ವಿಷಯಕ್ಕೆ ಹೋಗಿ

ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ : ಪ್ರೋ. ಚಂಪಾ

ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ತ.ಶಿ.ಬಸವಮೂರ್ತಿ ಅವರ ಮನೆಗೆ ಆಗಮಿಸಿದ್ದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಚಂಪಾ ಅವರೊಂದಿಗೆ ಹೋಬಳಿ ಘಟಕದ ಸದಸ್ಯರುಗಳು.

ಮೇ 15,2014 ಕ್ಕೆ ಪರಿಷತ್ ಶತಮಾನೋತ್ಸವಕ್ಕೆ ಕಾಲಿಡುತ್ತಿದ್ದು,ತನಗೆ ಮತ್ತೊಂದು ಸಲ ಪರಿಷತ್ತಿನ ಅಧ್ಯಕ್ಷತೆಯ ಜವಬ್ದಾರಿ ನೀಡಿದಲ್ಲಿ ಪರಿಷತಿಗೆ ಗಟ್ಟಿಯಾದ ಆರ್ಥಿಕ ಬುನಾದಿ ಹಾಕುವುದಲ್ಲದೆ,ಅನೆಕ ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ ಎಂದು ಚಂಪಾ ಹುಳಿಯಾರಿನಲ್ಲಿ ಘೋಷಿಸಿದರು.

ಇದೇ ತಿಂಗಳ 29ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಅವರು ಚುನಾವಣ ಪ್ರಚಾರಕ್ಕಾಗಿ ಕರ್ನಾಟದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು,ಈ ಹಿನ್ನಲೆಯಲ್ಲಿ ಗುರುವಾರ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಬಸವಮುರ್ತಿಯವರ ಮನೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮೇಲ್ಕಂಡಂತೆ ನುಡಿದರು.


ಅವರು ಹೇಳಿದಿಷ್ಟು:- ಕನ್ನಡ ನಾಡು ನುಡಿ ಕಟ್ಟುವ ಕಾರ್ಯ ಆಗಬೆಕಿದ್ದು,ಅದಕ್ಕಾಗಿ ಎಲ್ಲರ ಶ್ರಮ ಅತ್ಯಗತ್ಯವಾಗಿದೆ.ವಾಸ್ತವವಾಗಿ ನೋಡಿದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಕನ್ನಡ ಸಾಹಿತ್ಯ ಪರಿಷತ್ ಗೆ ಯಾವುದೇ ರೀತಿಯ ಅನುದಾನಗಳನ್ನು ಕಡಿಮೆ ಮಾಡಿಲ್ಲ,ಆದರೆ ಅದನ್ನು ಕೇಳಿ ಪಡೆಯಬೇಕಿದೆ.ಅಂತಹ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆಗಬೇಕಿದೆ.ಅಲ್ಲದೆ ಸಮಕಾಲೀನ ಸಾಹಿತ್ಯದ ಎಲ್ಲಾ ಧಾರೆಗಳಿಗೆ ಅವಕಾಶ ನೀಡಿ,ಯುವ ಬರಹಗಾರರಿಗೆ ವೈವಿದ್ಯಮಯ ಕಾರ್ಯಕ್ರಮ ರೂಪಿಸಬೇಕು .ಸಾರ್ವಜನಿಕವಾಗಿ ಕನ್ನಡ ಬದುಕಿನ ಪ್ರಮುಖ ಹಿತಾಸಕ್ತಿಗಳ ಪ್ರತಿಪಾದನೆಯನ್ನು ಹಾಗೂ ಅವುಗಳ ರಕ್ಷಣೆಯನ್ನು ಮಾಡುವ ನಿಟ್ಟಿನಲ್ಲಿ ಪರಿಷತ್ತನ್ನು ಒಂದು ಬಲಾಡ್ಯ ಪ್ರಜಾಸತ್ತಾತ್ಮಕ ವೇದಿಕೆಯನ್ನಾಗಿ ರೂಪಗೊಳ್ಳಬೇಕು,ಕೇಂದ್ರ ಕ.ಸಾಪ ಆವರಣಾದಲ್ಲಿ ಪುಸ್ತಕ ಸಂತೆಗೆ ಮರು ಚಾಲನೆ ನೀಡೂವುದಲ್ಲದೆ ಇದನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಳ್ಳಬೇಕು.ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರಾದೇಶಿಕ ಸಾಮಾಜಿಕ ಪ್ರಾತಿನಿಧ್ಯ ನೀಡಬೇಕಿದ್ದು, ಎಲ್ಲಾಸ್ಥರಗಳಲ್ಲಿ ಮಹಿಳೆಯರಿಗೆ ಸಮಾನ ಪಾಲುದಾರಿಕೆ ನೀಡಬೆಕು ಎಂದು ಪ್ರತಿಪಾದಿಸಿದರು.ಚುನಾವಣೆಯಲ್ಲಿ ಯಾರೊಬ್ಬ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದರೆ ನಾನು ಅವರಿಗೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ದನಿದ್ದೇನೆಂದು ಈ ಸಂದರ್ಭದಲ್ಲಿ ನುಡಿದರು..


ಈ ಸಂಧರ್ಭದಲ್ಲಿ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿರುವ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದಲ್ಲಿನ ಚುನಾವಣಾ ಮತಕೇಂದ್ರವನ್ನು ರದ್ದು ಮಾಡಿರುವ ವಿಷಯವನ್ನು ತ.ಶಿ.ಬಸವಮೂರ್ತಿಗಳು ಚಂಪಾಅವರ ಗಮನಕ್ಕೆ ತಂದರು.ಕಳೆದ ಬಾರಿ ಮತದಾನಕ್ಕೆ ಅವಕಾಶ ನೀಡಿ ಇದೀಗ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿದ್ದರೂ ಸಹ ಮತಕೇಂದ್ರವನ್ನು ರದ್ದು ಮಾಡಿರುದು ಖಂಡಿನೀಯ. ಈ ಬಗ್ಗೆ ಚುನಾವಣಾಧಿಕಾರಿಗಳಲ್ಲಿ ವಿಚಾರಿಸಿ ಅವಕಾಶ ನೀಡುವುದಾಗಿ ತಿಳಿಸಿದರು.ಅಲ್ಲದೆ ಹೋಬಳಿಯ ಎಲ್ಲಾ ಸದಸ್ಯರಿಂದ ಸಹಿಯನ್ನು ಸಂಗ್ರಹಿ ಚುನಾವಣಾ ಸಮಿತಿಗೆ ಸಲ್ಲಿಸುವಂತೆ ತಿಳಿಸಿದ ಅವರು ಸದಾ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದರು..


ಪುಸ್ತಕ ಮನೆಯ ಹರಿಹರ ಪ್ರಿಯ ಹಾಗೂ ಮಧುಬಿಲ್ಲಿನ ಕೋಟೆ ಅವರು ಚಂಪಾರವರು ನಡೆದು ಬಂದ ಹಾದಿ ಹಾಗೂ ಅವರ ಹೋರಾಟಗಳ ಬಗ್ಗೆ ತಿಳಿಸಿದರು.ಹೋಬಳಿ ಸಾಹಿತ್ಯ ಪರಿಷತ್ ನ ರಾಮಯ್ಯ,ತ.ಶಿ.ಬಸವಮೂರ್ತಿ,ಏಜೆಂಟ್ ಗಂಗಣ್ಣ ಇದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...