ವಿಷಯಕ್ಕೆ ಹೋಗಿ

ಕೊಬ್ಬರಿ ಪ್ರೋತ್ಸಾಹ ಧನ ನೀಡುವಂತೆ ಸಿಎಂ ಅವರನ್ನು ಒತ್ತಾಯಿಸಿದ ರೈತಸಂಘ ಹಾಗೂ ತೆಂಗು ಬೆಳೆಗಾರರು

ಇಂದು ಕೊಬ್ಬರಿಗೆ ಉತ್ತಮ ಬೆಲೆ ದೊರೆಯದೆ ತೆಂಗು ಬೆಳೆಗಾರರು ಪರಿತಪಿಸುತ್ತಿದ್ದು, ತೆಂಗಿನ ಮರಗಳೆಲ್ಲಾ ರಸ ಸೋರಿ ಧರೆಗುಳುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅದರಲ್ಲಿಯೋ ಇರುವ ತೆಂಗಿನಿಂದ ದೊರೆಯುವಂತಹ ಕೊಬ್ಬರಿಗೆ ಹಾಲಿ ಮಾರುಕಟ್ಟೆಯಲ್ಲಿರುವ ದರ ತುಂಬಾ ಕಡಿಮೆಯಿದ್ದು,ರಾಜ್ಯ ಸರ್ಕಾರ ಕೊಡುವ ಪ್ರೋತ್ಸಾಹ ಧನವನ್ನು ಹೆಚ್ಚಿಸಿ ತೆಂಗು ಬೆಳೆಗಾರರನ್ನು ರಕ್ಷಿಸುವಂತೆ ರೈತಸಂಘದ ನಿಯೋಗ ಮಾನ್ಯ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಬಳಿ ತೆರಳಿ ಮನವಿ ಸಲ್ಲಿಸಿ,ಒತ್ತಾಯಿಸಿದ್ದಾರೆ..

ಇಂದು ಒಂದು ಕ್ವಿಂಟಲ್ ಕೊಬ್ಬರಿ ಉತ್ಪಾದಿಸಲು ರೈತರಿಗೆ ಸುಮಾರು 10 ಸಾವಿರ ರೂ. ಖರ್ಚು ಬರುತ್ತಿದ್ದು, ಮಾರುಕಟ್ಟೆ ಮಧ್ಯವರ್ತಿಗಳಾ ಹಾವಳಿಯಿಂದ ಕೇವಲ ಐದಾರು ಸಾವಿರದ ದರವಿದೆ. ಇದರಿಂದ ಕೊಬ್ಬರಿ ಬೆಳೆಗಾರರು ಸಂಕಷ್ಟದ ಸ್ಥಿತಿಯಲ್ಲಿದ್ದು ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರ ನೇತೃತ್ವದಲ್ಲಿ ತಿಪಟೂರು, ಚಿ.ನಾ.ಹಳ್ಳಿ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಅನುಗ್ರಹದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವರಿಸಿದರು.

ಕರ್ನಾಟಕ ರಾಜ್ಯದ 13 ಜಿಲ್ಲೆಗಳ 114 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಸರ್ಕಾರವೇ ಘೋಷಿಸಿದ್ದು,ಈ ಪ್ರದೇಶಗಳಲ್ಲಿ ಹೆಚ್ಚು ತೆಂಗು ಬೆಳೆಗಾರರಿದ್ದು, ಕೊಬ್ಬರಿ ಬೆಳೆಯನ್ನು ನಂಬಿ ಜೀವನನಡೆಸುತ್ತಿದ್ದಾರೆ. ಅಲ್ಲದೆ ಮಳೆಯನ್ನೇ ನಂಬಿ ಇಲ್ಲಿ ಕೊಬ್ಬರಿ ಬೆಳೆಯಲಾಗುತ್ತಿದೆಯೇ ವಿನಃ ಇಲ್ಲಿ ಯಾವುದೇ ಶಾಶ್ವತ ನೀರಿನ ವ್ಯವಸ್ಥೆ ಇರುವುದಿಲ್ಲ. ಅಲ್ಲದೆ ಸರಿಯಾಗಿ ಮಳೆಯಾಗದೇ ಬರದ ಬರೆ ಕೊಬ್ಬರಿ ಬೆಳೆಗಾರ ಗಾಯದ ಮೇಲೆ ಬರೆ ಎಳೆದಂತಾಗಿದೆ.ಇದನ್ನು ಮನಗಂಡ ಸರ್ಕಾರ ನೆರವಿಗೆ ಬಂರುವ ಅಗತ್ಯವಿದೆ ಎಂದರು.

