ವಿಷಯಕ್ಕೆ ಹೋಗಿ

ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ : ಪ್ರೋ. ಚಂಪಾ

ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ತ.ಶಿ.ಬಸವಮೂರ್ತಿ ಅವರ ಮನೆಗೆ ಆಗಮಿಸಿದ್ದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಚಂಪಾ ಅವರೊಂದಿಗೆ ಹೋಬಳಿ ಘಟಕದ ಸದಸ್ಯರುಗಳು.

ಮೇ 15,2014 ಕ್ಕೆ ಪರಿಷತ್ ಶತಮಾನೋತ್ಸವಕ್ಕೆ ಕಾಲಿಡುತ್ತಿದ್ದು,ತನಗೆ ಮತ್ತೊಂದು ಸಲ ಪರಿಷತ್ತಿನ ಅಧ್ಯಕ್ಷತೆಯ ಜವಬ್ದಾರಿ ನೀಡಿದಲ್ಲಿ ಪರಿಷತಿಗೆ ಗಟ್ಟಿಯಾದ ಆರ್ಥಿಕ ಬುನಾದಿ ಹಾಕುವುದಲ್ಲದೆ,ಅನೆಕ ಕ್ರಿಯಾತ್ಮಕ ಯೋಜನೆಗಳ ಮೂಲಕ ಪರಿಷತ್ತಿನ ಏಳ್ಗೆಗೆ ದುಡಿಯಲು ತಾನು ಸದಾ ಸಿದ್ದ ಎಂದು ಚಂಪಾ ಹುಳಿಯಾರಿನಲ್ಲಿ ಘೋಷಿಸಿದರು.

ಇದೇ ತಿಂಗಳ 29ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ ಅವರು ಚುನಾವಣ ಪ್ರಚಾರಕ್ಕಾಗಿ ಕರ್ನಾಟದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು,ಈ ಹಿನ್ನಲೆಯಲ್ಲಿ ಗುರುವಾರ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ನ ಬಸವಮುರ್ತಿಯವರ ಮನೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮೇಲ್ಕಂಡಂತೆ ನುಡಿದರು.


ಅವರು ಹೇಳಿದಿಷ್ಟು:- ಕನ್ನಡ ನಾಡು ನುಡಿ ಕಟ್ಟುವ ಕಾರ್ಯ ಆಗಬೆಕಿದ್ದು,ಅದಕ್ಕಾಗಿ ಎಲ್ಲರ ಶ್ರಮ ಅತ್ಯಗತ್ಯವಾಗಿದೆ.ವಾಸ್ತವವಾಗಿ ನೋಡಿದರೆ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಕನ್ನಡ ಸಾಹಿತ್ಯ ಪರಿಷತ್ ಗೆ ಯಾವುದೇ ರೀತಿಯ ಅನುದಾನಗಳನ್ನು ಕಡಿಮೆ ಮಾಡಿಲ್ಲ,ಆದರೆ ಅದನ್ನು ಕೇಳಿ ಪಡೆಯಬೇಕಿದೆ.ಅಂತಹ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆಗಬೇಕಿದೆ.ಅಲ್ಲದೆ ಸಮಕಾಲೀನ ಸಾಹಿತ್ಯದ ಎಲ್ಲಾ ಧಾರೆಗಳಿಗೆ ಅವಕಾಶ ನೀಡಿ,ಯುವ ಬರಹಗಾರರಿಗೆ ವೈವಿದ್ಯಮಯ ಕಾರ್ಯಕ್ರಮ ರೂಪಿಸಬೇಕು .ಸಾರ್ವಜನಿಕವಾಗಿ ಕನ್ನಡ ಬದುಕಿನ ಪ್ರಮುಖ ಹಿತಾಸಕ್ತಿಗಳ ಪ್ರತಿಪಾದನೆಯನ್ನು ಹಾಗೂ ಅವುಗಳ ರಕ್ಷಣೆಯನ್ನು ಮಾಡುವ ನಿಟ್ಟಿನಲ್ಲಿ ಪರಿಷತ್ತನ್ನು ಒಂದು ಬಲಾಡ್ಯ ಪ್ರಜಾಸತ್ತಾತ್ಮಕ ವೇದಿಕೆಯನ್ನಾಗಿ ರೂಪಗೊಳ್ಳಬೇಕು,ಕೇಂದ್ರ ಕ.ಸಾಪ ಆವರಣಾದಲ್ಲಿ ಪುಸ್ತಕ ಸಂತೆಗೆ ಮರು ಚಾಲನೆ ನೀಡೂವುದಲ್ಲದೆ ಇದನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಯೋಜನೆಯನ್ನು ಹಮ್ಮಿಕೊಳ್ಳಬೇಕು.ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳಲ್ಲಿ ಪ್ರಾದೇಶಿಕ ಸಾಮಾಜಿಕ ಪ್ರಾತಿನಿಧ್ಯ ನೀಡಬೇಕಿದ್ದು, ಎಲ್ಲಾಸ್ಥರಗಳಲ್ಲಿ ಮಹಿಳೆಯರಿಗೆ ಸಮಾನ ಪಾಲುದಾರಿಕೆ ನೀಡಬೆಕು ಎಂದು ಪ್ರತಿಪಾದಿಸಿದರು.ಚುನಾವಣೆಯಲ್ಲಿ ಯಾರೊಬ್ಬ ಮಹಿಳಾ ಅಭ್ಯರ್ಥಿ ಸ್ಪರ್ಧಿಸಿದರೆ ನಾನು ಅವರಿಗೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ದನಿದ್ದೇನೆಂದು ಈ ಸಂದರ್ಭದಲ್ಲಿ ನುಡಿದರು..


