ವಿಷಯಕ್ಕೆ ಹೋಗಿ

ಆಕಸ್ಮಿಕ ಬೆಂಕಿ :11 ಗುಡಿಸಲು ಸಂಪೂರ್ಣ ಭಸ್ಮ: ಬೀದಿ ಬಿದ್ದ ಜನ

ಹುಳಿಯಾರು ಶಂಕರಪುರ ಬಡಾವಣೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾಗಿರುವ ಬೈಕ್ ನ ಉಳಿದ ಅವಶೇಷ.


ಹುಳಿಯಾರು ಶಂಕರಪುರ ಬಡಾವಣೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟುಕರಕಲಾಗಿರುವ ೧೧ ಗುಡಿಸಲುಗಳು ಹಾಗೂ ಅದರಲ್ಲಿ ಆಳಿದುಳಿದ ವಸ್ತುಗಳು.
ಇಲ್ಲಿನ ಶಂಕರಪುರ ಬಡಾವಣೆಯಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸುಮಾರು 11 ಗುಡಿಸಲುಗಳು ಸಂಪೂರ್ಣ ಭಸ್ಮವಾಗಿದ್ದು,ಅದರಲ್ಲಿ ವಾಸಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿ ಬೀದಿಗೆ ಬಿದ್ದಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.

ಬುಧವಾರ ಮಧ್ಯರಾತ್ರಿ ಸರಿಸುಮಾರು 12ರ ಸಮಯದಲ್ಲಿ ಆಕಸ್ಮಿಕವಾಗಿ ಒಂದು ಗುಡಿಸಲಿನಲ್ಲಿ ಹತ್ತಿಕೊಂಡ ಬೆಂಕಿ ಕೆಲವೇ ಸಮಯದಲ್ಲಿ ತನ್ನ ಕೆನ್ನಾಲಿಗೆಯಿಂದ ತನ್ನ ಸುತ್ತಲಿನ 1೦ ಗುಡಿಸಲಿಗೆ ವ್ಯಾಪಿಸಿದ್ದರಿಂದ ಗುಡಿಸಲುಗಳು ಸಂಪೂರ್ಣ ಸುಟ್ಟುಕರಕಲಾಗಿವೆ. ಬೆಂಕಿಗಾಹುತಿಯಾಗಿರುವ ಗುಡಿಸಲುಗಳು ರಾಮಣ್ಣ,ರಂಗಸ್ವಾಮಿ, ದುರ್ಗಜ್ಜಿ,ರಂಗಮ್ಮ,ಶಬ್ಬೀನ,ಭಾಗ್ಯಮ್ಮ, ಸತೀಶ್,ರಂಗಣ್ಣ,ನಾಗಣ್ಣ, ದುರ್ಗಣ್ಣ,ಕೃಷ್ಣಪ್ಪ ಎಂಬುವರು ಎಂದು ತಿಳಿದು ಬಂದಿದ್ದು, ಓಲೆ,ಸೀರೆ,3ಸೈಕಲ್,ಹೊಲಿಗೆ ಯಂತ್ರ ಸೇರಿದಂತೆ ದಿನಸಿ ಪದಾರ್ಥಗಳು,ಮಕ್ಕಳ ಓದಿನ ಪುಸ್ತಕಗಳು,ಬಟ್ಟೆ-ಬರೆ,ಒಂದು ಬೈಕ್,ನಾರಿನ ಹಗ್ಗ ಹಾಗೂ ಸಾಕಿದ್ದ ಕೋಳಿಗಳು ಬೆಂಕಿಯ ಸುಳಿಗೆ ಸಿಕ್ಕಿ ಬೂದಿಯಾಗಿದ್ದು ಸುಮಾರು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.ಅಲ್ಲದೆ ಇದ್ದ ಸೂರನ್ನು ಕಳೆದುಕೊಂಡಿರುವ ಇವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಾಗಿದೆ.ಇವರೀಗ ಇತರರ ಆಸರೆಯನ್ನು ಪಡೆಯುವಂತಾಗಿದೆ.