1500 ರೂ. ಪ್ರೋತ್ಸಾಹ ಧನ : ಕಳೆದ ವಾರ ಕೇಂದ್ರ ಸರ್ಕಾರವು ಕೊಬ್ಬರಿಗೆ 5350 ರೂಪಾಯಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಆದರೆ ಈ ಬೆಲೆಯು ಅವೈಜ್ಞಾನಿಕ ಹಾಗೂ ತೀರಾ ಕಡಿಮೆ ಆಗಿದ್ದು. ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ಕೂಡಲೇ ರಾಜ್ಯ ಸರ್ಕಾರವೂ ಪ್ರೋತ್ಸಾಹ ಧನ ಘೋಷಿಸಬೇಕಿತ್ತು. ಆದರೆ ರಾಜ್ಯ ಸರ್ಕಾರ ಇದುವರೆವಿಗೂ ಪ್ರೋತ್ಸಾಹ ಧನ ಘೋಷಿಸದೇ ಸುಮ್ಮನಿದೆ.ಇದರ ಹಿಂದಿರುವ ವಿಷಯ ಬಹುಶಃ ಕಳೆದ ವರ್ಷ ಘೋಷಿಸಿದ 600 ರೂ. ಗಳಿಗೆ ಸೀಮಿತಗೊಳಿಸಿದಂತೆ. ಆದರೆ ಇಂದಿನ ಬೆಳೆಯುತ್ತಿರುವ ಜಗತ್ತಿನಲ್ಲಿ ಪ್ರತಿ ವಸ್ತುಗಳ ಬೆಲೆ ಗಗನ ಮುಟ್ಟುತ್ತಿರುವ ಹಿನ್ನಲೆಯಲ್ಲಿ 600ರೂ ಏತಕ್ಕೆ ಸಾಲುತ್ತದೇ,ಆದ್ದರಿಂದ ಸರ್ಕಾರ ಇಂದಿನ ಸ್ಥಿತಿಗತಿಯನ್ನು ಪರಾಮರ್ಷಿಸಿ ಕ್ವಿಂಟಾಲಿಗೆ 1500 ರೂ.ಗಳಿಗೆ ಏರಿಸಿದರೆ ತೆಂಗುಬೆಳೆಗಾರರು ಉಸಿರಾಡಬಹುದು,ಇಲ್ಲವಾದರೆ ತೀರಾ ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ ಹಾಗಾಗಿ 1500 ಬೆಂಬಲ ಬೆಲೆ ನೀಡಬೇಕೆಂದರು.

ದೇಶದಾದ್ಯಂತ ಕೊಬ್ಬರಿಗೆ ಉತ್ತಮ ಬೇಡಿಕೆಯಿದ್ದು, ಹೊರ ರಾಜ್ಯದಲ್ಲಿ ಉತ್ತಮ ಬೆಲೆಯಿದೆ. ಆದರೆ ರಾಜ್ಯದಲ್ಲಿ ಕೆಲವೇ ಕೆಲವು ವ್ಯಾಪಾರಸ್ಥರ ,ಮಧ್ಯವರ್ತಿಗಳ ಹಿಡಿತದಿಂದ ತಮಗಿಷ್ಟದ ದರ ನಿಗಧಿ ಮಾಡುತ್ತಾರೆ. ಕೆಲವೊಮ್ಮೆ ರೈತರಿಗೆ ಮಕುಮಲ್ ಕೋಪಿಯನ್ನು ಹಾಕುತ್ತಾರೆ.ಅಂದರೆ ಕೆಲವೊಂದು ಸಲ ಉತ್ತಮ ಬೆಲೆಯನ್ನು ಘೋಷಿಸಿರುತ್ತಾರೆ,ಇದನ್ನು ಕಂಡ ರೈತರು ಮರುದಿನ ಹೆಚ್ಚಿನ ಕೊಬ್ಬರಿಯನ್ನು ಮಾರುಕಟ್ಟೆಗೆ ತಂದರೆ ಇಂದು ರೇಟ್ ಡೌನಾಗಿದೆ ಎಂದು ಹೇಳುವುದಲ್ಲದೆ, ನಾಲೆ ಇನ್ನೂ ಕಡಿಮೆಯಾಗಬಹುದು ಎನ್ನುತ್ತಾರೆ. ಸರ್ಕಾರ ಸರಿಯಾದ ಸಮಯದಲ್ಲಿ ನ್ಯಾಫೆಡ್ ತೆರೆದರೆ ಇಂದು ರೈತರಿಗಾಗುತ್ತಿರುವ ಅನ್ಯಾಯವನ್ನು ತಪ್ಪಿಸುವುದಲ್ಲದೆ, ವ್ಯಾಪಾರಸ್ಥರಿಂದ ರೈತರಿಗಾಗುವ ಮೋಸವನ್ನು ತಡೆದಂತಾಗುತ್ತದೆ. ಅದಕ್ಕಾಗಿ ಸರ್ಕಾರ ಎಲ್ಲಾ ಕೊಬ್ಬರಿ ಮಾರುಕಟ್ಟೆಯಲ್ಲಿ ಶಾಶ್ವತ ನ್ಯಾಫೆಡ್ ಕೇಂದ್ರ ತೆರೆದು ತೆಂಗುಬೆಳೆಗಾರರಿಗೆ ನೆರವು ನೀಡಬೇಕಿದೆ.

