ವಿಷಯಕ್ಕೆ ಹೋಗಿ

ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯಿಂದ ವಿಧಾನ ಸೌಧ ಮುತ್ತಿಗೆ

ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ತಾ.25ರ ಬುಧವಾರ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದರಂಗವಾಗಿ ಹೋಬಳಿಯ ಪರಿವೀಕ್ಷಣ ಮಂದಿರದಲ್ಲಿ ನಡೆದ ಪತ್ರಿಕಾ ಬೇಟಿಯಲ್ಲಿ ಹಾಜರಿದ್ದ ರೈತಸಂಘ ಹಾಗೂ ಹಸಿರು ಸೇನೆಯವರು.
ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ಭೀಕರ ಬರಗಾಲ ಉಂಟಾಗಿದ್ದು,ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ,ಆಹಾರ,ಮೇವಿನ ಕೊರತೆಯುಂಟಾಗಿರುವುದ ಜೊತೆಗೆ ಕೃಷಿ ಮಾಡಲು ನೀರಿನ ಸೌಲಭ್ಯವಿಲ್ಲದೆ ಕಂಗಾಲಾಗಿರುವ ರೈತರು ದನಕರುಗಳನ್ನು ಖಸಾಯಿಖಾನೆಗೆ ಕೊಟ್ಟು, ತಮ್ಮ ಪ್ರದೇಶಗಳನ್ನು ತೊರೆದು ಗುಳೆ ಹೋಗುತ್ತಿದ್ದರೂ ಸಹ ಸರ್ಕಾರ ಇದರ ಕಡೆ ಗಮನ ಹರಿಸಿಲ್ಲ,ನಮ್ಮ ರೈತರ ಸಮಸ್ಯೆಗಳನ್ನು ಸರ್ಕಾರದ ಮುಂದಿಡುವ ನಿಟ್ಟಿನಲ್ಲಿ ವಿಧಾನ ಸೌಧಕ್ಕೆ ಮುತ್ತಿಗೆಗೆ ಹಾಕುವುದಾಗಿ ಜಿಲ್ಲಾ ಹಸಿರು ಸೇನೆಯ ಕೆಂಕೆರೆ ಸತೀಶ್ ತಿಳಿಸಿದರು.

ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯಿಂದ ತಾ.25ರ ಬುಧವಾರ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಹಿನ್ನಲೆಯಲ್ಲಿ ಹೋಬಳಿಯ ಪರಿವೀಕ್ಷಣ ಮಂದಿರದಲ್ಲಿ ನಡೆದ ಪತ್ರಿಕಾ ಬೇಟಿಯಲ್ಲಿ ಅವರು ತಿಳಿಸಿದರು.

ರೈತರ ಸಂಕಷ್ಟವನ್ನು ತಿಳಿಯದ ಮುಖ್ಯಮಂತ್ರಿಗಳು ತಮ್ಮ ಖುರ್ಚಿಯನ್ನು ಬಲಪಡಿಸಿಕೊಳ್ಳುವಲ್ಲಿ ಮಗ್ನರಾಗಿದ್ದಾರೆ,ಅಲ್ಲದೆ ಕೃಷಿಗೆ ಸಂಬಂಧಿಸಿದ ನೀರಾವರಿ,ತೋಟಗಾರಿಕೆ,ವಿದ್ಯುತ್ ಚ್ಚಕ್ತಿ ವಿಭಾಗದ ಮಂತ್ರಿಗಳು ಉತ್ತಮ ಕಾರ್ಯ ಮಾಡುವಲ್ಲಿ ವಿಫಲಾವಾಗಿದ್ದು, ಆಡಳಿತ ಯಂತ್ರ ತನ್ನ ದಿಕ್ಕನೇ ಬದಲಿಸಿದ್ದು, ತನ್ನ ಪ್ರಗತಿಯನ್ನು ಕಾಣದೇ ಹೋಗಿದೆ. ಬರಗಾಲದ ಸ್ಥಳಗಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಬೆಕೆಂಬ ಪ್ರಜ್ಞೆಯೂ ಸಹ ಅವರಿಗಿಲ್ಲವೆಂದು ದೂರಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಸರ್ಗಿಕ ಸಂಪನ್ಮೂಲಗಳ ಲೂಟಿಗೆ ನೆರವಾದ ನೀತಿಗಳನ್ನು ಅನುಸರಿಸುತ್ತಿದ್ದು,ಜಾಗತಿಕ ಕೃಷಿ ಬಂಡವಾಳ ಹೂಡಿಕೆ ಸಮಾವೇಶ ಮಾಡುವ ನಿಟ್ಟಿನಲ್ಲಿ ನಮ್ಮ ಕೃಷಿಕರನ್ನು ಹಾಗೂ ಕೃಷಿ ಪರಂಪರೆಯನ್ನು ಕಿತ್ತೊಗೆಯುವ ಕ್ರೌರ್ಯ ಕೆಲಸಮಾಡಿದಲ್ಲದೆ,ಕರ್ನಾಟಕವನ್ನೇ ಖಾಸಗಿ ಕಂಪನಿಗಳಿಗೆ ಮಾರಲು ಮುಂದಾಗಿರುವ ಸರ್ಕಾರಕ್ಕೆ ನಮ್ಮ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸುವ ಸಲುವಾಗಿ ವಿಧಾನ ಸೌಧ ಮುತ್ತಿಗೆ ಕಾರ್ಯಕ್ರಮ ಏರ್ಪಡಿಸಿರುವುದಾಗಿ ತಿಳಿಸಿದರು.

