ವಿಷಯಕ್ಕೆ ಹೋಗಿ

ಸಿಡಿಲು ಬಡಿದು ಸಾವನಪ್ಪಿದ ಕುಟುಂಬದವರಿಗೆ ಶಾಸಕರಿಂದ ಒಂದೂವರೆಲಕ್ಷ ಪರಿಹಾರ

ಹುಳಿಯಾರು ಸಮೀಪದ ಬೋರನಕಣಿವೆಯಲ್ಲಿ ಸಿಡಿಲು ಬಡಿದು ಸಾವನಪ್ಪಿದ ಜಯಚಂದ್ರ ನಗರ4 ಕುಟುಂಬದವರಿಗೆ ತಲಾಒಂದೂವರೆಲಕ್ಷ ಪರಿಹಾರ ಹಣದ ಚೆಕನ್ನು ಶಾಸಕ ಸಿ.ಬಿ.ಸುರೇಶ್ ಬಾಬು ವಿತರಿಸಿದರು.
ಸಮೀಪದ ಬೋರನಕಣಿವೆಯಲ್ಲಿ ಸಿಡಿಲು ಬಡಿದು ಸಾವನಪ್ಪಿದ ಜಯಚಂದ್ರ ನಗರ 4 ಕುಟುಂಬದವರಿಗೆ ತಲಾಒಂದೂವರೆಲಕ್ಷ ಪರಿಹಾರವನ್ನು ಶಾಸಕ ಸಿ.ಬಿ.ಸುರೇಶ್ ಬಾಬು ವಿತರಿಸಿದರು.

ಹಿನ್ನಲೆ: ಸಮೀಪದ ಬೋರನಕಣಿವೆಯ ಹಿನ್ನೀರು ಪ್ರದೇಶದ ಬೆಳವಾಡಿ ಕೋವೆಯಲ್ಲಿ ಏ.26ರ ಗುರುವಾರ ಮಧ್ಯಾಹ್ನ ಗುಡುಗು ಸಹಿತ ಬಾರಿ ಮಳೆಯ ಪರಿಣಾಮವಾಗಿ ಉಂಟಾದ ಸಿಡಿಲಿನ ಅಘಾತಕ್ಕೆ 4 ಜನ ಸಾವನ್ನಪ್ಪಿದ್ದರು.ಘಟನೆ ಸಂಭವಿಸಿದಾಗ ಶಾಸಕರು ಬೆಂಗಳೂರಿನಲ್ಲಿದ್ದ ಕಾರಣ ಘಟನಾ ಸ್ಥಳಕ್ಕೆ ಬರಲು ಸಾಧ್ಯವಾಗಲಿಲ್ಲ,ಅದರೂ ವಿಷಯ ತಿಳಿದ ತಕ್ಷಣ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮೃತಕುಟುಂಬದವರಿಗೆ ತಲಾ ಒಂದೂವರೆಲಕ್ಷ ಪರಿಹಾರ ಕೊಡುವಂತೆ ಮನವೊಲಿಸಿದ್ದರು. ಇಂದು ಶುಕ್ರವಾರ ಜಯಚಂದ್ರ ನಗರದ ಹಾಗೂ ಖಾಸಿಂಸಾಬ್ ಪಾಳ್ಯದ ಮೃತ ಕುಟುಂಬದವರ ಮನೆಗೆ ಭೇಟಿ ನೀಡಿ,ಮೃತರ ದರ್ಶನ ಪಡೆದು, ಮೃತ ಕುಟುಂಬದವರಿಗೆ ಸಾಂತ್ವಾನ ಹೇಳಿದರು.ಇದೊಂದು ಆಕಸ್ಮಿಕ ದುರ್ಘಟನೆಯಾಗಿದ್ದು,ಪಕೃತಿಯ ವಿಕೋಪಗಳನ್ನು ಯಾರೂ ತಡೆದು ನಿಲ್ಲಿಸಲಾಗುವುದಿಲ್ಲ ಎಂದರು. ಸಾವನ್ನಪ್ಪಿದ್ದ ಗಂಗಜ್ಜ ,ಗಂಗಯ್ಯ,ಮಂಜಣ್ಣ,ಖಾಸಿಂಸಾಬ್ ಪಾಳ್ಯದ ಜಬೀವುಲ್ಲಾ ಅವರ ಕುಟುಂಬಗಳಿಗೆ ಸರ್ಕಾರದವತಿಯಿಂದ ತಲಾ ಒಂದೂವರೆಲಕ್ಷ ಪರಿಹಾರ ಹಾಗೂ ವೈಯಕ್ತಿಕವಾಗಿ ತಲಾ 10ಸಾವಿರರೂ ಪರಿಹಾರವನ್ನು ನೀಡಿದಲ್ಲದೆ ಘಟನೆಯಲ್ಲಿ ಗಾಯಗೊಂಡಿದ್ದ ಮೂವರಿಗೆ ತಲಾ 3100 ರೂಗಳನ್ನು ಶಾಸಕ ಸಿ.ಬಿ.ಸುರೇಶ್ ಬಾಬು ವಿತರಿಸಿದರು.ಮೀನುಗಾರಿಕೆ ಇಲಾಖೆಯಿಂದ ತಲಾ ಒಂದು ಲಕ್ಷದ ಪರಿಹಾರವನ್ನು ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.ಮೀನುಗಾರರ ಕುಟುಂಬದವರಿಗೆ ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡುವುದಾಗಿ ಹಾಗೂ ಮೀನುಗಾರಿಕೆ ಇಲಾಖಾವತಿಯಿಂದ ಅವಶ್ಯ ನೆರವು ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.
 
ಮೀನುಗಾರಿಕೆ ಸಹಾಯಕ ಹಿರಿಯ ನಿರ್ದೇಶಕ ಕುಬೇಂದ್ರ ನಾಯಕ್, ತಹಶೀಲ್ದಾರ್ ಉಮೇಶ್ಚಂದ್ರ,ಇ.ಓ,ದಯಾನಂದ್,ಮೀನುಗಾರಿಕೆ ಸಹಾಯಕ ನಿರ್ದೇಶಕ ಸಚಿನ್, ತಾ.ಪಂ.ಉಪಾಧ್ಯಕ್ಷೆ ಬೀಬೀ ಫಾತೀಮಾ,ತಾ.ಪಂ.ಸದಸ್ಯೆ ಕವಿತಾಪ್ರಕಾಶ್,ಗ್ರಾ.ಪಂ. ಉಪಾಧ್ಯಕ್ಷೆ ವೆಂಕಟಮ್ಮ,ಸದಸ್ಯರಾದ ಆಶೋಕ್ ಬಾಬು,ಅಹಮದ್ ಖಾನ್,ಮುಖಂಡರಾದ ಪ್ರಸನ್ನ,ಕಲ್ಪತರು ಕೋ ಅಪರೇಟೀವ್ ಬ್ಯಾಂಕ್ ನ ಅಧ್ಯಕ್ಷ ನಟರಾಜು,ತಾ.ಪಂ.ಮಾಜಿಸದಸ್ಯ ರುದ್ರೇಶ್,ಜಿ.ಪಂ.ಮಾಜಿಸದಸ್ಯ ಈರಣ್ಣ ಸೆರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...