ವಿಷಯಕ್ಕೆ ಹೋಗಿ

ಮಕ್ಕಳ ಉತ್ತಮ ಚಾರಿತ್ರ್ಶಕ್ಕೆ ನಿರ್ಮಾಕ್ಕೆ ಶಿಕ್ಷಣ ಅವಶ್ಯ : ಸ್ವಾಮೀಜಿ ಸಲಹೆ

ಹುಳಿಯಾರಿನ ಸುರ್ವಣಮುಖಿ ಕ್ಯಾಂಪಸ್ ನ ವಿಧ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ 2011-12ನೇ ಸಾಲೀನ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ತುಮಕೂರಿನ ರಾಮಕೃಷ್ನಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹಿತನುಡಿ ನುಡಿದರು.

ಮಾನವ ಸ್ವಾವಲಂಭಿಯಾಗಿ ಬಾಳಲಾದ ಇಂದಿನ ಸಮಾಜದಲ್ಲಿ ಇತರರೊಂದಿಗೆ ಬೆರತು ಬಾಳಬೇಕಾದರೆ ಆತನು ಉತ್ತಮ ಗುಣಗಳನ್ನು ತನ್ನಲ್ಲಿ ಮೈಗೂಡಿಸಿಕೊಂಡಿರಬೇಕು.ಅಂತಹ ಹತ್ತು ಹಲವು ಉತ್ತಮ ಚಾರಿತ್ರ್ಶದ ಗುಣಗಳನ್ನು ಶಿಕ್ಷಣ ನೀಡುತ್ತದೆಂದು ತುಮಕೂರಿನ ರಾಮಕೃಷ್ಣಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು.

ಹೋಬಳಿಯ ಸುರ್ವಣಮುಖಿ ಕ್ಯಾಂಪಸ್ ನ ವಿಧ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ 2011-12ನೇ ಸಾಲೀನ ಶಾರದಾ ಪೂಜಾ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿದರು.


ಭೂಮಿಯ ಮೇಲೆ ಮಾನವನ ಒಬ್ಬ ಅದ್ಬುತ ಜೀವಿಯಾಗಿದ್ದು,ಅಮೀಬಾದಿಂದ ಮಾನವನ ವಿಕಾಸವಾಗಿದ್ದರೂ ಸಹ ಮಾನವ ಮಹಾತ್ಮನಾಗುವುದೇ ನಿಜವಾದವಿಕಾಸ ಎಂದರು. ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳಿಗಿಂತ ಬುದ್ದಿವಂತ ಮನುಷ್ಯನಾಗಿದ್ದಾನೆ.ಇದಕ್ಕೆ ಕಾರಣ ಶಿಕ್ಷಣವಾಗಿದೆ. ಈತ ತಾನು ಪಡೆದ ಶಿಕ್ಷಣಾದಿಂದ ತನಗೆ ಬೇಕಾದ್ದನು ಪಡೆಯಲು ನಾನಾ ಆವಿಷ್ಕಾರಗಳನ್ನು ಮಾಡುತ್ತಿದ್ದಾನೆ.ವಿದ್ಯೆಯೆಂದು ಯಾರೊಬ್ಬರ ಮನೆ ಸೊತ್ತಲ್ಲ ಅದನ್ನು ಯಾರುಬೇಕಾದರೂ ಪಡೆಯುವಂತಹ ಹಾಗೂ ಎಲ್ಲಾ ಕಾಲದಲ್ಲೂ ಸಿಗುವಂತಹದ್ದು.ನಾವು ಗಳಿಸಿದ ಸಂಪತ್ತನ್ನು ಯಾರುಬೇಕಾದರು ಕಸಿದುಕೊಳ್ಳಬಹುದು ಆದರೆ ವಿದ್ಯೆಯೆಂಬ ಮಹಾನ್ ಸಂಪತ್ತನ್ನು ಯಾರಿಂದಲೂ ಕಿತ್ತುಕೊಳ್ಳಲಾಗುವುದಿಲ್ಲ,ಇದು ಮನುಷ್ಯನ ಅಂತ್ಯದಲ್ಲಿಯೆ ಕೊನೆಯಾಗುವುದು ಎಂದಿದ್ದಾರೆ. ಚಕ್ರವರ್ತಿಗಳಿಂದ ಪೂಜಿಸಲ್ಪಡುವಂತಹದ್ದು ವಿದ್ಯೆ.ಇಂತಹ ವಿದ್ಯೆ ಪ್ಪ್ರ್ತಿಯೊಬ್ಬರಿಗೆ ದಾರಿಪೀಪವಾಗಿ,ಉತ್ತಮ ಮಾರ್ಗದಲ್ಲಿ ಕೊಂಡೈಯುವ ಸಾಧನವಾಗಿದ್ದು, ಉತ್ತಮ ಚಾರಿತ್ರ್ಯದ ನಿರ್ಮಾಣಕ್ಕೆ ಶಿಕ್ಷಣ ಅತ್ಯವಶ್ಯಕವಾದ್ದು ಎಂದು ತಿಳಿಸಿದರು.


ಸಮಾರಂಭ ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಹಾಗೂ ಬಸಪ್ಪ ಮರುಳಪ್ಪ ಸೇವಾ ಟ್ರಸ್ಟ್ ನ ಕೆ.ಎಸ್.ಕಿರಣ್ ಕುಮಾರ್ ಮಾತನಾಡಿ ಇಂದಿನ ಮೊಬೈಲ್ ಯುಗದಲ್ಲಿ ಯುವಪಿಳಿಗೆ ತಮ್ಮ ಶಿಕ್ಷಣದಲ್ಲಿ ಹಿನ್ನೆಡೆಯುತ್ತಿದ್ದಾರೆ.ಸೈಬರ್ ಕೆಫೆಯಂತಹ ಹಲವು ಇಂಟರ್ ನೆಟ್ ಕೇಂದ್ರಗಳು ಪಟ್ಟಣದಾದ್ಯಂತ ನಾಯಿಕೊಡೆಗಳಂತೆ ತಲೆಯತ್ತಿದ್ದು,ಮಕ್ಕಳನ್ನು ಆಕರ್ಷಿಸಲು ಮುಂದಾಗಿವೆ.ಇಲ್ಲಿಗೆ ಮಕ್ಕಳು ಪೋಷಕರ ಮಾತನ್ನು ಮೀರಿ ಹೋಗುತ್ತಿದ್ದು,ಕೆಟ್ಟಕಲಿಕೆಗೆ ಒಳಗಾಗುತ್ತಿದ್ದಾರೆ.ಇದರ ಬಗ್ಗೆ ಪೊಷಕರು ಹೆಚ್ಚೆತ್ತು ಮಕ್ಕಳ ಉತ್ತಮ ಭವಿಷ್ಯಕ್ಕೆ ಅಗತ್ಯವಾದ ವಾತಾವರಣವನ್ನು ಕಲ್ಪಿಸಿಕೊಡಿ ಎಂದರು.


ವಿಧ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ ಕವಿತಾ,ಸರ್ಕಾರಿ ಬಿಎಂಎಸ್ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಮೂಗೇಶಪ್ಪ,ಚಂದ್ರಶೇಖರ್,ಕನಕದಾಸ ವಿದ್ಯಾಸಂಸ್ಥೆಯ ಶಿವಪ್ರಕಾಶ್,ಶಾಲೆಯ ಪ್ರಿನ್ಸಿಪಾಲ್ ರವಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು,ಮಕ್ಕಳು,ಪೋಷಕರು ಹಾಜರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...