ವಿಷಯಕ್ಕೆ ಹೋಗಿ

ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಡುವ ಸಾರಥಿ ಆತ್ಮ : ಡಾ|| ಬಿ.ಕೆ.ಬಸವರಾಜರಾಜಋಷಿ

ಮಾನವ ತನ್ನ ದೇಹದಲ್ಲಿನ ಪಂಚೇಂದ್ರಿಯಗಳನ್ನು ಸರಿಯಾಗಿ ನಿಯಂತ್ರಣದಲ್ಲಿಟ್ಟು ಕೊಳ್ಳದೇ ನಾನಾ ರೀತಿಯ ಕಾರ್ಯಗಳಲ್ಲಿ ತೊಡಗುವ ಮೂಲಕ ತನ್ನ ಜೀವನದಲ್ಲಿ ನೆಮ್ಮದಿ,ಶಾಂತಿ ಇಲ್ಲದಂತೆ ಮಾಡಿಕೊಳ್ಳುತ್ತಿದ್ದಾನೆ. ಇಂತಹ ದೇಹವೆಂಬ ರಥದಲ್ಲಿನ ಪಂಚೇಂದ್ರಿಯಗಳೆಂಬ ಕುದುರೆಗಳನ್ನು ನಿಯಂತ್ರಣದಲ್ಲಿಡುವಂತ ಸಾರಥಿ ಆತ್ಮವಾಗಿದೆ ಎಂದು ಹುಬ್ಬಳ್ಳಿ ವಲಯದ ಈಶ್ವರೀ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ ಬಿ.ಕೆ.ಬಸವರಾಜ ರಾಜಋಷಿಯವರು ತಿಳಿಸಿದರು.

ಇಲ್ಲಿನ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾನಿಲಯದಿಂದ ನೂತನವಾಗಿ ನಿರ್ಮಿಸಿರುವ ರಾಜ ಭವನ ಉದ್ಘಾಟನೆಯ ಅಂಗವಾಗಿ ಒಂದು ತಿಂಗಳುಗಳಕಾಲ ಪ್ರತಿ ದಿನ ಸಂಜೆ ಏರ್ಪಡಿಸಿರುವ ಶರಣರು ಕಂಡ ಶಿವ ಎಂಬ ಪ್ರವಚನ ಮಾಲೆಯಲ್ಲಿ ಅವರು ಪ್ರವಚನ ನೀಡಿದರು.


ನಮ್ಮ ದೇಹ ಕ್ಷಣ ಕ್ಷಣಕ್ಕೂ ತನ್ನ ರೂಪವನ್ನು ಬದಲಿಸುತ್ತಿರುತ್ತದೆ.ಇದನ್ನು ಗಮನಿಸದೇ ನಡೆದಾಗ ಅದರ ಸ್ವರೂಪವೇನು ಎಂಬುದು ತಿಳಿಯುವುದಿಲ್ಲ.ಆಸ್ಥಿಪಂಜರದಿಂದಾದ ಈ ದೇಹಕ್ಕೆ ಚರ್ಮದ ಹೊದಿಕೆಯಿಂದ ಒಂದು ರೂಪ ಬಂದಿದೆ ಎಂದರು.ಮಾನವ ತಾನು ಮಾಡುವ ಎಲ್ಲಾ ಕಾರ್ಯಗಳಾನ್ನು ನಾನೇ ಮಾಡಿದ್ದು ಎಂದು ಬೀಗುತ್ತಾನೆ,ಆದರೆ ಈ ಕಾರ್ಯಗಳನ್ನು ಮಾಡುವಂತೆ ಮಾಡುವುದು ಆತ್ಮವೆಂಬ ಜ್ಯೋತಿ.ಇದನ್ನರಿಯದವರು ಕುರುಡರೂ,ಮೂರ್ಖರೂ ಆಗಿರುತ್ತಾರೆ ಎಂದರು.


