ವಿಷಯಕ್ಕೆ ಹೋಗಿ

ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಡುವ ಸಾರಥಿ ಆತ್ಮ : ಡಾ|| ಬಿ.ಕೆ.ಬಸವರಾಜರಾಜಋಷಿ

ಮಾನವ ತನ್ನ ದೇಹದಲ್ಲಿನ ಪಂಚೇಂದ್ರಿಯಗಳನ್ನು ಸರಿಯಾಗಿ ನಿಯಂತ್ರಣದಲ್ಲಿಟ್ಟು ಕೊಳ್ಳದೇ ನಾನಾ ರೀತಿಯ ಕಾರ್ಯಗಳಲ್ಲಿ ತೊಡಗುವ ಮೂಲಕ ತನ್ನ ಜೀವನದಲ್ಲಿ ನೆಮ್ಮದಿ,ಶಾಂತಿ ಇಲ್ಲದಂತೆ ಮಾಡಿಕೊಳ್ಳುತ್ತಿದ್ದಾನೆ. ಇಂತಹ ದೇಹವೆಂಬ ರಥದಲ್ಲಿನ ಪಂಚೇಂದ್ರಿಯಗಳೆಂಬ ಕುದುರೆಗಳನ್ನು ನಿಯಂತ್ರಣದಲ್ಲಿಡುವಂತ ಸಾರಥಿ ಆತ್ಮವಾಗಿದೆ ಎಂದು ಹುಬ್ಬಳ್ಳಿ ವಲಯದ ಈಶ್ವರೀ ವಿಶ್ವವಿದ್ಯಾನಿಲಯದ ನಿರ್ದೇಶಕ ಡಾ ಬಿ.ಕೆ.ಬಸವರಾಜ ರಾಜಋಷಿಯವರು ತಿಳಿಸಿದರು.

ಇಲ್ಲಿನ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾನಿಲಯದಿಂದ ನೂತನವಾಗಿ ನಿರ್ಮಿಸಿರುವ ರಾಜ ಭವನ ಉದ್ಘಾಟನೆಯ ಅಂಗವಾಗಿ ಒಂದು ತಿಂಗಳುಗಳಕಾಲ ಪ್ರತಿ ದಿನ ಸಂಜೆ ಏರ್ಪಡಿಸಿರುವ ಶರಣರು ಕಂಡ ಶಿವ ಎಂಬ ಪ್ರವಚನ ಮಾಲೆಯಲ್ಲಿ ಅವರು ಪ್ರವಚನ ನೀಡಿದರು.


ನಮ್ಮ ದೇಹ ಕ್ಷಣ ಕ್ಷಣಕ್ಕೂ ತನ್ನ ರೂಪವನ್ನು ಬದಲಿಸುತ್ತಿರುತ್ತದೆ.ಇದನ್ನು ಗಮನಿಸದೇ ನಡೆದಾಗ ಅದರ ಸ್ವರೂಪವೇನು ಎಂಬುದು ತಿಳಿಯುವುದಿಲ್ಲ.ಆಸ್ಥಿಪಂಜರದಿಂದಾದ ಈ ದೇಹಕ್ಕೆ ಚರ್ಮದ ಹೊದಿಕೆಯಿಂದ ಒಂದು ರೂಪ ಬಂದಿದೆ ಎಂದರು.ಮಾನವ ತಾನು ಮಾಡುವ ಎಲ್ಲಾ ಕಾರ್ಯಗಳಾನ್ನು ನಾನೇ ಮಾಡಿದ್ದು ಎಂದು ಬೀಗುತ್ತಾನೆ,ಆದರೆ ಈ ಕಾರ್ಯಗಳನ್ನು ಮಾಡುವಂತೆ ಮಾಡುವುದು ಆತ್ಮವೆಂಬ ಜ್ಯೋತಿ.ಇದನ್ನರಿಯದವರು ಕುರುಡರೂ,ಮೂರ್ಖರೂ ಆಗಿರುತ್ತಾರೆ ಎಂದರು.


