ವಿಷಯಕ್ಕೆ ಹೋಗಿ

ಹುಳಿಯಾರು ಅಲೆಮಾರಿ ಬುಡಕಟ್ಟು ಜನಾಂಗದವರಿಂದ ಪ್ರತಿಭಟನೆ

ಹುಳಿಯಾರು ಶಂಕರಪುರ ಬಡಾವಣೆಯಲ್ಲಿನ ಅಲೆಮಾರಿ ಬುಡಕಟ್ಟುಗಳ ಮಹಾವೇದಿಕೆಯವರು ಹಾಗೂ ಎಬಿವಿಪಿಯ ಸಹಯೋಗದಲ್ಲಿ ಸೋಮವಾರ ನಾಡ ಕಛೇರಿ ಆವಣದಲ್ಲಿ ಬುಡಕಟ್ಟು ಜನಾಂಗದವರು ಪ್ರತಿಭಟನೆ ನಡೆಸಿದರು.

ಇಲ್ಲಿನ ಶಂಕರಪುರ ಬಡಾವಣೆಯಲ್ಲಿ ವಾಸವಾಗಿರುವಂತ ಅಲೆಮಾರಿ ಬುಡಕಟ್ಟು ಜನಾಂಗದವರು ತಮಗೆ ಸೂಕ್ತ ವಸತಿ ವ್ಯವಸ್ಥೆಯನ್ನು ಸರ್ಕಾರ ಒದಗಿಸಿ ಕೊಡಬೇಕೆಂದು ಒತ್ತಾಯಿಸಿ ಅಲೆಮಾರಿ ಬುಡಕಟ್ಟು ಮಹಾವೇದಿಕೆಯವರು ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸೋಮವಾರ ಬೆಳಗ್ಗಿನಿಂದ ನಾಡ ಕಛೇರಿ ಆವಣದಲ್ಲಿ ಪ್ರತಿಭಟನೆ ನಡೆಸಿದರು.

ಹಿನ್ನಲೆ: ಮಾ.28 ಬುಧವಾರ ಮಧ್ಯರಾತ್ರಿ ಶಂಕರಪುರ ಬಡಾವಣೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸುಮಾರು 11 ಗುಡಿಸಲುಗಳು ಸಂಪೂರ್ಣ ಭಸ್ಮವಾಗಿದ್ದು,ಅದರಲ್ಲಿ ವಾಸಿಸುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿ ವಾಸಿಸಲು ಸೂರಿಲ್ಲದೆ ಬೀದಿಗೆ ಬಿದಿದ್ದಾರೆ. ಇವರಿಗೆ ಸರ್ಕಾರದಿಂದ ಯಾವುದೇ ರೀತಿಯ ತುರ್ತು ಪರಿಹಾರ ಬಂದಿರುವುದಿಲ್ಲ ಹಾಗೂ ಇವರ ಗೋಳಿಗೆ ಸ್ಥಳಿಯ ಅಧಿಕಾರಿಗಳು ಸ್ಪಂದಿಸದೇ ಹೋಗಿದ್ದಾರೆ.ಈ ಪ್ರದೇಶ ಹುಳಿಯಾರಿನ ಅಮಾನಿಕೆರೆ ಅಂಚಿನಲ್ಲಿದ್ದು,ಇಲ್ಲಿರುವ ಸುಮಾರು ಗುಡಿಸಲುಗಳಲ್ಲಿನ ಜನ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.ಇಲ್ಲಿರುವಂತ ಜನರಿಗೆ ತಮ್ಮದೇ ಆದ ಒಂದು ಸ್ವಂತ ಜಾಗವಾಗಲಿ, ಮನೆಯಾಗಲಿ ಇಲ್ಲ, ಸುಮಾರು ವರ್ಷಗಳಿಂದ ಇಲ್ಲಯೇ ವಾಸಿಸುತ್ತಿರುವ ನಮ್ಮನ್ನು ಕೇವಲ ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ನಾವು ಜನಪ್ರತಿನಿಧಿಗಳಿಗೆ ಕಾಣುತ್ತೇವೆ ಇತರೇ ಸಮಯದಲ್ಲಿ ನಮಗಾದ ನೋವನ್ನು ಕೇಳುವರೇ ಇಲ್ಲ ಎಂದು ಪ್ರತಿಭಟಿಸಿರು.