ಈ ಸಂಧರ್ಭದಲ್ಲಿ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿರುವ ಹುಳಿಯಾರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕದಲ್ಲಿನ ಚುನಾವಣಾ ಮತಕೇಂದ್ರವನ್ನು ರದ್ದು ಮಾಡಿರುವ ವಿಷಯವನ್ನು ತ.ಶಿ.ಬಸವಮೂರ್ತಿಗಳು ಚಂಪಾಅವರ ಗಮನಕ್ಕೆ ತಂದರು.ಕಳೆದ ಬಾರಿ ಮತದಾನಕ್ಕೆ ಅವಕಾಶ ನೀಡಿ ಇದೀಗ 150ಕ್ಕೂ ಹೆಚ್ಚು ಅಜೀವ ಸದಸ್ಯರನ್ನೊಳಗೊಂಡಿದ್ದರೂ ಸಹ ಮತಕೇಂದ್ರವನ್ನು ರದ್ದು ಮಾಡಿರುದು ಖಂಡಿನೀಯ. ಈ ಬಗ್ಗೆ ಚುನಾವಣಾಧಿಕಾರಿಗಳಲ್ಲಿ ವಿಚಾರಿಸಿ ಅವಕಾಶ ನೀಡುವುದಾಗಿ ತಿಳಿಸಿದರು.ಅಲ್ಲದೆ ಹೋಬಳಿಯ ಎಲ್ಲಾ ಸದಸ್ಯರಿಂದ ಸಹಿಯನ್ನು ಸಂಗ್ರಹಿ ಚುನಾವಣಾ ಸಮಿತಿಗೆ ಸಲ್ಲಿಸುವಂತೆ ತಿಳಿಸಿದ ಅವರು ಸದಾ ತಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದರು..


ಪುಸ್ತಕ ಮನೆಯ ಹರಿಹರ ಪ್ರಿಯ ಹಾಗೂ ಮಧುಬಿಲ್ಲಿನ ಕೋಟೆ ಅವರು ಚಂಪಾರವರು ನಡೆದು ಬಂದ ಹಾದಿ ಹಾಗೂ ಅವರ ಹೋರಾಟಗಳ ಬಗ್ಗೆ ತಿಳಿಸಿದರು.ಹೋಬಳಿ ಸಾಹಿತ್ಯ ಪರಿಷತ್ ನ ರಾಮಯ್ಯ,ತ.ಶಿ.ಬಸವಮೂರ್ತಿ,ಏಜೆಂಟ್ ಗಂಗಣ್ಣ ಇದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.