎಸ್ಸಿ-ಎಸ್ಟಿಗೆ 16, ಅಲ್ಪಸಂಖ್ಯಾತರಿಗೆ 4, ಇತರೆ 6 ಮನೆ ಗ್ರಾಂಟ್ ಗಳನ್ನು ಹಂಚಿಕೆ ಮಾಡಲಾಯಿತು.


ಧ್ವನಿವರ್ದಕವಿಲ್ಲದೆ ನಡೆದ ಸಭೆಯುದ್ದಕ್ಕೂ ಗೊಂದಲಗಳೇ ಮನೆಮಾಡಿದ್ದವು,ಆಂಬೇಡ್ಕರ್ ಹಾಗೂ ಇಂದಿರಾ ಆವಾಸ್ ಯೋಜನೆಯಡಿ ಮಂಜೂರಾಗಿದ್ದ ಮನೆಗಳನ್ನು ಹಂಚಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಆದರೆ ಸಭೆಯಲ್ಲಿ ಅವರ ಹೆಸರು ಕೂಗಿದರೆ ಅಭ್ಯರ್ಥಿಗಳೇ ಹಾಜರಿರಲ್ಲಿಲ್ಲ. ಹಾಜರಿದ್ದ ಒಬ್ಬರಿಬ್ಬರಲ್ಲಿ ಒಬ್ಬರನ್ನು ಗುರ್ತಿಸಿ, ಪಂಚಾಯ್ತಿ ಸದಸ್ಯರ ಒಪ್ಪಿಗೆಯೊಂದಿಗೆ ಅವರ ಹೆಸರನ್ನು ಮನೆ ಗ್ರಾಂಟ್ ಗೆ ನೊಂದಾಯಿಸಲಾಗುತ್ತಿತ್ತು.ಅಲ್ಲದೆ ಸಭೆಗೆ ಬಾರದ ಫಲಾನುಭವಿಗಳನ್ನು ಸದಸ್ಯರೇ ಪೋನ್ ಮಾಡಿ ಕರೆಸಿ ಕೊಂಡು ಅವರಿಗೆ ಗ್ರಾಂಟ್ ನೀಡಲಾಗುತ್ತಿತು.


ಅಂಗವಿಕಲರಿಗೆ ಮನೆ ಕೊಡಿ : ಮಂಜೂರಾಗಿದ್ದ ಒಟ್ಟು ಮನೆ ಗ್ರಾಂಟ್ ನಲ್ಲಿ 2 ಗ್ರಾಂಟನ್ನು ಅಂಗವಿಕಲರಿಗೆ ನೀಡಬೇಕಿತ್ತು.ಅದರಂತೆ ಹುಳಿಯಾರಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕ್ಷೌರಿಕ ವೃತ್ತಿ ಮಾಡುತ್ತಿರುವ ಕೃಷ್ಣಪ್ಪ ಎಂಬಾತನ ಮಗಳಾದ ಗೀತಾ ಶೇ.90ರಷ್ಟು ಅಂಗವೈಕಲ್ಯತೆಯಿಂದ ಕೂಡಿದ್ದು,ಮನೆ ಗ್ರಾಂಟ್ ಗಾಗಿ ಅರ್ಜಿ ಹಾಕಿದ್ದರು.ಇವರ ಅರ್ಜಿಯನ್ನು ಮರೆತ್ತಿದ್ದ ಸಭೆಯಲ್ಲಿ ಹೋಬಳಿಯ ಟಿಪ್ಪು ಸಂಘದ ಪದಾಧಿಕಾರಿಗಳು ಧ್ವನಿಯತ್ತಿ ಹ್ಯಾಂಡಿಕ್ಯಾಪ್ಟ್ ಗೆ ಗ್ರಾಂಟ್ ಕೊಡದೆ,ಪಂಚಾಯ್ತಿ ಸದಸ್ಯರೊಂದಿಗೆ ಚನ್ನಾಗಿದ್ದವರಿಗೆ ಮಾತ್ರ ಗ್ರಾಂಟ್ ಕೊಡುತ್ತಿರಲ್ಲ ಇದು ಸರಿಯೇ ಎಂದು ಗುಡುಗಿದರು.ಟಿಪ್ಪು ಸಂಘದವರ ಜೊತೆ ಅಲ್ಲಿದ್ದ ಸಾರ್ವಜನಿಕರು ಗೀತಾ ಅವರಿಗೆ ಗ್ರಾಂಟ್ ಕೊಡಿ ಎಂದರು.ಅದರಂತೆಯೇ ಗ್ರಾಂಟ್ ನೀಡಲು ಒಪ್ಪಿದ ಅಧಿಕಾರಿಗಳು ಕೊನೆಗಳಿಗೆಯಲ್ಲಿ ತಮ್ಮ ವರಸೆಯನ್ನೇ ಬದಲಿಸಿ,ಗೀತಾ ಅವರ ಹೆಸರನ್ನು ಹೆಚ್ಚುವರಿ ಪಟ್ಟಿಯಲ್ಲಿ ಸೇರಿಸಿದ್ದು,ಮುಂದೆ ಬರುವ ಗ್ರಾಂಟ್ ನಲ್ಲಿ ಸೇರಿಸಿಕೊಳ್ಳುವುದಾಗಿ ಹೇಳಿ ಜಾರಿಕೊಂಡರು.



ಸಭೆಯಲ್ಲಿ ಬಿಸ್ಮಿಲ್ಲ ಸ್ವಸಹಾಯ ಸಂಘಕ್ಕೆ ಗುಂಪು ಸಾಲವನ್ನು, ಕಾಳಿಕಾಂಭ ಸಾಕ್ಷರತಾ ಸಂಘಕ್ಕೆ ಸುತ್ತುನಿಧಿಯನ್ನು ನೀಡಲು ಆಯ್ಕೆ ಮಾಡಲಾಯಿತು. ಗ್ರಾ.ಪಂ.ಅಧ್ಯಕ್ಷ ಅನ್ಸರ್ ಅಲಿ,ಉಪಾಧ್ಯಕ್ಷೆ ವೆಂಕಟಮ್ಮ,ಪಿಡಿಓ ರಾಜಣ್ಣ,ನೋಡೆಲ್ ಅಧಿಕಾರಿ ಹರ್ಷ ಸೇರಿದಂತೆ ಕೆಲ ಸದಸ್ಯರು ಮಾತ್ರ ಹಾಜರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...