ವಿಷಯಕ್ಕೆ ಹೋಗಿ

ಗ್ರಾಮಪಂಚಾಯ್ತಿ ಹಾಗೂ ಕಂದಾಯ ಇಲಾಖಾಧಿಕಾರಿಗಳಿಂದ ರೈತರ ಸುಲಿಗೆ : ಪ್ರತಿಭಟನೆ

ರೈತರುಗಳ ಬಗರ್ ಹುಕುಂ ಜಮೀನಿನ ಮೂಂಜೂರಾತಿ , ಅಂಗವಿಕಲ,ವಿಧವಾ ವೇತನ, ವೃದ್ಯಾಪ್ಯ ವೇತನ ಹಾಗೂಇನ್ನಿತರ ಸಮಸ್ಯೆಗಳ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ಕಂದಾಯ ಇಲಾಖಾಧಿಕಾರಿಗಳನ್ನು ಕೇಳಿದರೆ ಅವರು ನಮ್ಮಗಳೊಂದಿಗೆ ಸ್ಪಂದಿಸದೆ ಕೆಲಸ ಮಾಡಿಕೊಡಲು ಇಂತಿಷ್ಟು ಹಣ ಕೊಡಿ ಎಂದು ಕೇಳುವ ಮೂಲಕ ರೈತರ ಸುಲಿಗೆ ಮಾಡುತ್ತಿದ್ದಾರೆಂದು ಆರೋಪಿಸಿ ಹೊಯ್ಸಲಕಟ್ಟೆಯ ಸುತ್ತಲಿನ ಗ್ರಾಮದ ರೈತರುಗಳು ಶನಿವಾರದಂದು ಹೋಬಳಿಯ ನಾಡಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಹೊಯ್ಸಲಕಟ್ಟೆ,ದಸೂಡಿ,ದಬ್ಬ ಗುಂಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರುಗಳು ಹುಳಿಯಾರಿನ ನಾಡ ಕಛೇರಿಗೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯ್ತಿ,ಕಂದಾಯ ಇಲಾಖಾಧಿಕಾರಿಗಳು ನಮ್ಮ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸದೆ,ನಮ್ಮನ್ನು ಶೋಷಿಸುತ್ತಿದ್ದು ನಮಗೆ ನ್ಯಾಯ ದೊರೆಕಿಸಿಕೊಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಕೆಲ ವೃದ್ದರು,ಅಂಗವಿಕಲರುಗಳಿಗೆ ಸರ್ಕಾರದಿಂದ ಬರುತ್ತಿದ್ದ ವೇತನವನ್ನು ಉದ್ದೇಶ ಪೂರ್ವಕವಾಗಿ ತಡೆಹಿಡಿದ್ದಾರೆ. ಸರ್ಕಾರ ಈ ಹಿಂದೆ ಸಂಧ್ಯಾಸುರಕ್ಷ,ವೃದ್ದಾಪ್ಯ,ಅಂಗವಿಕಲವೇತನ ಪಡೆಯುವ ಫಲಾನುಭವಿಗಳ ಗಣತಿ ಕಾರ್ಯ ಮಾಡಿಸಿದ್ದಾಗ ಗಣತಿ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳು ಗ್ರಾಮದ ಯಾವುದೊ ಒಂದು ಸ್ಥಳಕ್ಕೆ ಬಂದು ತಮಗೆ ಬೇಕಾದವರಿಂದ ಮಾಹಿತಿ ಪಡೆದಿದ್ದಾರೆ.ಜೊತೆಗೆ ಕೆಲ ಅರ್ಹ ಫಲಾನುಭವಿಗಳಿಗೆ ಈ ವೇತನ ತಪ್ಪುವಂತೆ ಮಾದಿದ್ದಾರೆ, ಅಧಿಕಾರಿಗಳೇ ಹೀಗೆ ಮಾಡಿದರೆ,ನಾವು ಈ ಬಗ್ಗೆ ಯಾರಲ್ಲಿ ಕೇಳುವುದು ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.


ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಉಮೇಶ್ಚಂದ್ರ ರೊಂದಿಗೆ ದೂರು ನೀಡಿದ ಪ್ರತಿಭಟನಾ ನಿರತರು ಬಗರ್ ಹುಕುಂ ನಲ್ಲಿ ಜಮೀನ ಬಗ್ಗೆ ಮಾಹಿತಿ ಕೇಳುವ ರೈತರ ಮೇಲೆ ದಬಾ ಯಿಸುವುದಲ್ಲದೆ,ಲಂಚಕೇಳುತ್ತಿದ್ದು,ಲಂಚ ಕೊಟ್ಟವರಿಗೆ ಮಾತ್ರ ಕೆಲಸ ಮಾಡಿ ಕೊಡುತ್ತಿರುವ ಇಂತಹ ಅಧಿಕಾರಿಗಳಿಗೆ ಸರ್ಕಾರಿ ಸಂಬಳ ಸಾಲುತ್ತಿಲ್ಲವೆ ಎಂದು ಪ್ರಶ್ನಿಸಿದರು,ರೈತರ ಸಮಸ್ಯೆಗಳನ್ನು ಆಲಿಸದ ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..


ರೈತರ ಸಮಸ್ಯೆಗಳನ್ನು ಆಲಿಸಿದ ತಹಶೀಲ್ದಾರ್ ಉಮೇಶ್ಚಂದ್ರ ಬಗರ್ ಹುಕುಂ ನಲ್ಲಿ ಮಂಜೂರಾಗಿರುವ ರೈತರು ಯಾವುದೇ ರೀತಿಯ ಹಣವನ್ನು ಯಾರಿಗೂ ನೀಡಬೇಡಿ,ನಾನೇ ಖುದ್ದು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ತಿಳಿಸಿದರು. ಈ ಮುಂಚೆ ಅಂಗವಿಕಲ,ವಿಧವಾ ವೇತನ, ವೃದ್ಯಾಪ್ಯ ವೇತನ ಪಡೆಯುತ್ತಿದ್ದು,ಈಗ ವೇತನ ಬಾರದೇ ಇರುವ ಅರ್ಹಫಲಾನುಭವಿಗಳು ಮತ್ತೆ ಅರ್ಜಿಯನ್ನು ನೀಡಿದಲ್ಲಿ , ಅದನ್ನು ಶೀಘ್ರ ಪರಿಶೀಲಿಸಿ ಅವರಿಗೆ ವೇತನವನ್ನು ಮುಂಜೂರು ಮಾಡಿಸುವುದಾಗಿ ತಿಳಿಸಿ ರೈತರನ್ನು ಸಮಾಧಾನ ಪಡಿಸಿ ಪ್ರತಿಭಟನೆಯನ್ನು ಹಿಂಡೆಯುವಂತೆ ಮಾಡಿದರು.


ತಹಶೀಲ್ದಾರ್ ಮಾತಿಗೆ ಒಪ್ಪಿ ಧರಣಿ ಹಿಂಪಡೆದ ರೈತರು ಈ ಸಮಸ್ಯೆಗೆಳಿಗೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಪುನಃ ಮತ್ತೊಮ್ಮೆ ಉಪವಾಸ ಧರಣಿಯನ್ನು ನಡೆಸುವುದಾಗಿ ಎಚ್ಚರಿಕೆ ಮಾತುಗಳಾನ್ನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.