ವಿಷಯಕ್ಕೆ ಹೋಗಿ
ಮಡಲಕ್ಕಿ ಸೇವೆಯೊಂದಿಗೆ ದುರ್ಗಮ್ಮನ ಜಾತ್ರೆಗೆ ತೆರೆ

ಇಲ್ಲಿನ ಗ್ರಾಮದೇವತೆ ದುರ್ಗಾಪರಮೇಶ್ವರಿದೇವಿಯ 42ನೇ ವರ್ಷದ ಜಾತ್ರಾಮಹೋತ್ಸವಕ್ಕೆ ಭಾನುವಾರ ಗ್ರಾಮಸ್ಥರಿಂದ ಮಡಲಕ್ಕಿ ಸೇವೆ ಕಾರ್ಯ ನಡೆಯುವ ಮೂಲಕ ತಾ.7ರ ಶನಿವಾರ ರಿಂದ ತಾ.14ರ ಶನಿವಾರವರೆಗೆ ನಡೆದ ಎಂಟು ದಿನಗಳ ಕಾಲದ ಜಾತ್ರೆಗೆ ತೆರೆ ಎಳೆಯಲಾಗಿದೆ.

ಜಾತ್ರೆಯುದ್ದಕ್ಕೂ ಪ್ರತಿನಿತ್ಯ ವಿವಿಧ ಪೂಜೆ, ಧಾರ್ಮಿಕ ಕೈಂಕರ್ಯಗಳನ್ನು ಕೈಗೊಂಡಿದ್ದು, ನೂರಾರು ಭಕ್ತರು ಆಗಮಿಸಿದ್ದರು. ತಾ.8ರ ಭಾನುವಾರ ಕಾಮಶೆಟ್ಟಿಪಾಳ್ಯ,ಸೋಮಜ್ಜನಪಾಳ್ಯದಲ್ಲಿ ಮಡಲಕ್ಕಿ ಸೇವೆ ನಡೆದು,ತಾ.9ರ ಸೋಮವಾರ ಅಮ್ಮನವರಿಗೆ ಎಡೆಸೇವೆ,ಧ್ವಜಾರೋಹಣ ಮತ್ತು ಅಂಕುರಾಪಣೆ ಕಾರ್ಯಗಳು ಹಾಗೂ ತಾ.10ರ ಮಂಗಳವಾರ ಆರತಿಬಾನ,ಎಡೆಸೇವೆ,ತಾ.11ರ ಬುಧವಾರ ರಾತ್ರಿ ಹುಳಿಯಾರಮ್ಮ,ಕೆಂಚಮ್ಮ,ಹೊಸಳ್ಳಿ ಕೊಲ್ಲಾಪುರದಮ್ಮ,ಗೌಡಗೆರೆ ದುರ್ಗಮ್ಮ,ತಿರುಮಲಾಪುರದ ಕೊಲ್ಲಾಪುರದಮ್ಮ ದೇವರುಗಳ ಆಗಮನದೊಂದಿಗೆ ಕೂಡು ಭೇಟಿ ಕಾರ್ಯ , ತಾ.12ರ ಗುರುವಾರ ಬೆಳಗಿನ ಜಾವ ಕಳಸ ಸ್ಥಾಪನೆ ಹಾಗೂ ಕಳಸೋತ್ಸವ ಹಾಗೂ ರಾತ್ರಿ ಅಮ್ಮನವರ ಉಯ್ಯಾಲೆ ಉತ್ಸವ ನಡೆದು, ತಾ.13ರ ಶುಕ್ರವಾರ ಬೆಳಿಗ್ಗೆಯಿಂದ ನಾಗರಾಜು ಅರ್ಚಕರ ನೇತೃತ್ವದಲ್ಲಿ ದುರ್ಗಾಹೋಮ,108 ತೆಂಗಿನಕಾಯಿ ಗಣಹೋಮ, ಕಲಾವೃದ್ದಿ ಹೋಮದೊಂದಿಗೆ ಪುರ್ಣಾಹುತಿ ಕಾರ್ಯ ಹಾಗೂ ಮಧ್ಯಾಹ್ನ ಅಮ್ಮನವರ ಬ್ರಹ್ಮರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.ಅಲ್ಲದೆ ದೇವಿಮಹಾತ್ಮೆ ಸಂಘದವರು ದೇವಿಮಹಾತ್ಮೆ, ಯಕ್ಷಗಾನ ಪೌರಾಣಿಕ ನಾಟಕವನ್ನು ಅಭಿನಯಿಸಿದರು. ತಾ.14ರ ಶನಿವಾರ ಬೆಳಿಗ್ಗೆ ಸಿಡಿ ಕಾರ್ಯ ಹಾಗೂ ಓಕಳಿ ಸೇವೆ ನಡೆದು,ಕಂಕಣ ವಿಸರ್ಜನೆ ಕಾರ್ಯ , ತಾ,15ರ ಭಾನುವಾರ ಗ್ರಾಮಸ್ಥರಿಂದ ಆಗಮಿಸಿದ್ದ ದೇವರುಗಳಿಗೆ ಮಡಲಕ್ಕಿ ಸೇವೆ ನಡೆಯುವುದರೊಂದಿಗೆ ಜಾತ್ರೆಗೆ ತೆರೆಎಳೆಯಲಾಯಿತು.

