ವಿಷಯಕ್ಕೆ ಹೋಗಿ

ಜಿಡ್ಡು ಗಟ್ಟಿದ ಸಮಾಜಕ್ಕೆ ಚೇತನ ನೀಡಿದವರು ಬಸವೇಶ್ವರರು :ಸ್ವಾಮೀಜಿ

ಹುಳಿಯಾರು ಹೋಬಳಿ ವಿರಶೈವ ಸಮಾಜದವತಿಯಿಂದ ಸೋಮವಾರ ಸಂಜೆ ವಿಶ್ವಗುರು ಬಸವೇಶ್ವರರ ಜಯಂತಿ ಮಹೋತ್ಸವದ ಅಂಗವಾಗಿ ಅಷ್ಟಮಂಡಲ ಮಂಟಪದಲ್ಲಿ ಶ್ರೀಬಸವೇಶ್ವರ ಭಾವಚಿತ್ರವನ್ನಿಟ್ಟು ನಗರದ ರಾಜಬೀದಿಗಳಲ್ಲಿ ಉತ್ಸವ ನಡೆಸಲಾಯಿತು.

ಹುಳಿಯಾರು ಹೋಬಳಿ ವಿರಶೈವ ಸಮಾಜದವತಿಯಿಂದ ಸೋಮವಾರ ನಡೆದ ವಿಶ್ವಗುರು ಬಸವೇಶ್ವರರ ಜಯಂತಿ ಮಹೋತ್ಸವದ ಉದ್ಘಾಟನೆಯನ್ನು ನಿಟ್ಟೂರು ಬಿ.ಕೋಡಿಹಳ್ಳಿಯ ಬಸವಭೃಂಗೇಶ್ವರ ಸ್ವಾಮೀಜಿಗಳು ನೆರವೇರಿಸಿದರು.ಜಿ.ಎಂ.ನೀಲಕಂಠಯ್ಯ,ಪ್ರಾಂಶುಪಾಲ ಜಿ.ಎನ್.ಬಸವರಾಜಪ್ಪ,ಗಂಗಣ್ಣ ,ಗಂಗಾಧರಯ್ಯ ಇದ್ದಾರೆ.

                                   
ಮಹಾನ್ ಮಾನವತಾವಾದಿ ಶ್ರೀ ಬಸವೇಶ್ವರರು 12 ನೇಶತಮಾನಕ್ಕಿಂತ ಮುಂಚೆ ಜಿಡ್ದುಗಟ್ಟಿದ್ದ ಸಮಾಜದಲ್ಲಿ ಹೊಸ ವಿಚಾರಗಳನ್ನು,ಬಸವ ತತ್ವಗಳನ್ನು ತಿಳಿಸುವ ಮೂಲಕ ಉಜ್ವಲ ಚೇತನವನ್ನು ನೀಡುವ ಮೂಲಕ ಬಸವಣ್ಣನವರು ಜಗಜ್ಯೋತಿಯಾಗಿ ಬೆಳಗಿದ್ದಾರೆ ಎಂದು ನಿಟ್ಟೂರು ಬಿ.ಕೋಡಿಹಳ್ಳಿಯ ಬಸವಭೃಂಗೇಶ್ವರ ಸ್ವಾಮೀಜಿಗಳು ಆಶೀರ್ವಚನದಲ್ಲಿ ತಿಳಿಸಿದರು.

ಹುಳಿಯಾರು ಹೋಬಳಿ ವಿರಶೈವ ಸಮಾಜದವತಿಯಿಂದ ಸೋಮವಾರ ಸಂಜೆ ಪಟ್ಟಣದ ಬಸವಭವನದಲ್ಲಿ ನಡೆದ ವಿಶ್ವಗುರು ಬಸವೇಶ್ವರರ ಜಯಂತಿ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯ ದಿವ್ಯಸಾನಿಧ್ಯವಹಿಸಿ ಅವರು ಮಾತನಾಡಿದರು.

