ವಿಷಯಕ್ಕೆ ಹೋಗಿ

ಹೆಚ್ಚಿನ ಸಾಮಾಜಿಕ ಸೌಲಭ್ಯ ಪಡೆಯುವ ಮೂಲಕ ಮಹಿಳೆಯರು ಸಬಲರಾಗಬೇಕು : ಪ್ರಾಚಾರ್ಯ ಇಂದಿರಮ್ಮ

ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಇಂದಿನ ಮಹಿಳೆಯರು,ಪುರುಷರಿಗೆ ತಾವೇನೂ ಕಡಿಮೆಯಲ್ಲ ಎಂಬುದನ್ನು ತೋರ್ಪಡಿಸುತ್ತಿದ್ದು, ಮಹಿಳೆಯರು ಇನ್ನೂ ಹೆಚ್ಚಿನ ಸಾಮಾಜಿಕ ಸೌಲಭ್ಯಗಳನ್ನು ಪಡೆಯುವ ಮೂಲಕ ಸಬಲರಾಬೇಕು ಎಂದು ಪ್ರಾಚಾರ್ಯ ಎನ್.ಇಂದಿರಮ್ಮ ಅಭಿಪ್ರಾಯಪಟ್ಟರು.

ಇಲ್ಲಿನ ಬಸವೇಶ್ವರ ನಗರದಲ್ಲಿ ಸೃಜನ ಸಂಘದವರು ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಮಹಿಳೆ ಮತ್ತು ಸಮಾಜ ಎಂಬ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿದರು.


ಪ್ರಕೃತಿದತ್ತವಾಗಿ ಮಾನವ,ಮನುಷ್ಯ ಎಂದು ಕರೆಯಲ್ಪಡುವ ಜೀವಿಗಳಲ್ಲಿ ಗಂಡು-ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರ್ತಿಸಿದ್ದು, ಇಂದಿನ ಸಮಾಜದಲ್ಲಿ ಪುರುಷ,ಮಹಿಳೆ ಎಂಬ ಯಾವುದೇ ಬೇಧ ಭಾವವಿಲ್ಲ ಎಂದರು.ಅದೇ ನಿಟ್ಟಿನಲ್ಲಿ ಸೃಜನಾ ಮಹಿಳಾ ಸಂಘಟನೆಯು ಗಂಡು-ಹೆಣ್ಣು ಎಂದು ಪ್ರತ್ಯೇಕವಾಗಿ ನೋಡದೇ,ತಮ್ಮಲ್ಲಿನ ಸಂಘಟನೆಯನ್ನು ಬಿಂಬಿಸುತ್ತಿದೆ ಎಂದು ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗಿಂತ ಪುರುಷರು ಅನೇಕ ಮಾರಕ ರೋಗಗಳಿಂದ ಬಳಲುತ್ತಿದ್ದಾರೆ.ಅದರಂತೇ ಮಹಿಳೆಯರು ಸಹ ಏಡ್ಸ್,ಸ್ತನಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಉತ್ತಮ ಆರೋಗ್ಯದ ಬಗೆಗಿನ ವಿಚಾರಗಳನ್ನು,ಕಾನೂನುಗಳನ್ನು ತಿಳಿಯುವುದರೊಂದಿಗೆ ಅನೇಕ ಸಾಮಾಜಿಕ ಸೌಲಭ್ಯಗಳನ್ನು ಮಹಿಳೆಯರು ಪಡೆಯುವ ಮೂಲಕ ಸಮಾಜದಲ್ಲಿ ಸಬಲರಾಗಿ ಬಾಳಬೇಕಿದೆ ಎಂದು ಸಲಹೆ ನೀಡಿದರು.


ಮಹಿಳೆ ಮತ್ತು ಆರೋಗ್ಯ ಎಂಬ ವಿಷಯವನ್ನು ಕುರಿತಂತೆ ಡಾಸಿ.ಎನ್.ರಂಗನಾಥ್ ಮಾತನಾಡಿ,ಮಹಿಳೆ ತನ್ನ ಆರೋಗ್ಯವನ್ನು ಮೊದಲು ಚೆನ್ನಾಗಿರಿಸಿಕೊಳ್ಳಬೇಕು. ಕಾರಣ ಒಂದು ಮನೆಯಲ್ಲಿ ತಾಯಿ ಆರೋಗ್ಯವಾಗಿದ್ದರೆ,ಆಕೆ ತನ್ನ ಇಡೀ ಮನೆಯ ಸದಸ್ಯರ ಆರೋಗ್ಯದ ಕಡೆ ಗಮನ ನೀಡುತ್ತಾಳೆ ಎಂದರು.ಅಲ್ಲದೆ ಇಂದು ಮಹಿಳೆಯರು ಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜದಲ್ಲಿ ರಾಜಕೀಯವಾಗಿ,ಆರ್ಥಿಕವಾಗಿ ಮೇಲೇರುತ್ತಿದ್ದಾರೆ,ಆದರೆ ಈ ಸಾಧನೆ ಇನ್ನೂ ಹೆಚ್ಚಿನದಾಗಬೇಕಾದರೆ ಮಹಿಳೆಯರೆಲ್ಲರೂ ಉತ್ತಮ ಹಾಗೂ ಉನ್ನತ ಶಿಕ್ಷಣ ಪಡೆಯಬೇಕಿದೆ ಎಂದರು.


ಚಿಕ್ಕನಾಯಕನಹಳ್ಳಿ ಸೃಜನಾ ಸಂಘದ ಅಧ್ಯಕ್ಷೆ ಎಲ್.ಜಯಮ್ಮ,ಉಪಾಧ್ಯಕ್ಷೆ ಕವಿತಾ ಚನ್ನಬಸವಯ್ಯ ತುಳಸಿ ಸಸಿಗೆ ನೀರು ಹಾಕುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ,ಸೃಜನ ಕೈಬರಹ ಪತ್ರಿಕೆಯನ್ನು ಆನಾವರಣ ಮಾಡಲಾಯಿತು.ಸಂಘದ ಕಾರ್ಯದರ್ಶಿ ಜಯಲಕ್ಷ್ಮಿ ಹಾಗೂ ಮಹಿಳಾ ವಿಭಾಗದ ಸಂಚಾಲಕಿ ಚಂದ್ರಕಲಾ ಪ್ರಾಸ್ತಾವಿಕ ನುಡಿನುಡಿದರು,ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯದರ್ಶಿ ರಾಮಕೃಷ್ಣಪ್ಪ ನಿರೂಪಿಸಿ,ಸೃಜನ ಸಂಘದ ಕಾರ್ಯದರ್ಶಿ ಪೂರ್ಣಮ್ಮ ವಂದಿಸಿದರು


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.