ವಿಷಯಕ್ಕೆ ಹೋಗಿ
ಮಡಲಕ್ಕಿ ಸೇವೆಯೊಂದಿಗೆ ದುರ್ಗಮ್ಮನ ಜಾತ್ರೆಗೆ ತೆರೆ

ಇಲ್ಲಿನ ಗ್ರಾಮದೇವತೆ ದುರ್ಗಾಪರಮೇಶ್ವರಿದೇವಿಯ 42ನೇ ವರ್ಷದ ಜಾತ್ರಾಮಹೋತ್ಸವಕ್ಕೆ ಭಾನುವಾರ ಗ್ರಾಮಸ್ಥರಿಂದ ಮಡಲಕ್ಕಿ ಸೇವೆ ಕಾರ್ಯ ನಡೆಯುವ ಮೂಲಕ ತಾ.7ರ ಶನಿವಾರ ರಿಂದ ತಾ.14ರ ಶನಿವಾರವರೆಗೆ ನಡೆದ ಎಂಟು ದಿನಗಳ ಕಾಲದ ಜಾತ್ರೆಗೆ ತೆರೆ ಎಳೆಯಲಾಗಿದೆ.

ಜಾತ್ರೆಯುದ್ದಕ್ಕೂ ಪ್ರತಿನಿತ್ಯ ವಿವಿಧ ಪೂಜೆ, ಧಾರ್ಮಿಕ ಕೈಂಕರ್ಯಗಳನ್ನು ಕೈಗೊಂಡಿದ್ದು, ನೂರಾರು ಭಕ್ತರು ಆಗಮಿಸಿದ್ದರು. ತಾ.8ರ ಭಾನುವಾರ ಕಾಮಶೆಟ್ಟಿಪಾಳ್ಯ,ಸೋಮಜ್ಜನಪಾಳ್ಯದಲ್ಲಿ ಮಡಲಕ್ಕಿ ಸೇವೆ ನಡೆದು,ತಾ.9ರ ಸೋಮವಾರ ಅಮ್ಮನವರಿಗೆ ಎಡೆಸೇವೆ,ಧ್ವಜಾರೋಹಣ ಮತ್ತು ಅಂಕುರಾಪಣೆ ಕಾರ್ಯಗಳು ಹಾಗೂ ತಾ.10ರ ಮಂಗಳವಾರ ಆರತಿಬಾನ,ಎಡೆಸೇವೆ,ತಾ.11ರ ಬುಧವಾರ ರಾತ್ರಿ ಹುಳಿಯಾರಮ್ಮ,ಕೆಂಚಮ್ಮ,ಹೊಸಳ್ಳಿ ಕೊಲ್ಲಾಪುರದಮ್ಮ,ಗೌಡಗೆರೆ ದುರ್ಗಮ್ಮ,ತಿರುಮಲಾಪುರದ ಕೊಲ್ಲಾಪುರದಮ್ಮ ದೇವರುಗಳ ಆಗಮನದೊಂದಿಗೆ ಕೂಡು ಭೇಟಿ ಕಾರ್ಯ , ತಾ.12ರ ಗುರುವಾರ ಬೆಳಗಿನ ಜಾವ ಕಳಸ ಸ್ಥಾಪನೆ ಹಾಗೂ ಕಳಸೋತ್ಸವ ಹಾಗೂ ರಾತ್ರಿ ಅಮ್ಮನವರ ಉಯ್ಯಾಲೆ ಉತ್ಸವ ನಡೆದು, ತಾ.13ರ ಶುಕ್ರವಾರ ಬೆಳಿಗ್ಗೆಯಿಂದ ನಾಗರಾಜು ಅರ್ಚಕರ ನೇತೃತ್ವದಲ್ಲಿ ದುರ್ಗಾಹೋಮ,108 ತೆಂಗಿನಕಾಯಿ ಗಣಹೋಮ, ಕಲಾವೃದ್ದಿ ಹೋಮದೊಂದಿಗೆ ಪುರ್ಣಾಹುತಿ ಕಾರ್ಯ ಹಾಗೂ ಮಧ್ಯಾಹ್ನ ಅಮ್ಮನವರ ಬ್ರಹ್ಮರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.ಅಲ್ಲದೆ ದೇವಿಮಹಾತ್ಮೆ ಸಂಘದವರು ದೇವಿಮಹಾತ್ಮೆ, ಯಕ್ಷಗಾನ ಪೌರಾಣಿಕ ನಾಟಕವನ್ನು ಅಭಿನಯಿಸಿದರು. ತಾ.14ರ ಶನಿವಾರ ಬೆಳಿಗ್ಗೆ ಸಿಡಿ ಕಾರ್ಯ ಹಾಗೂ ಓಕಳಿ ಸೇವೆ ನಡೆದು,ಕಂಕಣ ವಿಸರ್ಜನೆ ಕಾರ್ಯ , ತಾ,15ರ ಭಾನುವಾರ ಗ್ರಾಮಸ್ಥರಿಂದ ಆಗಮಿಸಿದ್ದ ದೇವರುಗಳಿಗೆ ಮಡಲಕ್ಕಿ ಸೇವೆ ನಡೆಯುವುದರೊಂದಿಗೆ ಜಾತ್ರೆಗೆ ತೆರೆಎಳೆಯಲಾಯಿತು.

