ವಿಷಯಕ್ಕೆ ಹೋಗಿ

ಹುಳಿಯಾರು ದುರ್ಗಮ್ಮನ ತೇರನ್ನೆಳೆದ ಭಕ್ತಾಧಿಗಳ ಮೊಗದಲ್ಲಿ ಸಂತಸ

ಹುಳಿಯಾರು ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮ ರಥೋತ್ಸವ ಸೂರಾರು ಭಕ್ತರ ಹರ್ಷೊದ್ಗಾದ ನಡುವೆ ಸಡಗರ ಸಂಭ್ರಮದಿಂದ ನಡೆಯಿತು.



ಹುಳಿಯಾರು ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ 42 ನೇ ವರ್ಷದ ರಥೋತ್ಸವವು ಅಸಂಖ್ಯಾತ ಭಕ್ತರ ಉಪಸ್ಥಿತಿಯಲ್ಲಿ ವಿವಿಧ ಗ್ರಾಮದೇವತೆಗಳ ಸಮ್ಮುಖದಲ್ಲಿ ವೇದ ಮಂತ್ರ ಘೋಷಗಳ ನಾದದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಶುಕ್ರವಾರದಂದು ಯಶಸ್ವಿಯಾಗಿ ಜರುಗಿತು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜಾಕೈಂಕರ್ಯಗಳು ಶಾಸ್ತ್ರೋಕ್ತವಾಗಿ ನಡೆಯಿತು.ಉತ್ತರ ಕರ್ನಾಟಕದ ತೆಕ್ಕಟೆಯ ಅರ್ಚಕರಾದ ನಾಗರಾಜು ಮತ್ತು ತಂಡದವರು ದುರ್ಗಾಹೋಮ,೧೦೮ ತೆಂಗಿನ ಕಾಯಿ ಗಣಹೋಮ,ಕಲಾವೃದ್ದಿಹೋಮಗಳನ್ನು ನೆರವೇರಿಸಿದರು. ಮಂಗಳವಾಧ್ಯದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ದೇವಿಯು ಮೂಲ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಗ್ರಾಮದೇವತೆ ಹುಳಿಯಾರಮ್ಮ,ತಿರುಮಲಾಪುರದ ಕೊಲ್ಲಾಪುರದಮ್ಮ,ಗೌಡಗೆರೆಯ ದುರ್ಗಮ್ಮ,ಹೊಸಹಳ್ಳಿಯ ಕೊಲ್ಲಾಪುರದಮ್ಮ ಹಾಗೂ ಹುಳಿಯಾರಿನ ಕೆಂಚಮ್ಮನವರೊಂದಿಗೆ ಭೇಟಿ ಮಾಡಿಸಿ,ದೇವಾಲಯವನ್ನು ಒಂದು ಸುತ್ತು ಪ್ರದಕ್ಷಣೆ ಮಾಡಿಸಿ, ಭಕ್ತಾಧಿಗಳ ಉದ್ಘೋಷದೊಂದಿಗೆ ಕರೆತಂದು ರಂಗು ರಂಗಿನ ಬಾವುಟಗಳು, ತಳಿರು ತೋರಣಗಳು ಹಾಗೂ ಹೂವಿನ ಹಾರಗಳಿಂದ ಸರ್ವಾಲಂಕೃತಗೊಂಡ ರಥಕ್ಕೆ ದುರ್ಗಾಪರಮೇಶ್ವರಿ ಅಮ್ಮನವರನ್ನು ಏರಿಸಲಾಯಿತು.ಮದ್ಯಾಹ್ನ 2 ಗಂಟೆಗೆ ರಥಕ್ಕೆ ಕಾಯಿ ಒಡೆಯುವ ಮೂಲಕ ಹಾಗೂ ವಿಶೇಷ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿಲಾಯಿತು.



ರಥೋತ್ಸವಕ್ಕೂ ಮುನ್ನ ಸೋಮನನ್ನು ಸಿಂಗರಿಕೊಂಡು ಸಕಲ ವಾದ್ಯಗಳೊಂದಿಗೆ ರೇವಣಪ್ಪ ಸ್ವಾಮಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ,ಪಾನಕದ ಗಾಡಿಯನ್ನು ಜೊತೆಯಲ್ಲಿ ಕರೆತರಲಾಯಿತು.



ಮುಂಜಾನೆಯಿಂದಲೇ ಕಿಕ್ಕಿರಿದು ನೆರದಿದ್ದ ನೂರಾರು ಭಕ್ತಾಧಿಗಳು ಅಮ್ಮವನರು ತೇರನೇರಿದ ತಕ್ಷಣವೇ ಜಯಘೋಷ ಕೂಗುತ್ತಾ ತೇರನ್ನೆಳದು ಸಂಭ್ರಮಿಸಿದರು. ಮಂಗಳವಾಧ್ಯದೊಂದಿಗೆ ಸಾಗಿಬಂದ ರಥಕ್ಕೆ ಬಾಳೆಹಣ್ಣು,ಧವಸ ತೂರುವ ಮೂಲಕ ಭಕ್ತರು ತಮ್ಮ ಭಕ್ತಿಯನ್ನು ಹಾಗೂ ಹರಕೆಯನ್ನು ಸಮರ್ಪಿಸಿದರು.ನಂತರ ನೆರದಿದ್ದ ಭಕ್ತಾಧಿಗಳು ಹಾಗೂ ಹೆಣ್ಣುಮಕ್ಕಳು ಹಣ್ಣು ಕಾಯಿ ಮಾಡಿಸಿ ತಮ್ಮ ಇಷ್ಟ ದೈವವನ್ನು ಕಣ್ಣಿಗೆ ತುಂಬಿಕೊಂಡರು .ರಥೋತ್ಸವದ ಅಂಗವಾಗಿ ಪಾನಕ,ಕೋಸುಂಬರಿ ಹಾಗೂ ಮಜ್ಜಿಗೆ ವಿತರಿಸಲಾಯಿತು.ಬೆಂಗಳೂರು ಕಾಡಿಗಾನಹಳ್ಳಿಯ ಸುಬ್ರಹ್ಮಣ್ಯ ಅವರಿಂದ ನೆರೆದಿದ್ದ ಭಕ್ತಾಧಿಗಳಿಗೆ ಹಾಗೂ ವಿಪ್ರಸಂಘದಿಂದ ಬ್ರಾಹ್ಮಣರಿಗೆ ಅನ್ನ ಸಂತರ್ಪಣೆ ನಡೆಯಿತು.



ರಥೋತ್ಸವಕ್ಕೆ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ತಾ.ಪಂ.ಅಧ್ಯಕ್ಷ ಸೀತಾರಾಂ,ಸದಸ್ಯ ಕೆಂಕೆರೆ ನವೀನ್ ಸೇರಿದಂತೆ ವಿವಿಧ ಸಂಘಸಂಸ್ಥೆಯವರು,ದೇವಾಲಯದ ಧರ್ಮದರ್ಶಿ ಸಮಿತಿಯವರು ಭಾಗವಹಿಸಿದ್ದರು.ಹುಳಿಯಾರು ಸುತ್ತಮುತ್ತಲಿನ ಹಾಗೂ ದೂರದೂರುಗಳ ಭಕ್ತಾಧಿಗಳು ಆಗಮಿಸಿ,ಅಮ್ಮನವರ ರಥೋತ್ಸವವ ನೋಡಿ,ಅಮ್ಮನವರ ಆಶೀರ್ವಾದವನ್ನು ಪಡೆದು ಸಂಭ್ರಮಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.