ವಿಷಯಕ್ಕೆ ಹೋಗಿ

ಈ ಬಾರಿ ಬಜೆಟ್ ನಲ್ಲಿ ತಾ.ಪಂ.ಗೆ ಹೆಚ್ಚಿನ ಅನುದಾನ ಕೊಟ್ಟು ಅಭಿವೃದ್ಧಿಗೆ ಸಹಕರಿಸಿ : ತಾ.ಪಂ.ಸದಸ್ಯ ನವೀನ್ ಮನವಿ

ಸುಮಾರು ಹತ್ತು ಸಾವಿರ ಮತದಾರರಿಂದ ಆಯ್ಕೆಯಾದ ತಾ.ಪಂ.ಸದಸ್ಯರಿಗೆ ಪ್ರಸ್ತುತ ಸರ್ಕಾರದಿಂದ ಬರುತ್ತಿರುವ ಕನಿಷ್ಠ ಅನುದಾನದಿಂದ ತಾಲ್ಲೂಕಿನಲ್ಲಿ ಹೆಚ್ಚಿನ ಅಭಿವೃದ್ದಿಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ.ಈ ಬಾರಿಯಾದರೂ ಬಜೆಟ್ ನಲ್ಲಿ ಮಾನ್ಯಮುಖ್ಯಮಂತ್ರಿಗಳು ತಾಲ್ಲೂಕು ಪಂಚಾಯ್ತಿಗಳಿಗೆ ಹೆಚ್ಚಿನ ಅನುದಾನ ಕೊಡಿ ಎಂದು ತಾ.ಪಂ.ಸದಸ್ಯ ಕೆಂಕೆರೆ ನವೀನ್ ಮನವಿ ಪತ್ರ ಸಲ್ಲಿಸಿದ್ದಾರೆ.

ತಾ.ಪಂ.ಸದಸ್ಯರಿಗೆ ನೀಡುವ 5ಲಕ್ಷ ಅನುದಾನದಲ್ಲಿ ಯಾವ ಕಾರ್ಯ ಮಾಡಬೇಕು ಎಂಬ ಯಕ್ಷಪಶ್ನೆಗಳು ಮೂಡುತ್ತಿವೆ.ಕಾರಣ ಸರ್ಕಾರದಿಂದ ಬರುವ ಈ ಅನುದಾನದಲ್ಲಿ ನಮ್ಮ ವ್ಯಾಪ್ತಿಗೆ ಬರುವ 8ರಿಂದ 10 ಹಳ್ಳಿಗಳ ಅಭಿವೃದ್ದಿ ಹೇಗೆ ಸಾಧ್ಯ.ಅಲ್ಲದೆ ಕುಡಿಯುವ ನೀರಿನ ವ್ಯವಸ್ಥೆ,ಶಾಲಾ ಕಟ್ಟಡ ನಿರ್ಮಾಣ,ಶೌಚಾಲಯ,ದಾರಿದೀಪದ ವ್ಯವಸ್ಥೆ,ಸ್ಮಶಾನ ಅಭಿವೃದ್ದಿ,ಸಾರ್ವಜನಿಕ ಗ್ರಂಥಾಲಯದ ನಿರ್ವಹಣೆ ಹಾಗೂ ಇನ್ನಿತರ ಗ್ರಾಮೀಣಾಭಿವೃದ್ದಿ ಕಾರ್ಯಗಳು ತಾ.ಪಂ.ಸದಸ್ಯರ ಮೇಲಿದೆ.ಅಲ್ಲದೆ ಕನಿಷ್ಠ ಅನುದಾನದಿಂದ ಬಡವರ ಕಷ್ಟಕ್ಕೂ ಸ್ಪಂದಿಸಲು ಸಾಧ್ಯವಾಗದೇ ಹಾಗೂ ಅಭಿವೃದ್ದಿ ಕಾರ್ಯಗಳನ್ನು ಪೂರೈಸಲು ಸಾಧ್ಯವಾಗದ ಶೋಚನೀಯ ಸ್ಥಿತಿಯಲ್ಲಿದ್ದೇವೆ. ಇದನ್ನು ಮನಗಂಡ ಮಾನ್ಯಮುಖ್ಯಮಂತ್ರಿಗಳು ಸೂಕ್ತ ಗಮನ ಹರಿಸಿ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ತಾ.ಪಂ.ಸದಸ್ಯರು ಸಮಾಜಮುಖಿ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಮಾಡಿದರೆ ಪ್ರದೇಶಾಗಳ ಅಭಿವೃದ್ದಿ ಸಾಧ್ಯವಾಗುತ್ತದೆ.


ಚಿಕ್ಕನಾಯಕನಹಳ್ಳಿ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಹೆಚ್ಚಿನ ಸಮಸ್ಯೆಗಳಿಂದ ಕೂಡಿದೆ. ಸರಿಯಾಗಿ ಮಳೆಯಾಗದೆ ಕೆರೆಕಟ್ಟೆಗಳು ಹಿಂಗಿ ಹೋಗಿದ್ದು, ಜಾನುವಾರುಗಳು,ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ.ಅಲ್ಲದೆ ಭೂಮಿಯ ಅಂರ್ತಜಲವು ಕ್ಷಿಣಿಸುತ್ತಿದ್ದು ಕೊಳವೆಬಾವಿಗಳು ಬತ್ತಿಹೋಗಿವೆ. ಇದರಿಂದ ಸ್ಥಳಿಯ ಗ್ರಾ.ಪಂ. ಗಳು ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗದಿದ್ದರಿಂದ ಜನರು ತಾ.ಪಂ.ಸದಸ್ಯರ ಬೆನ್ನು ಬಿದ್ದಿದ್ದಾರೆ.ಆದರೆ ಸರ್ಕಾರದ ಅನುದಾನ ಸಣ್ಣ ಪುಟ್ಟ ಸಮಸ್ಯೆಗಳ ನಿವಾರಣೆಗೆ ಸಾಕಾಗುತ್ತಿಲ್ಲವೆಂಬ ಗೊಂದಲಉಂಟಾಗಿ ತಾ.ಪಂ.ಸದಸ್ಯರು ತಮ್ಮ ಅಸಹಾಯಕತೆಯನ್ನು ಅಭಿವ್ಯಕ್ತಿಸುವಂತಾಗಿದೆ.


ಇಂತಹ ಹತ್ತು ಹಲವು ಸಮಸ್ಯೆಗಳಿಂದ ಕೂಡಿರುವ ತಾ.ಪಂ.ಗಳಿಗೆ ರಾಜ್ಯ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಹೆಚ್ಚಿನ ಅನುದಾನವನ್ನು ನೀಡಿ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ದಿಗೆ,ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನ ಕಾರ್ಯವಾಗಲಿ ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...