ಜಾತ್ರಾಮಹೋತ್ಸವದಲ್ಲಿ ಬೆಂಗಳೂರಿನ ಕಾಡಿಗಾನಹಳ್ಳಿಯ ಸುಬ್ರಹ್ಮಣಿಯವರಿಂದ ಅನ್ನಸಂತರ್ಪಣೆ,ಗೋಲ್ಡನ ಫ್ರೆಂಡ್ಸ್ ಗ್ರೋಪ್ ಅವರಿಂದ ಮಜ್ಜಿಗೆ,ಪನಿವಾರ ವಿತರಣೆ ನಡೆಯಿತು.ಒಟ್ಟಾರೆ ಸುಡುಬಿಸಿಲನ್ನು ಲೆಕ್ಕಿಸದೇ ದೂರದೂರುಗಳಿಂದ ಭಕ್ತಾಧಿಗಳು ಆಗಮಿಸಿ,ದುರ್ಗಮ್ಮನ ಕೃಪಾಶೀರ್ವಾದಕ್ಕೆ ಬಾಜನರಾದರು.
 
 
ಸೀಗೇಬಾಗಿ ವರದರಾಜಸ್ವಾಮಿ ಜಾತ್ರೆಗೆ ಚಾಲನೆ
 
ಹೋಬಳಿ ಸೀಗೆಬಾಗಿಯ ಶ್ರೀ ವರದರಾಜ ಸ್ವಾಮಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವಿಯ 19 ನೇ ವರ್ಷದ ಜಾತ್ರಾಮಹೋತ್ಸವಕ್ಕೆ ಸೋಮವಾರ ಮೂಲದೇವರಿಗೆ ಪುಣ್ಯಾಹ,ಪಂಚಾಮೃತ ಅಭಿಷೇಕ,ಮಹಾಮಂಗಳಾರತಿ ಹಾಗೂ ಮದುವಣಗಿತ್ತಿಕಾರ್ಯ ನಡೆಸುವುದರೊಂದಿಗೆ ಚಾಲನೆಗೊಂಡಿದೆ.

ತಾ.17ರ ಮಂಗಳವಾರ ಆರತಿಬಾನ,ಘಟೆಪೂಜೆ ನಡೆದು,ಕಲಸ ಹೊತ್ತ ಸುಹಾಸನಿಯರನ್ನು ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಮೂಲಸ್ಥಾನಕ್ಕೆ ಕರೆದೊಯ್ಯುವುದು,ತಾ.18ರ ಬುಧವಾರ ಗೋಪಾಲಪುರದ ಆಂಜನೇಯಸ್ವಾಮಿ,ಕರಿಯಮ್ಮ,ಲಕ್ಷ್ಮಿಪುರದ ಲಕ್ಷ್ಮಮ್ಮ,ನಿರುಗಲ್ ಆಂಜನೇಯ,ದುರ್ಗಮ್ಮ,ತೊರೆಮನೆ ಕರಿಯಮ್ಮ,ಹೊಸಳ್ಳಿ ಪಾಳ್ಯದ ಅಂತರಘಟ್ಟೆ ಅಮ್ಮ,ನವರ ಆಗಮನದೊಂದಿಗೆ ಕೂಡು ಭೇಟಿ,ನಂತರ ಸಹಸ್ರನಾಮ ಪೂಜೆ,ಗಂಗಾಸ್ನಾನ,ಕಲಶ ಪೂಜೆ ನಡೆದು ಹೊಳೆಯಿಂದ ಮಡಿ ಹಾಸಿನ ಮೇಲೆ ನಡೆಮುಡಿಯಲ್ಲಿ ಕೊಂಬು,ಕಹಳೆ ಹರೆವಾದ್ಯಗಳೊಂದಿಗೆ ಮೆರವಣಿಗೆ ನಡೆಯಲಿದೆ.

ತಾ.19ರ ಗುರುವಾರ ಬೆಳಿಗ್ಗೆ ಓಕಳಿ ಸೇವೆ,ಮಹಾಮಂಗಳಾರತಿ,ಪ್ರಸಾದ ವಿನಿಯೋಗ ನಡೆದು,ಆಗಮಿಸಿದ್ದ ದೇವರುಗಳ ಬಿಳ್ಕೊಡುಗೆ ಕಾರ್ಯ ನಡೆಯಲಿದೆ,ಅಲ್ಲದೆ ಪ್ರತಿನಿತ್ಯ ಸೋಬಾನೆ ಪದ,ಆರತಿ ಪದ,ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು,ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.