ಎಬಿವಿಪಿಯ ಹೋಬಳಿ ಘಟಕದ ಅಧ್ಯಕ್ಷ ನರೇಂದ್ರ ಬಾಬು ಮಾತನಾಡಿ ಕೇವಲ ಚನುವಾಣೆಗಳಲ್ಲಿ ಮನೆ ಮನೆ ಬಾಗಿಲಿಗೆ ಬಂದು ಮತ ಕೇಳುವವರು ಇಂದು ಎಸಿ ರೂಂ ಗಳಲ್ಲಿ ಕುಳಿತಿದ್ದಾರೆ.ಮತ ಹಾಕಿದ ಮತದಾರನ ನೋವು,ತೊಂದರೆಗಳ ಬಗ್ಗೆ ಗಮನಿಸುವುದಿಲ್ಲ. ಬಜೆಟ್ ನಲ್ಲಿ ಅನೇಕ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಾರೆ.ಅದರಲ್ಲಿ ಇಂತಹ ಬುಡಕಟ್ಟು ಜನಾಂಗದವರ ಯಶೋಭಿವೃದ್ದಿಗೆ ಸ್ವಲ್ಪ ಹಣ ಮೀಸಲಿಡಲಿ ಎಂದರು. ಅಲ್ಲದೆ ಇಂದು ಬೆಂಕಿ ಆನಾಹುತದಿಂದ ಗುಡಿಸಲು ಕಳೆದುಕೊಂಡವರಿಗೆ ಹಾಗೂ ಕೆರೆ ಅಂಚಿನಲ್ಲಿ ವಾಸಿಸುವಂತವರಿಗೆ ಸೂರಿನ ವ್ಯವಸ್ಥೆಯನ್ನು ಶೀಘ್ರವೇ ಸರ್ಕಾರ ಮಾಡಬೇಕಿದೆ ಎಂದರು.


ಶಂಕರಪುರ ಬಡಾವಣೆಯಲ್ಲಿನ ಕೆರೆಯಂಚಿನಲ್ಲಿ ವಾಸಿಸುತ್ತಿರುವ ಜನಗಳ ಬದುಕು ನೀರಿನ ಮೇಲಿನ ಗುಳ್ಳೆಯಂತಾಗಿದ್ದ್ದು,ಯಾವಾಗಬೇಕಾದರೂ ತೊಂದರೆಗಳು ಸಂಭವಿಸಿ,ಇಲ್ಲಿನ ಜನ ಬೀದೀ ಪಾಲಾಗಬಹುದಿದೆ. ಅಲ್ಲದೆ ಈಗಾಗಿರುವ ಬೆಂಕಿ ಅನಾಹುತಕ್ಕೆ ಯಾವುದೇ ಸ್ಥಳೀಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಹಾಗೂ ನಮ್ಮ ನೆರೆವಿಗೆ ಬಂದಿರುವುದಿಲ್ಲ.ಆ ನಿಟ್ಟಿನಲ್ಲಿ ಈ ಹೋರಾಟವನ್ನು ನಡೆಸುತ್ತಿದ್ದು, ಇದನ್ನು ಮನಗಂಡ ಅಧಿಕಾರಿಗಳು ಇಲ್ಲಿ ವಾಸಿಸುವ ಜನರಿಗೆ ಸೂಕ್ತ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಬೇಕೆಂದು ಗ್ರಾ.ಪಂ.ಸದಸ್ಯ ರಾಘವೇಂದ್ರ ಪ್ರತಿಭಟನಾ ನಿರತರ ಪರವಾಗಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.


ಉರಿಬಿಸಿಲನ್ನು ಲೆಕ್ಕಿಸದೇ ಬೆಳಗ್ಗಿನಿಂದಲೇ ನಾಡಕಛೇರಿ ಆವರಣದಲ್ಲಿ ಮಹಿಳೆಯರು ಸೇರಿದಂತೆ ಹಲವು ಜನ ನಿರಾಶ್ರಿತರು ಹಾಗೂ ಕೆರೆಯಂಚಿನಲ್ಲಿ ವಾಸಿಸುವ ಜನರು ನಮಗೆ ಸೂರು ಕೊಡಿ ಎಂದು ಕೂಗುತ್ತಾ,ತಮ್ಮ ಪ್ರತಿಭಟನೆಯನ್ನು ನಡೆಸಿದರು.ಮಧ್ಯಾಹ್ನ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ತಹಶೀಲ್ದಾರ್ ಪ್ರತಿಭಟನಾ ನಿರತ ಆಳಲನ್ನು ಆಲಿಸಿ,ಇದಕ್ಕೆ ಸೂಕ್ತ ರೀತಿಯ ಕ್ರಮ ಕೈಗೊಂಡು,ನೀವೇಶದ ವ್ಯಸಸ್ಥೆಯನ್ನು ಮಾಡುವುದಾಗಿ ತಿಳಿಸುವ ಮೂಲಕ ಪ್ರತಿಭಟನಾನಿರತರ ಮನವೋಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದರು.


ಪ್ರತಿಭಟನೆಯಲ್ಲಿ ತಾ.ಪಂ.ಸದಸ್ಯ ನವೀನ್,ಎಬಿವಿಪಿ ಹೋಬಳಿ ಘಟಕದ ಪದಾಧಿಕಾರಿಗಳು,ಸಂಚಯನ ಸ್ವಯಂಸೇವಾ ಸಂಸ್ಥೆಯ ಹರ್ಷ ಹಾಗೂ ಅಲೆಮಾರಿ ಬುಡಕಟ್ಟು ಜನಾಂಗದವರು ಹಾಜರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.