ಮಧ್ಯರಾತ್ರಿ ಪಕ್ಕದ ಗುಡಿಸಲಿನವರು ಬೆಂಕಿ ಎಂದು ಕೂಗಿದರು.ಆಗ ಎದ್ದು ನೋಡಿದಾಗ ಬೆಂಕಿ ನಮ್ಮ ಗುಡಿಸಲುಗಳ ಸುತ್ತಾ ಆವರಿಸಿತ್ತು,ಗಾಬರಿಯಿಂದ ಹುಟ್ಟ ಬಟ್ಟೆಯಲ್ಲೇ ಮಕ್ಕಳನ್ನು ಕರೆದುಕೊಂಡು ಗುಡಿಸಲಿಂದ ಹೊರ ಬಂದೆವು.ಹೊರಬಂದು ನೋಡುವಷ್ಟರಲ್ಲೇ ಬೆಂಕಿ ಸಂಪೂರ್ಣ ಗುಡಿಸಲುಗಳನ್ನು ಸುತ್ತುವರೆದ್ದಿತ್ತು.ಏನ್ನನ್ನು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ,ಮಕ್ಕಳ ಓದಿನ ಪುಸ್ತಕ,ಬಟ್ಟೆ,ಆಹಾರ ಪದಾರ್ಥಗಳೇಲ್ಲಾ ಸುಟ್ಟಿದ್ದು,ಬೀದಿಗೆ ಬಿದ್ದಿದೇವೆ ಈಗ ನಮಗ್ಯಾರು ಗತಿ ಎಂದು ಗುಡಿಸಲು ಕಳೆದುಕೊಂಡ ಭಾಗ್ಯಮ್ಮ ಪತ್ರಿಕೆಯವರ ಮುಂದೆ ತಮ್ಮ ಆಳಲನ್ನು ತೋಡಿಕೊಂಡರು,


ದುರ್ಗಜ್ಜಿ ಎಂಬಾಕೆ ತನ್ನ ಸಣ್ಣ ಗುಡಿಸಲಿನಲ್ಲೇ ಚಿಕ್ಕದೊಂದು ಅಂಗಡಿಯನ್ನಿಟ್ಟುಕೊಂಡು ತನ್ನ ದಿನ ನಿತ್ಯದ ಜೀವನ ಸಾಗಿಸುತ್ತಿದ್ದು, ಅಂಗಡಿಯಲ್ಲಿದ್ದ ಎಲ್ಲಾ ಸರಕು ಸರಂಜಾಮುಗಳು ಬೆಂಕಿಗೆ ಬಲಿಯಾಗಿವೆ.


ತಹಶೀಲ್ದಾರ್ ಉಮೇಶ್ಚಂದ್ರ ಘಟನಾ ಸ್ಥಳಕ್ಕೆ ಆಗಮಿಸಿ ತಮ್ಮಿಂದಾಗು ಸಹಾಯವನ್ನು ಮಾಡುವುದಾಗಿ ತಿಳಿಸಿದರು.ತಾ.ಪಂ.ಅಧ್ಯಕ್ಷ ಸೀತಾರಾಂ ಗುಡಿಸಲು ಕಳೆದುಕೊಂಡು ಬೀದಿ ಪಾಲಾದ ನಿರ್ಗತಿಕರ ಕುಟುಂಬಗಳಿಗೆ ತಮ್ಮ ನಿಧಿಯಿಂದ ತಲಾ ಒಂದು ಸಾವಿರ ಪರಿಹಾರ ಹಣ ನೀಡುವುದಾಗಿ ತಿಳಿಸಿದರು. ತಾ.ಪಂ.ಉಪಾಧ್ಯಕ್ಷೆ ಬೀಬೀ ಫಾತೀಮಾ,ಜಿ.ಪಂ.ಸದಸ್ಯೆ ಮಂಜುಳಮ್ಮ,ಗ್ರಾ.ಪಂ.ಉಪಾಧ್ಯಕ್ಷೆ ವೆಂಕಟಮ್ಮ,ಸದಸ್ಯ ರಾಘವೇಂದ್ರ ನಿರ್ಗತಿಕರಿಗೆ ಸಾಂತ್ವಾನ ಹೇಳಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...