ವಿಷಯಕ್ಕೆ ಹೋಗಿ

ಸಸಿ ನೆಡುವ ಮೂಲಕ ಟಿಪ್ಪು ಪುಣ್ಯ ತಿಥಿ ಆಚರಿಸಿದ ಮುಸ್ಲಿಂ ಬಾಂಧವರು

ಹುಳಿಯಾರಿನ ಮುಸ್ಲಿಂ ಬಾಂಧವರು ಮದೀನಾ ಮಸೀದಿ ಆವರಣದಲ್ಲಿ ಸಸಿ ನೆಟ್ಟು ನೀರು ಹಾಕುವ ಮೂಲಕ ಟಿಪ್ಪು ಜಯಂತಿಯನ್ನು ಆಚರಿಸಿದರು.
ಇಲ್ಲಿನ ಮದೀನಾ ಮಸೀದಿ ಆವರಣ ಹಾಗೂ ಮುಸ್ಲಿಂರ ರುದ್ರಭೂಮಿ ಜಾಗದಲ್ಲಿ ಸಸಿ ನೆಡುವ ಮೂಲಕ ಮೈಸೂರ್ ಹುಲಿ ಟಿಪ್ಪು ಸುಲ್ತಾನರ ಪುಣ್ಯ ತಿಥಿಯನ್ನು ಮುಸ್ಲಿಂ ಬಾಂಧವರು ಹಾಗೂ ವಿವಿಧ ಸಂಘದವರು ಶುಕ್ರವಾರದಂದು ವಿಶಿಷ್ಟವಾಗಿ ಆಚರಿಸಿದರು.
ಈ ಸಂಧರ್ಭದಲ್ಲಿ ಮದೀನಾ ಹಾಗೂ ಜಮೀಯಾ ಮಸೀದಿಯ ಮುತುವಲ್ಲಿಯಾದ ಹಲ್ ಹಜ್ ಸೈಯ್ಯದ್ ಜಬೀವುಲ್ಲಾ ಅವರು ಮಾತನಾಡಿ, ಟಿಪ್ಪು ಒಬ್ಬ ಮಹಾನ್ ವ್ಯಕ್ತಿಯಾಗಿದ್ದು, ಈಡಿ ದೇಶವೇ ಆತನ್ನು ಗುರ್ತಿಸಿದೆ.ಈತನ ಪುಣ್ಯತಿಥಿಯನ್ನು ಸಸಿ ನೆಡುವ ಮೂಲಕ ಆಚರಿಸುತ್ತಿರುವುದು ತುಂಬಾ ಸಂತಸದ ಸಂಗತಿಯಾಗಿದ್ದು,ಪ್ರತಿವರ್ಷವೂ ಇದೇ ರೀತಿ ನಡೆಯಲಿ ಎಂದು ಹಾರೈಸಿದರು.
ಟಿಪ್ಪು ಬ್ರಿಟಿಷರ ವಿರುದ್ದ ಸಿಡಿದ್ದೇದ್ದ ಮೊದಲ ಮುಸ್ಲಿಂ ದೊರೆಯಾಗಿದ್ದು, ಭಾರತ ದೇಶಕ್ಕೆ ಸ್ವಾತಂತ್ರ ತಂದು ಕೊಡುವ ಛಲಹೊಂದಿದ್ದ ಈತನ ಪರಾಕಷ್ಟತೆಯನ್ನು ಎಲ್ಲರೂ ಸ್ಮರಿಸಬೇಕಿದೆ.ಅಲ್ಲದೇ ಮೈಸೂರು ಸಂಸ್ಥಾನದಲ್ಲಿ ಆಡಳಿತ ನಡೆಸಿ ಮೈಸೂರು ಹುಲಿ ಎಂದು ಮನೆ ಮಾತಾಗಿರುವ ಟಿಪ್ಪುವಿನ ನೆನಪು ಪ್ರತಿಯೊಬ್ಬ ಭಾರತೀಯರಲ್ಲಿಯೂ ಸದಾ ಇರಬೇಕು ಎಂದರು.ಈ ರೀತಿ ಪರಿಸರ ಕಾಳಜಿಯನ್ನು ಹೊಂದಿ ಸಸಿ ನೆಡುವ ಮೂಲಕ ಸಮಾರಂಭ ಆಚರಿಸುತ್ತಿರುವುದು ಶ್ಲಾಘನೀಯ,ಇದೇ ರೀತಿ ಪ್ರತಿಯೊಬ್ಬರು ಆಚರಿಸಬೇಕಿದೆ ಎಂದು ರೈತ ಸಂಘದ ಸತೀಶ್ ತಿಳಿಸಿದರು.
ಇಂದು ಸರ್ಕಾರ ದೇಶಕ್ಕಾಗಿ ಹೋರಾಡಿ ಮಹಾನ್ ವ್ಯಕ್ತಿಗಳಿಗಳನ್ನು ಗೌರವಿಸುತ್ತಿದೆ,ಆದರೆ ಟಿಪ್ಪುವನ್ನು ಮಾತ್ರ ಕಡೆಗಣಿಸಿದ್ದು,ಟಿಪ್ಪುವಿನ ಜಯಂತಿಯಾಗಲಿ,ಆತನ ಪುಣ್ಯತಿಥಿಯನ್ನಾಚರಿಸಲು ಯಾವುದೇ ರೀತಿಯ ಕ್ರಮ ಕೈಗೊಳ್ಳದೇ,ಒಬ್ಬ ದೇಶಭಕ್ತನನ್ನ ಕಡೆಗಣಿಸಿದೆ.ಇಂದು ಮೈಸೂರು ಸಂಸ್ಥಾನದ ಆರಸರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿರುವ ಸರ್ಕಾರ ಟಿಪ್ಪುವಿನ ಸಂಭಂದಿಕರಿಗೆ ಯಾವುದೇ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡೆ ತನ್ನ ವಿಫಲತೆಯನ್ನು ತೊರುತ್ತಿದೆ.ತಮ್ಮ ಕುಟುಂಬವನ್ನೇ ದೇಶದ ಏಳ್ಗೆಗಾಗಿ ಸಮರ್ಪಿಸಿದ ಟಿಪ್ಪುವಿನ ಜಯಂತಿ ಆಚರಣೆಗೆ ಸರ್ಕಾರ ಒಂದು ದಿನ ರಜೆಯನ್ನು ಘೋಷಿಸಿ,ದೇಶಭಕ್ತನಿಗೆ ಗೌರವ ನಮನ ಸಲ್ಲಿಸುವಂತೆ ಮಾಡಬೇಕೆಂದು ಸಮಾಜ ಸೇವಕ ಇಮ್ರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಸೀದಿಯ ಮೌಲಾನ ಅವರಿಂದ ಸಾಮೂಹಿಕ ಪ್ರಾಥನೆ ಸಲ್ಲಿಸಿ,ಸಸಿ ನೆಟ್ಟು,ನೀರು ಹಾಯಿಸಿದರು.
ರೈತಸಂಘದ ಮಲ್ಲಪ್ಪ, ಟಿಫ್ಫು ಸಂಘದ ಅಧ್ಯಕ್ಷ ಫಯಾಜ್,ಉಪಾಧ್ಯಕ್ಷ ಅಪ್ಸರ್,ಟಿಪ್ಪು ಅಭಿಮಾನಿ ಬಳಗದ ಸಯ್ಯದ್ ಸಾಬ್,ಶೌಕತ್, ಇರ್ಫಾನ್,ಅನ್ಸರ್,ಗೌಸಿ, ಸೇರಿದಂತೆ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...