ವಿಷಯಕ್ಕೆ ಹೋಗಿ

ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಡುವ ಸಾರಥಿ ಆತ್ಮ : ಡಾ|| ಬಿ.ಕೆ.ಬಸವರಾಜರಾಜಋಷಿ

ಮಾನವ ತನ್ನ ದೇಹದಲ್ಲಿನ ಪಂಚೇಂದ್ರಿಯಗಳನ್ನು ಸರಿಯಾಗಿ ನಿಯಂತ್ರಣದಲ್ಲಿಟ್ಟು ಕೊಳ್ಳದೇ ನಾನಾ ರೀತಿಯ ಕಾರ್ಯಗಳಲ್ಲಿ ತೊಡಗುವ ಮೂಲಕ ತನ್ನ ಜೀವನದಲ್ಲಿ ನೆಮ್ಮದಿ,ಶಾಂತಿ ಇಲ್ಲದಂತೆ ಮಾಡಿಕೊಳ್ಳುತ್ತಿದ್ದಾನೆ. ಇಂತಹ ದೇಹವೆಂಬ ರಥದಲ್ಲಿನ ಪಂಚೇಂದ್ರಿಯಗಳೆಂಬ ಕುದುರೆಗಳನ್ನು ನಿಯಂತ್ರಣದಲ್ಲಿಡುವಂತ ಸಾರಥಿ ಆತ್ಮವಾಗಿದೆ ಎಂದು ಹುಬ್ಬಳ್ಳಿ ವಲಯದ ಈಶ್ವರೀ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ ಬಿ.ಕೆ.ಬಸವರಾಜ ರಾಜಋಷಿಯವರು ತಿಳಿಸಿದರು.

ಇಲ್ಲಿನ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾನಿಲಯದಿಂದ ನೂತನವಾಗಿ ನಿರ್ಮಿಸಿರುವ ರಾಜ ಭವನ ಉದ್ಘಾಟನೆಯ ಅಂಗವಾಗಿ ಒಂದು ತಿಂಗಳುಗಳಕಾಲ ಪ್ರತಿ ದಿನ ಸಂಜೆ ಏರ್ಪಡಿಸಿರುವ ಶರಣರು ಕಂಡ ಶಿವ ಎಂಬ ಪ್ರವಚನ ಮಾಲೆಯಲ್ಲಿ ಅವರು ಪ್ರವಚನ ನೀಡಿದರು.


ನಮ್ಮ ದೇಹ ಕ್ಷಣ ಕ್ಷಣಕ್ಕೂ ತನ್ನ ರೂಪವನ್ನು ಬದಲಿಸುತ್ತಿರುತ್ತದೆ.ಇದನ್ನು ಗಮನಿಸದೇ ನಡೆದಾಗ ಅದರ ಸ್ವರೂಪವೇನು ಎಂಬುದು ತಿಳಿಯುವುದಿಲ್ಲ.ಆಸ್ಥಿಪಂಜರದಿಂದಾದ ಈ ದೇಹಕ್ಕೆ ಚರ್ಮದ ಹೊದಿಕೆಯಿಂದ ಒಂದು ರೂಪ ಬಂದಿದೆ ಎಂದರು.ಮಾನವ ತಾನು ಮಾಡುವ ಎಲ್ಲಾ ಕಾರ್ಯಗಳಾನ್ನು ನಾನೇ ಮಾಡಿದ್ದು ಎಂದು ಬೀಗುತ್ತಾನೆ,ಆದರೆ ಈ ಕಾರ್ಯಗಳನ್ನು ಮಾಡುವಂತೆ ಮಾಡುವುದು ಆತ್ಮವೆಂಬ ಜ್ಯೋತಿ.ಇದನ್ನರಿಯದವರು ಕುರುಡರೂ,ಮೂರ್ಖರೂ ಆಗಿರುತ್ತಾರೆ ಎಂದರು.