ಸರ್ಕಾರದ ಮುಂದಿರುವ ಕೆಲವು ರೈತರ ಬೇಡಿಕೆಗಳು: ಬರಗಾಲ ಪ್ರದೇಶದ ರೈತರ ಟ್ಯ್ರಾಕ್ಟರ್ ಹಾಗೂ ಇತರ ಸಾಲಮನ್ನ ಹಾಗೂ ಮರುಸಾಲ,ಪ್ರತಿ ಜಿಲ್ಲೆಗೆ 5ಕೋಟಿ ಹಣ ಬಿಡುಗಡೆ ಮತ್ತು ಜನಗಳಿಗೆ ಉದ್ಯೋಗ,ಜಾನುವಾರುಗಳಿಗೆ ಗೋಶಾಲೆ,ಮೇವು,ನೀರಿನ ಸೌಲಭ್ಯ ಒದಗಿಸುವುದು.ಶುಲ್ಕವಿಲ್ಲದೆ ರೈತರ ಪಂಪ್ ಸೆಟ್ ಸಕ್ರಮಗೋಲಳಿಸುವುದು,ಮುಂಗಾರಿಗೆ ಬೇಕಾದ ಗೊಬ್ಬರದ ದಾಸ್ತಾನು,ಬಿತ್ತನೆ ಬೀಜಗಳು ನೇರವಾಗಿ ರೈತರಿಗೆ ದೊರೆಯುವಂತೆ ಮಾಡುವುದು,ರೇಷ್ಮೆ ಬೆಳೆಗೆ 350ರೂ ದರ ನಿಗಧಿ,ಡಾ.ಪರಮಶೀವಯ್ಯ ಅವರ ವರದಿಯಂತೆ1,2,3ನೇ ಯೋಜನೆಗಳ ಜಾರಿ,ತರಕಾರಿ ಬೆಳೆಗಳಿಗೆ ಬೆಂಬಲ ಬೆಲೆ ಕಲ್ಪಿಸುವುದು,ಅಧಿಕಾರಿಗಳಿಂದ ಆಗುತ್ತಿರುವ ಮರಳು ಲೂಟಿಯ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು,ಪ್ರತಿ ಲೀ.ಹಾಲಿಗೆ ರೂ.30 ದರ ಕೊಡಬೇಕು ಅಲ್ಲದೆ ರೈತರ ಸಂಕಷ್ಟವನ್ನು ಗಮನಿಸಿ ಅವರಿಗೆ ಉತ್ತಮ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡಬೇಂದು ತಮ್ಮ ಬೇಡಿಕೆಗಳನ್ನೊಳಗೊಂಡಂತೆ ತಾ.25ರ ಬುಧವಾರ ವಿಧಾನಸೌಧ ಮುತ್ತಿಗೆಗೆ ಮುಂದಾಗಿದ್ದಾರೆ.ಅಲ್ಲದೆ ಬೆಂಗಳೂರಿನ ರೈಲ್ವೆ ನಿಲ್ದಾಣದಿಂದ ಮೆರವಣಿಗೆಯನ್ನು ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಗೌರವಾಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ,ತಾಲ್ಲೂಕು ಅಧ್ಯಕ್ಷ ಕೆ.ಪಿ.ಮಲ್ಲೇಶ್,ಉಪಾಧ್ಯಕ್ಷ ಗಂಗಣ್ಣ,ಕಾರ್ಯದರ್ಶಿ ಮರುಳಪ್ಪ,ಟ್ರಾಕ್ಟರ್ ಮಾಲೀಕ ಸಂಘದ ನಾಗರಾಜು,ಶಾಂತಣ್ಣ,ಹೋಬಳಿ ಸಂಘದ ಅಧ್ಯಕ್ಷ ಟಿ.ಎಸ್.ಮಲ್ಲಿಕಾರ್ಜುನಯ್ಯ ಸೇರಿದಂತೆ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...