ಕೇವಲ ತಪಸ್ಸಿನಿಂದ ಮಾತ್ರ ಶಾಂತಿ,ನೆಮ್ಮದಿ ದೊರೆಯುವುದಿಲ್ಲ,ಇದರಿಂದ ದೇಹದಂಡನೆಯಾಗುತ್ತದೆ.ನಾವು ಯಾವಾಗ ಆತ್ಮ ಶುದ್ದಿ ಮಾಡಿಕೊಲ್ಳುತ್ತೇವೆ ಆಗ ಶಾಂತಿ,ನೆಮ್ಮದಿ ಲಭಿಸುತ್ತವೆ.ಇಡೀ ನಮ್ಮದೇಹವನ್ನು ನಿಯಂತ್ರಿಸುವ ಆತ್ಮವೆಂಬ ಜ್ಯೋತಿಯಿಂದ ಮಾನವ ಎಂತಹ ಕಾರ್ಯವನ್ನಾದರೂ ಸಾಧಿಸಭುದಾಗಿದೆ.ಇದರಿಂದ ತನ್ನ ಜೀವನವನ್ನು ಸುಲಲಿತವಾಗಿ ಸಾಗಿಸಬಹುದು ಎಂದರು.ಆತ್ಮಶಾಂತಿ ಪಡೆಯಬೇಕಾದೆ ಅದು ಧ್ಯಾನದಿಂದಲೆ ಸಾಧ್ಯ ಎಂದು ತಿಳಿಸಿದರು.


ಇಂದಿನ ಯುವಜನತೆಗೆ ಸಾಮಾಜಿಕ ಜ್ಞಾನ,ನೈತಿಕ ಜ್ಞಾನ,ಆಧ್ಯಾತ್ಮಿಕಜ್ಞಾನದ ಅರಿವು ಅತೀ ಮುಖ್ಯ.ಇದನ್ನು ತಿಳಿಯುವುದರಿಂದ ತಮ್ಮ ಮುಂದಿನ ಜೀವನದಲ್ಲಿ ಇಅತರರೊಂದಿಗೆ ಯಾವರೀತಿ ಬದುಕಿ ಬಾಳಬೆಕೆಂಬುದನ್ನು ತಿಳಿಸುತ್ತವೆ.ಇಂದು ಸಂಪತ್ತು ಹೆಚ್ಚಾದಂತೆ ಆಶಾಂತಿ,ಒತ್ತಡ ಹೆಚ್ಚಾಗಿದ್ದು,ಮಾನವ ತನ್ನ ದೇಹವನ್ನು ನಾನಾ ರೋಗಗಳಿಗೆ ಮನೆ ಮಾಡಿಕೊಟ್ಟಿದ್ದಾನೆ ಎಂದು ತಿಳಿಸಿದರು.


ನಮ್ಮ ದೇಹವನ್ನು ಯಂತ್ರಗಳಿಗೆ ಹೋಲಿಸಿ ಹೇಳುವಲ್ಲಿ ಮಾನವನ ಮೆದುಳು ಕಂಪ್ಯೂಟರ್ ಇದ್ದಂತೆ,ಕಣ್ಣುಗಳು ಕ್ಯಾಮರವಿದ್ದಂತೆ,ಕಿವಿಗಳು ಪೋನ್ ರೀಸಿವರ್ ಗಳಂತೆ,ಜಠರ ಗ್ರೈಂಡರ್ ನಂತೆ ವಿವಿಧ ಬಾಗಗಳನ್ನು ವಿವಿಧ ಯಂತ್ರಗಳಂತೆ ತಮ್ಮ ಕಾರ್ಯ ಮಾಡುತ್ತಿರುತ್ತವೆ.ಆದ್ರೆ ಇವುಗಳನ್ನೆಲ್ಲಾ ನಿಯಂತ್ರಿಸುವುದೇ ಆತ್ಮ ಎಂದು ತಿಳಿಸಿದರು.


ಪ್ರವಚನ ಕಾರ್ಯಕ್ರಮದಲ್ಲಿ ಕಲ್ಪತರು ಬ್ರಿಕ್ಸ್ ನ ಮಾಲೀಕ ಟಿ.ಎಸ್.ರಂಗನಾಥ ಶ್ರೇಷ್ರ್ಠಿ,ಡಾ ಸಿದ್ದರಾಮಯ್ಯ, ಜಿ.ಎಂ.ನೀಲಕಂಠಯ್ಯ,ಡಾ ರಾಜಶೇಖರ್ ಸೇರಿದಂತೆ ಅಕ್ಕಂದಿರು ಹಾಗೂ ಸಾರ್ವಜನಿಕರು ಆಗಮಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...