ಸಿಎಂ ನೆರವಿನೆ ಭರವಸೆ: ಇಂದು ದೇಶದ ಆಸ್ತಿ ರೈತ ಆತನ ಸಮಸ್ಯೆಯನ್ನು ಮೊದಲು ಪರಿಹರಿಸಬೇಕು,ರೈತರ ಸುಖ ಸಂತೋಷದಿಂದಿದ್ದರೆ ಈಡಿ ದೇಶವೇ ಹಸನಾಗಿರುತ್ತದೆ ಎಂದರು.ಅಲ್ಲದೆ ತೆಂಗು ಬೆಳೆಗಾರರ ಸಮಸ್ಯೆ ಹಾಗೂ ಒತ್ತಾಯವನ್ನು ಗಮನವಿಟ್ಟು ಆಲಿಸಿದ ಮುಖ್ಯ ಮಂತ್ರಿಗಳು ರೈತರ ಎಲ್ಲಾ ಸಮಸ್ಯೆಗಳಿಗೆ ಒಂದೆರಡು ಮಾತುಗಳಲ್ಲಿ ಉತ್ತರಿಸಿ,ಸಮಾದಾನ ಮಾಡಿ ಕಳುಹಿಸಿಕೊಟ್ಟರು. ತಾನು ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಕೇಂದ್ರ ಸರ್ಕಾರದಿಂದಲೇ ಮತ್ತೊಷ್ಟು ಬೆಂಬಲ ಬೆಲೆ ಹೆಚ್ಚಿಸಲು ಕೃಷಿ ಸಚಿವರ ಜೊತೆ ಚರ್ಚಿಸುವುದಾಗಿ ತಿಳಿಸಿದರು.ಅಲ್ಲದೆ ಶಾಶ್ವತ ನ್ಯಾಫೆಡ್ ತೆರೆಯುವ ಜೊತೆಗೆ ಪ್ರೋತ್ಸಾಹಧನ ಹೆಚ್ಚಿಸುವ ಸಂಬಂಧ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಕೊಬ್ಬರಿ ಬೆಳೆಗಾರರಿಗೆ ನೆರವಾಗುವ ರೀತಿ ಉತ್ತಮ ತಿರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು.

ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ನಿಯೋಗದಲ್ಲಿ ರಾಜ್ಯ ಹಸಿರು ಸೇನೆ ಸಂಚಾಲಕ ಕೆಂಕೆರೆ ಸತೀಶ್, ಜಿಲ್ಲಾಧ್ಯಕ್ಷ ಬಿ.ಎಸ್.ದೇವರಾಜು, ಜಿಲ್ಲಾ ಸಂಚಾಲಕ ಶಿವಶಂಕರಪ್ಪ, ಚಿ.ನಾ.ಹಳ್ಳಿ ತಾಲೂಕು ರೈತ ಸಂಘದ ಗೌ ಅಧ್ಯಕ್ಷ ತಿಮ್ಮನಹಳ್ಳಿಲೋಕಣ್ಣ, ಅಧ್ಯಕ್ಷ ಕೆ.ಪಿ.ಮಲ್ಲೇಶಯ್ಯ, ಹೋಬಳಿ ಅಧ್ಯಕ್ಷ ತಮ್ಮಡಿಹಳ್ಳಿಮಲ್ಲಿಕಾರ್ಜುನಯ್ಯ, ಸಾವಯವ ಕೃಷಿ ಪರಿವಾರದ ನಂಜುಂಡಯ್ಯ, ನಾಗೇಂದ್ರಪ್ಪ, ಕಾಡೇನಳ್ಳಿ ಗಂಗಣ್ಣ, ಜಗಧೀಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.