ವಿಷಯಕ್ಕೆ ಹೋಗಿ

ಗ್ರಾಮಪಂಚಾಯ್ತಿ ಹಾಗೂ ಕಂದಾಯ ಇಲಾಖಾಧಿಕಾರಿಗಳಿಂದ ರೈತರ ಸುಲಿಗೆ : ಪ್ರತಿಭಟನೆ

ರೈತರುಗಳ ಬಗರ್ ಹುಕುಂ ಜಮೀನಿನ ಮೂಂಜೂರಾತಿ , ಅಂಗವಿಕಲ,ವಿಧವಾ ವೇತನ, ವೃದ್ಯಾಪ್ಯ ವೇತನ ಹಾಗೂಇನ್ನಿತರ ಸಮಸ್ಯೆಗಳ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ಕಂದಾಯ ಇಲಾಖಾಧಿಕಾರಿಗಳನ್ನು ಕೇಳಿದರೆ ಅವರು ನಮ್ಮಗಳೊಂದಿಗೆ ಸ್ಪಂದಿಸದೆ ಕೆಲಸ ಮಾಡಿಕೊಡಲು ಇಂತಿಷ್ಟು ಹಣ ಕೊಡಿ ಎಂದು ಕೇಳುವ ಮೂಲಕ ರೈತರ ಸುಲಿಗೆ ಮಾಡುತ್ತಿದ್ದಾರೆಂದು ಆರೋಪಿಸಿ ಹೊಯ್ಸಲಕಟ್ಟೆಯ ಸುತ್ತಲಿನ ಗ್ರಾಮದ ರೈತರುಗಳು ಶನಿವಾರದಂದು ಹೋಬಳಿಯ ನಾಡಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಹೊಯ್ಸಲಕಟ್ಟೆ,ದಸೂಡಿ,ದಬ್ಬ ಗುಂಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರುಗಳು ಹುಳಿಯಾರಿನ ನಾಡ ಕಛೇರಿಗೆ ಮುತ್ತಿಗೆ ಹಾಕಿ ಗ್ರಾಮ ಪಂಚಾಯ್ತಿ,ಕಂದಾಯ ಇಲಾಖಾಧಿಕಾರಿಗಳು ನಮ್ಮ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸದೆ,ನಮ್ಮನ್ನು ಶೋಷಿಸುತ್ತಿದ್ದು ನಮಗೆ ನ್ಯಾಯ ದೊರೆಕಿಸಿಕೊಡಬೇಕೆಂದು ಒತ್ತಾಯಿಸಿದರು. ಅಲ್ಲದೆ ಕೆಲ ವೃದ್ದರು,ಅಂಗವಿಕಲರುಗಳಿಗೆ ಸರ್ಕಾರದಿಂದ ಬರುತ್ತಿದ್ದ ವೇತನವನ್ನು ಉದ್ದೇಶ ಪೂರ್ವಕವಾಗಿ ತಡೆಹಿಡಿದ್ದಾರೆ. ಸರ್ಕಾರ ಈ ಹಿಂದೆ ಸಂಧ್ಯಾಸುರಕ್ಷ,ವೃದ್ದಾಪ್ಯ,ಅಂಗವಿಕಲವೇತನ ಪಡೆಯುವ ಫಲಾನುಭವಿಗಳ ಗಣತಿ ಕಾರ್ಯ ಮಾಡಿಸಿದ್ದಾಗ ಗಣತಿ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳು ಗ್ರಾಮದ ಯಾವುದೊ ಒಂದು ಸ್ಥಳಕ್ಕೆ ಬಂದು ತಮಗೆ ಬೇಕಾದವರಿಂದ ಮಾಹಿತಿ ಪಡೆದಿದ್ದಾರೆ.ಜೊತೆಗೆ ಕೆಲ ಅರ್ಹ ಫಲಾನುಭವಿಗಳಿಗೆ ಈ ವೇತನ ತಪ್ಪುವಂತೆ ಮಾದಿದ್ದಾರೆ, ಅಧಿಕಾರಿಗಳೇ ಹೀಗೆ ಮಾಡಿದರೆ,ನಾವು ಈ ಬಗ್ಗೆ ಯಾರಲ್ಲಿ ಕೇಳುವುದು ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.


ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಉಮೇಶ್ಚಂದ್ರ ರೊಂದಿಗೆ ದೂರು ನೀಡಿದ ಪ್ರತಿಭಟನಾ ನಿರತರು ಬಗರ್ ಹುಕುಂ ನಲ್ಲಿ ಜಮೀನ ಬಗ್ಗೆ ಮಾಹಿತಿ ಕೇಳುವ ರೈತರ ಮೇಲೆ ದಬಾ ಯಿಸುವುದಲ್ಲದೆ,ಲಂಚಕೇಳುತ್ತಿದ್ದು,ಲಂಚ ಕೊಟ್ಟವರಿಗೆ ಮಾತ್ರ ಕೆಲಸ ಮಾಡಿ ಕೊಡುತ್ತಿರುವ ಇಂತಹ ಅಧಿಕಾರಿಗಳಿಗೆ ಸರ್ಕಾರಿ ಸಂಬಳ ಸಾಲುತ್ತಿಲ್ಲವೆ ಎಂದು ಪ್ರಶ್ನಿಸಿದರು,ರೈತರ ಸಮಸ್ಯೆಗಳನ್ನು ಆಲಿಸದ ಇಂತಹ ಭ್ರಷ್ಟ ಅಧಿಕಾರಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು..


ರೈತರ ಸಮಸ್ಯೆಗಳನ್ನು ಆಲಿಸಿದ ತಹಶೀಲ್ದಾರ್ ಉಮೇಶ್ಚಂದ್ರ ಬಗರ್ ಹುಕುಂ ನಲ್ಲಿ ಮಂಜೂರಾಗಿರುವ ರೈತರು ಯಾವುದೇ ರೀತಿಯ ಹಣವನ್ನು ಯಾರಿಗೂ ನೀಡಬೇಡಿ,ನಾನೇ ಖುದ್ದು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ತಿಳಿಸಿದರು. ಈ ಮುಂಚೆ ಅಂಗವಿಕಲ,ವಿಧವಾ ವೇತನ, ವೃದ್ಯಾಪ್ಯ ವೇತನ ಪಡೆಯುತ್ತಿದ್ದು,ಈಗ ವೇತನ ಬಾರದೇ ಇರುವ ಅರ್ಹಫಲಾನುಭವಿಗಳು ಮತ್ತೆ ಅರ್ಜಿಯನ್ನು ನೀಡಿದಲ್ಲಿ , ಅದನ್ನು ಶೀಘ್ರ ಪರಿಶೀಲಿಸಿ ಅವರಿಗೆ ವೇತನವನ್ನು ಮುಂಜೂರು ಮಾಡಿಸುವುದಾಗಿ ತಿಳಿಸಿ ರೈತರನ್ನು ಸಮಾಧಾನ ಪಡಿಸಿ ಪ್ರತಿಭಟನೆಯನ್ನು ಹಿಂಡೆಯುವಂತೆ ಮಾಡಿದರು.


ತಹಶೀಲ್ದಾರ್ ಮಾತಿಗೆ ಒಪ್ಪಿ ಧರಣಿ ಹಿಂಪಡೆದ ರೈತರು ಈ ಸಮಸ್ಯೆಗೆಳಿಗೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಪುನಃ ಮತ್ತೊಮ್ಮೆ ಉಪವಾಸ ಧರಣಿಯನ್ನು ನಡೆಸುವುದಾಗಿ ಎಚ್ಚರಿಕೆ ಮಾತುಗಳಾನ್ನಾಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...