ಕೇವಲ ತಪಸ್ಸಿನಿಂದ ಮಾತ್ರ ಶಾಂತಿ,ನೆಮ್ಮದಿ ದೊರೆಯುವುದಿಲ್ಲ,ಇದರಿಂದ ದೇಹದಂಡನೆಯಾಗುತ್ತದೆ.ನಾವು ಯಾವಾಗ ಆತ್ಮ ಶುದ್ದಿ ಮಾಡಿಕೊಲ್ಳುತ್ತೇವೆ ಆಗ ಶಾಂತಿ,ನೆಮ್ಮದಿ ಲಭಿಸುತ್ತವೆ.ಇಡೀ ನಮ್ಮದೇಹವನ್ನು ನಿಯಂತ್ರಿಸುವ ಆತ್ಮವೆಂಬ ಜ್ಯೋತಿಯಿಂದ ಮಾನವ ಎಂತಹ ಕಾರ್ಯವನ್ನಾದರೂ ಸಾಧಿಸಭುದಾಗಿದೆ.ಇದರಿಂದ ತನ್ನ ಜೀವನವನ್ನು ಸುಲಲಿತವಾಗಿ ಸಾಗಿಸಬಹುದು ಎಂದರು.ಆತ್ಮಶಾಂತಿ ಪಡೆಯಬೇಕಾದೆ ಅದು ಧ್ಯಾನದಿಂದಲೆ ಸಾಧ್ಯ ಎಂದು ತಿಳಿಸಿದರು.


ಇಂದಿನ ಯುವಜನತೆಗೆ ಸಾಮಾಜಿಕ ಜ್ಞಾನ,ನೈತಿಕ ಜ್ಞಾನ,ಆಧ್ಯಾತ್ಮಿಕಜ್ಞಾನದ ಅರಿವು ಅತೀ ಮುಖ್ಯ.ಇದನ್ನು ತಿಳಿಯುವುದರಿಂದ ತಮ್ಮ ಮುಂದಿನ ಜೀವನದಲ್ಲಿ ಇಅತರರೊಂದಿಗೆ ಯಾವರೀತಿ ಬದುಕಿ ಬಾಳಬೆಕೆಂಬುದನ್ನು ತಿಳಿಸುತ್ತವೆ.ಇಂದು ಸಂಪತ್ತು ಹೆಚ್ಚಾದಂತೆ ಆಶಾಂತಿ,ಒತ್ತಡ ಹೆಚ್ಚಾಗಿದ್ದು,ಮಾನವ ತನ್ನ ದೇಹವನ್ನು ನಾನಾ ರೋಗಗಳಿಗೆ ಮನೆ ಮಾಡಿಕೊಟ್ಟಿದ್ದಾನೆ ಎಂದು ತಿಳಿಸಿದರು.


ನಮ್ಮ ದೇಹವನ್ನು ಯಂತ್ರಗಳಿಗೆ ಹೋಲಿಸಿ ಹೇಳುವಲ್ಲಿ ಮಾನವನ ಮೆದುಳು ಕಂಪ್ಯೂಟರ್ ಇದ್ದಂತೆ,ಕಣ್ಣುಗಳು ಕ್ಯಾಮರವಿದ್ದಂತೆ,ಕಿವಿಗಳು ಪೋನ್ ರೀಸಿವರ್ ಗಳಂತೆ,ಜಠರ ಗ್ರೈಂಡರ್ ನಂತೆ ವಿವಿಧ ಬಾಗಗಳನ್ನು ವಿವಿಧ ಯಂತ್ರಗಳಂತೆ ತಮ್ಮ ಕಾರ್ಯ ಮಾಡುತ್ತಿರುತ್ತವೆ.ಆದ್ರೆ ಇವುಗಳನ್ನೆಲ್ಲಾ ನಿಯಂತ್ರಿಸುವುದೇ ಆತ್ಮ ಎಂದು ತಿಳಿಸಿದರು.


ಪ್ರವಚನ ಕಾರ್ಯಕ್ರಮದಲ್ಲಿ ಕಲ್ಪತರು ಬ್ರಿಕ್ಸ್ ನ ಮಾಲೀಕ ಟಿ.ಎಸ್.ರಂಗನಾಥ ಶ್ರೇಷ್ರ್ಠಿ,ಡಾ ಸಿದ್ದರಾಮಯ್ಯ, ಜಿ.ಎಂ.ನೀಲಕಂಠಯ್ಯ,ಡಾ ರಾಜಶೇಖರ್ ಸೇರಿದಂತೆ ಅಕ್ಕಂದಿರು ಹಾಗೂ ಸಾರ್ವಜನಿಕರು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...