ಕೇವಲ ತಪಸ್ಸಿನಿಂದ ಮಾತ್ರ ಶಾಂತಿ,ನೆಮ್ಮದಿ ದೊರೆಯುವುದಿಲ್ಲ,ಇದರಿಂದ ದೇಹದಂಡನೆಯಾಗುತ್ತದೆ.ನಾವು ಯಾವಾಗ ಆತ್ಮ ಶುದ್ದಿ ಮಾಡಿಕೊಲ್ಳುತ್ತೇವೆ ಆಗ ಶಾಂತಿ,ನೆಮ್ಮದಿ ಲಭಿಸುತ್ತವೆ.ಇಡೀ ನಮ್ಮದೇಹವನ್ನು ನಿಯಂತ್ರಿಸುವ ಆತ್ಮವೆಂಬ ಜ್ಯೋತಿಯಿಂದ ಮಾನವ ಎಂತಹ ಕಾರ್ಯವನ್ನಾದರೂ ಸಾಧಿಸಭುದಾಗಿದೆ.ಇದರಿಂದ ತನ್ನ ಜೀವನವನ್ನು ಸುಲಲಿತವಾಗಿ ಸಾಗಿಸಬಹುದು ಎಂದರು.ಆತ್ಮಶಾಂತಿ ಪಡೆಯಬೇಕಾದೆ ಅದು ಧ್ಯಾನದಿಂದಲೆ ಸಾಧ್ಯ ಎಂದು ತಿಳಿಸಿದರು.


ಇಂದಿನ ಯುವಜನತೆಗೆ ಸಾಮಾಜಿಕ ಜ್ಞಾನ,ನೈತಿಕ ಜ್ಞಾನ,ಆಧ್ಯಾತ್ಮಿಕಜ್ಞಾನದ ಅರಿವು ಅತೀ ಮುಖ್ಯ.ಇದನ್ನು ತಿಳಿಯುವುದರಿಂದ ತಮ್ಮ ಮುಂದಿನ ಜೀವನದಲ್ಲಿ ಇಅತರರೊಂದಿಗೆ ಯಾವರೀತಿ ಬದುಕಿ ಬಾಳಬೆಕೆಂಬುದನ್ನು ತಿಳಿಸುತ್ತವೆ.ಇಂದು ಸಂಪತ್ತು ಹೆಚ್ಚಾದಂತೆ ಆಶಾಂತಿ,ಒತ್ತಡ ಹೆಚ್ಚಾಗಿದ್ದು,ಮಾನವ ತನ್ನ ದೇಹವನ್ನು ನಾನಾ ರೋಗಗಳಿಗೆ ಮನೆ ಮಾಡಿಕೊಟ್ಟಿದ್ದಾನೆ ಎಂದು ತಿಳಿಸಿದರು.


ನಮ್ಮ ದೇಹವನ್ನು ಯಂತ್ರಗಳಿಗೆ ಹೋಲಿಸಿ ಹೇಳುವಲ್ಲಿ ಮಾನವನ ಮೆದುಳು ಕಂಪ್ಯೂಟರ್ ಇದ್ದಂತೆ,ಕಣ್ಣುಗಳು ಕ್ಯಾಮರವಿದ್ದಂತೆ,ಕಿವಿಗಳು ಪೋನ್ ರೀಸಿವರ್ ಗಳಂತೆ,ಜಠರ ಗ್ರೈಂಡರ್ ನಂತೆ ವಿವಿಧ ಬಾಗಗಳನ್ನು ವಿವಿಧ ಯಂತ್ರಗಳಂತೆ ತಮ್ಮ ಕಾರ್ಯ ಮಾಡುತ್ತಿರುತ್ತವೆ.ಆದ್ರೆ ಇವುಗಳನ್ನೆಲ್ಲಾ ನಿಯಂತ್ರಿಸುವುದೇ ಆತ್ಮ ಎಂದು ತಿಳಿಸಿದರು.


ಪ್ರವಚನ ಕಾರ್ಯಕ್ರಮದಲ್ಲಿ ಕಲ್ಪತರು ಬ್ರಿಕ್ಸ್ ನ ಮಾಲೀಕ ಟಿ.ಎಸ್.ರಂಗನಾಥ ಶ್ರೇಷ್ರ್ಠಿ,ಡಾ ಸಿದ್ದರಾಮಯ್ಯ, ಜಿ.ಎಂ.ನೀಲಕಂಠಯ್ಯ,ಡಾ ರಾಜಶೇಖರ್ ಸೇರಿದಂತೆ ಅಕ್ಕಂದಿರು ಹಾಗೂ ಸಾರ್ವಜನಿಕರು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.