ಜಾತ್ರಾಮಹೋತ್ಸವದಲ್ಲಿ ಬೆಂಗಳೂರಿನ ಕಾಡಿಗಾನಹಳ್ಳಿಯ ಸುಬ್ರಹ್ಮಣಿಯವರಿಂದ ಅನ್ನಸಂತರ್ಪಣೆ,ಗೋಲ್ಡನ ಫ್ರೆಂಡ್ಸ್ ಗ್ರೋಪ್ ಅವರಿಂದ ಮಜ್ಜಿಗೆ,ಪನಿವಾರ ವಿತರಣೆ ನಡೆಯಿತು.ಒಟ್ಟಾರೆ ಸುಡುಬಿಸಿಲನ್ನು ಲೆಕ್ಕಿಸದೇ ದೂರದೂರುಗಳಿಂದ ಭಕ್ತಾಧಿಗಳು ಆಗಮಿಸಿ,ದುರ್ಗಮ್ಮನ ಕೃಪಾಶೀರ್ವಾದಕ್ಕೆ ಬಾಜನರಾದರು.
 
 
ಸೀಗೇಬಾಗಿ ವರದರಾಜಸ್ವಾಮಿ ಜಾತ್ರೆಗೆ ಚಾಲನೆ
 
ಹೋಬಳಿ ಸೀಗೆಬಾಗಿಯ ಶ್ರೀ ವರದರಾಜ ಸ್ವಾಮಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವಿಯ 19 ನೇ ವರ್ಷದ ಜಾತ್ರಾಮಹೋತ್ಸವಕ್ಕೆ ಸೋಮವಾರ ಮೂಲದೇವರಿಗೆ ಪುಣ್ಯಾಹ,ಪಂಚಾಮೃತ ಅಭಿಷೇಕ,ಮಹಾಮಂಗಳಾರತಿ ಹಾಗೂ ಮದುವಣಗಿತ್ತಿಕಾರ್ಯ ನಡೆಸುವುದರೊಂದಿಗೆ ಚಾಲನೆಗೊಂಡಿದೆ.

ತಾ.17ರ ಮಂಗಳವಾರ ಆರತಿಬಾನ,ಘಟೆಪೂಜೆ ನಡೆದು,ಕಲಸ ಹೊತ್ತ ಸುಹಾಸನಿಯರನ್ನು ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಮೂಲಸ್ಥಾನಕ್ಕೆ ಕರೆದೊಯ್ಯುವುದು,ತಾ.18ರ ಬುಧವಾರ ಗೋಪಾಲಪುರದ ಆಂಜನೇಯಸ್ವಾಮಿ,ಕರಿಯಮ್ಮ,ಲಕ್ಷ್ಮಿಪುರದ ಲಕ್ಷ್ಮಮ್ಮ,ನಿರುಗಲ್ ಆಂಜನೇಯ,ದುರ್ಗಮ್ಮ,ತೊರೆಮನೆ ಕರಿಯಮ್ಮ,ಹೊಸಳ್ಳಿ ಪಾಳ್ಯದ ಅಂತರಘಟ್ಟೆ ಅಮ್ಮ,ನವರ ಆಗಮನದೊಂದಿಗೆ ಕೂಡು ಭೇಟಿ,ನಂತರ ಸಹಸ್ರನಾಮ ಪೂಜೆ,ಗಂಗಾಸ್ನಾನ,ಕಲಶ ಪೂಜೆ ನಡೆದು ಹೊಳೆಯಿಂದ ಮಡಿ ಹಾಸಿನ ಮೇಲೆ ನಡೆಮುಡಿಯಲ್ಲಿ ಕೊಂಬು,ಕಹಳೆ ಹರೆವಾದ್ಯಗಳೊಂದಿಗೆ ಮೆರವಣಿಗೆ ನಡೆಯಲಿದೆ.

ತಾ.19ರ ಗುರುವಾರ ಬೆಳಿಗ್ಗೆ ಓಕಳಿ ಸೇವೆ,ಮಹಾಮಂಗಳಾರತಿ,ಪ್ರಸಾದ ವಿನಿಯೋಗ ನಡೆದು,ಆಗಮಿಸಿದ್ದ ದೇವರುಗಳ ಬಿಳ್ಕೊಡುಗೆ ಕಾರ್ಯ ನಡೆಯಲಿದೆ,ಅಲ್ಲದೆ ಪ್ರತಿನಿತ್ಯ ಸೋಬಾನೆ ಪದ,ಆರತಿ ಪದ,ಭಜನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಜರುಗಲಿದ್ದು,ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...