ವಿಷಯಕ್ಕೆ ಹೋಗಿ

ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ : ಪ್ರೋ. ಚಂಪಾ

ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ತ.ಶಿ.ಬಸವಮೂರ್ತಿ ಅವರ ಮನೆಗೆ ಆಗಮಿಸಿದ್ದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಚಂಪಾ ಅವರೊಂದಿಗೆ ಹೋಬಳಿ ಘಟಕದ ಸದಸ್ಯರುಗಳು.

ಮೇ 15,2014 ಕ್ಕೆ ಪರಿಷತ್ ಶತಮಾನೋತ್ಸವಕ್ಕೆ ಕಾಲಿಡುತ್ತಿದ್ದು,ತನಗೆ ಮತ್ತೊಂದು ಸಲ ಪರಿಷತ್ತಿನ ಅಧ್ಯಕ್ಷತೆಯ ಜವಬ್ದಾರಿ ನೀಡಿದಲ್ಲಿ ಪರಿಷತಿಗೆ ಗಟ್ಟಿಯಾದ ಆರ್ಥಿಕ ಬುನಾದಿ ಹಾಕುವುದಲ್ಲದೆ,ಅನೆಕ ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ ಎಂದು ಚಂಪಾ ಹುಳಿಯಾರಿನಲ್ಲಿ ಘೋಷಿಸಿದರು.

ಇದೇ ತಿಂಗಳ 29ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಅವರು ಚುನಾವಣ ಪ್ರಚಾರಕ್ಕಾಗಿ ಕರ್ನಾಟದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು,ಈ ಹಿನ್ನಲೆಯಲ್ಲಿ ಗುರುವಾರ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಬಸವಮುರ್ತಿಯವರ ಮನೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮೇಲ್ಕಂಡಂತೆ ನುಡಿದರು.


ಅವರು ಹೇಳಿದಿಷ್ಟು:- ಕನ್ನಡ ನಾಡು ನುಡಿ ಕಟ್ಟುವ ಕಾರ್ಯ ಆಗಬೆಕಿದ್ದು,ಅದಕ್ಕಾಗಿ ಎಲ್ಲರ ಶ್ರಮ ಅತ್ಯಗತ್ಯವಾಗಿದೆ.ವಾಸ್ತವವಾಗಿ ನೋಡಿದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಕನ್ನಡ ಸಾಹಿತ್ಯ ಪರಿಷತ್ ಗೆ ಯಾವುದೇ ರೀತಿಯ ಅನುದಾನಗಳನ್ನು ಕಡಿಮೆ ಮಾಡಿಲ್ಲ,ಆದರೆ ಅದನ್ನು ಕೇಳಿ ಪಡೆಯಬೇಕಿದೆ.ಅಂತಹ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆಗಬೇಕಿದೆ.ಅಲ್ಲದೆ ಸಮಕಾಲೀನ ಸಾಹಿತ್ಯದ ಎಲ್ಲಾ ಧಾರೆಗಳಿಗೆ ಅವಕಾಶ ನೀಡಿ,ಯುವ ಬರಹಗಾರರಿಗೆ ವೈವಿದ್ಯಮಯ ಕಾರ್ಯಕ್ರಮ ರೂಪಿಸಬೇಕು .ಸಾರ್ವಜನಿಕವಾಗಿ ಕನ್ನಡ ಬದುಕಿನ ಪ್ರಮುಖ ಹಿತಾಸಕ್ತಿಗಳ ಪ್ರತಿಪಾದನೆಯನ್ನು ಹಾಗೂ ಅವುಗಳ ರಕ್ಷಣೆಯನ್ನು ಮಾಡುವ ನಿಟ್ಟಿನಲ್ಲಿ ಪರಿಷತ್ತನ್ನು ಒಂದು ಬಲಾಡ್ಯ ಪ್ರಜಾಸತ್ತಾತ್ಮಕ ವೇದಿಕೆಯನ್ನಾಗಿ ರೂಪಗೊಳ್ಳಬೇಕು,ಕೇಂದ್ರ ಕ.ಸಾಪ ಆವರಣಾದಲ್ಲಿ ಪುಸ್ತಕ ಸಂತೆಗೆ ಮರು ಚಾಲನೆ ನೀಡೂವುದಲ್ಲದೆ ಇದನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಳ್ಳಬೇಕು.ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರಾದೇಶಿಕ ಸಾಮಾಜಿಕ ಪ್ರಾತಿನಿಧ್ಯ ನೀಡಬೇಕಿದ್ದು, ಎಲ್ಲಾಸ್ಥರಗಳಲ್ಲಿ ಮಹಿಳೆಯರಿಗೆ ಸಮಾನ ಪಾಲುದಾರಿಕೆ ನೀಡಬೆಕು ಎಂದು ಪ್ರತಿಪಾದಿಸಿದರು.ಚುನಾವಣೆಯಲ್ಲಿ ಯಾರೊಬ್ಬ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದರೆ ನಾನು ಅವರಿಗೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ದನಿದ್ದೇನೆಂದು ಈ ಸಂದರ್ಭದಲ್ಲಿ ನುಡಿದರು..


ಈ ಸಂಧರ್ಭದಲ್ಲಿ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿರುವ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದಲ್ಲಿನ ಚುನಾವಣಾ ಮತಕೇಂದ್ರವನ್ನು ರದ್ದು ಮಾಡಿರುವ ವಿಷಯವನ್ನು ತ.ಶಿ.ಬಸವಮೂರ್ತಿಗಳು ಚಂಪಾಅವರ ಗಮನಕ್ಕೆ ತಂದರು.ಕಳೆದ ಬಾರಿ ಮತದಾನಕ್ಕೆ ಅವಕಾಶ ನೀಡಿ ಇದೀಗ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿದ್ದರೂ ಸಹ ಮತಕೇಂದ್ರವನ್ನು ರದ್ದು ಮಾಡಿರುದು ಖಂಡಿನೀಯ. ಈ ಬಗ್ಗೆ ಚುನಾವಣಾಧಿಕಾರಿಗಳಲ್ಲಿ ವಿಚಾರಿಸಿ ಅವಕಾಶ ನೀಡುವುದಾಗಿ ತಿಳಿಸಿದರು.ಅಲ್ಲದೆ ಹೋಬಳಿಯ ಎಲ್ಲಾ ಸದಸ್ಯರಿಂದ ಸಹಿಯನ್ನು ಸಂಗ್ರಹಿ ಚುನಾವಣಾ ಸಮಿತಿಗೆ ಸಲ್ಲಿಸುವಂತೆ ತಿಳಿಸಿದ ಅವರು ಸದಾ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದರು..


ಪುಸ್ತಕ ಮನೆಯ ಹರಿಹರ ಪ್ರಿಯ ಹಾಗೂ ಮಧುಬಿಲ್ಲಿನ ಕೋಟೆ ಅವರು ಚಂಪಾರವರು ನಡೆದು ಬಂದ ಹಾದಿ ಹಾಗೂ ಅವರ ಹೋರಾಟಗಳ ಬಗ್ಗೆ ತಿಳಿಸಿದರು.ಹೋಬಳಿ ಸಾಹಿತ್ಯ ಪರಿಷತ್ ನ ರಾಮಯ್ಯ,ತ.ಶಿ.ಬಸವಮೂರ್ತಿ,ಏಜೆಂಟ್ ಗಂಗಣ್ಣ ಇದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...