ಬಸವಣ್ಣ ಕೇವಲ ವಿರಶೈವ ಜಾತಿಗೆ ಮಾತ್ರ ಸೀಮಿತವಾಗಿರಲಿಲ್ಲ, ಸರ್ವಧರ್ಮ ಸಹಿಷ್ಟುವಾಗಿ,ಜಾತಿವಿಡಂಬನೆಯಿಂದ ಮೇಲು,ಕೀಳು ಎಂದು ನಡೆದುಕೊಂಡು ಬರುತ್ತಿದ್ದ ಗೊಡ್ಡು ಸಂಪ್ರದಾಯಗಳನ್ನು ತೊಡೆದು ಹಾಕಿ,ಸಮಾಜದಲ್ಲಿ ಯಾವುದೇ ಜಾತಿಯಿಲ್ಲ ಇರುವುದು ಒಳ್ಳೆಯವರು ಮತ್ತು ಕೆಟ್ಟವರು ಮಾತ್ರ ಎಂದು ತಿಳಿಸಿಕೊಟ್ಟವರು.ಅಂದು ಸಮಾಜವನ್ನು ಅದೋಗತಿಗೆ ತಂದಿದ್ದ ವೇದ,ಆಗಮಗಳಲ್ಲಿನ ವಿಚಾರ್ಗಳನ್ನು ವಿಮರ್ಷಿಸಿ,ಅವುಗಳ ಬಿಗಿ ಬಂಧನದಿಂದ ಮುಗ್ದಜನರನ್ನು ಹೊರಬರುವಂತೆ ಮಾಡಿ,ದೇವರ ಬಗ್ಗೆ ಪ್ರಮಾಣಿಕವಾಗಿ ಜನತೆಗೆ ತಿಳಿಯುವಂತೆ ಮಾಡೀದರು.ಅಲ್ಲದೆ ಬಸವಣ್ಣನವರು ಸಂಕುಚಿತ ಮನೋಭಾವನೆ ಹೊಂದಿರದೆ,ಸಮಾಜದ ಜನರಿಗೆ ಆಗುತ್ತಿದ್ದ ಶೋಷಣೆಯ ವಿರುದ್ದ ತಾತ್ವಿಕ ಚಿಂತನೆಗಳನ್ನು ಮಾಡಿದವರು.ಇಂತಹ ಮಹಾನ್ ವ್ಯಕ್ತಿಯನ್ನು ಸ್ಮರಿಸುವುದು ಅತ್ಯಗತ್ಯ ಎಂದರು.

ಚಿತ್ರದುರ್ಗದ ಬಸವತತ್ವ ವಿದ್ಯಾಲಯದ ಪ್ರಾಂಶುಪಾಲ ಜಿ.ಎನ್.ಬಸವರಾಜಪ್ಪನವರು ತಮ್ಮ ಅನುಭಾವ ನಿವೇದನೆಯಲ್ಲಿ, ಇಂದಿನ ರಾಜಕೀಯ ವ್ಯಕ್ತಿಗಳಿಗೆ ಬಸವತತ್ವಗಳನ್ನು ತಿಳಿಸಬೇಕಿದೆ ಎಂದರು.ಪ್ರಜೆಗಳನ್ನು ರಕ್ಷಿಸಬೇಕಾದವರೇ ಪ್ರಜೆಗಳನ್ನು ಸುಳಿದು ತಿನ್ನುತ್ತಿದ್ದಾರೆ.ಅಂದು ಬಸವಣ್ಣ ಹೇಳಿದ ವಚನದಂತೆ ಮನೆ ಹತ್ತಿ ಹುರಿದರೆ ಇರಬಹುದು,ಭೂಮಿಹತ್ತಿ ಹುರಿದರೆ ಇರಲಾರದಂಬಂತೆ ಇಂದು ಸಮಾಜದಲ್ಲಿ ಉತ್ತಮ ಆಡಳಿತ ನಡೆಸಬೇಕಾದವರು ನುಂಗುಬಾಕರಾಗಿ ಜೈಲು ಸೇರುತ್ತಿದ್ದು,ರಾಜ್ಯವೇ ತಲೆ ತಗ್ಗಿಸುವಂತೆ ಮಾಡಿದ್ದಾರೆ ಎಂದರು. ಬಸವಣ್ಣ ಹುಟ್ಟಿನಿಂದಲೇ ಪವಾಡಗಳನ್ನು ಮಾಡಿದಂತವ, ಬೆಳೆಯುತ್ತಾ ಸಮಾಜದಲ್ಲಿ ನಡೆಯುತ್ತಿದ್ದ ವಿಚಾರಗಳ ಬಗ್ಗೆ ತಿಳಿದು,ಅಸಮಾನತೆಯ ವಿರುದ್ದ ಬಂಡೆದ್ದು,ವೈಧಿಕ ಧರ್ಮವನ್ನು ತೊರೆದು,ಸಮಾಜದಲ್ಲಿನ ಅಂಕುಡೊಂಕುಗಳನ್ನು ಗುರ್ತಿಸಿ,ಅವುಗಳ ನಿವಾರಣೆಯ ಬಗ್ಗೆ ಚಿಂತಿಸಿದವರು.ಅನುಭವ ಮಂಟಪದ ಸ್ಥಾಪನೆ ಮಾಡಿ ಜನತೆಗೆ ಬೇಕಾದ ವಿಷಯಗಳನ್ನು ಚಿಂತನ ಮಂಥನದ ಮೂಲಕ ಏಕದೇವತಾರಧನೆ,ಸ್ತ್ರೀಸಮಾನತೆಯನ್ನು ಸಾಧಿಸಲು ಮುಂದಾದವರು.ಬಸವಣ್ಣನವರು ಪ್ರತಿಪಾಧಿಸಿದ ತತ್ವಗಳು ನಮ್ಮದೇಶದಲ್ಲೇ ಅಲ್ಲದೇ ವಿದೇಶಗಳಲ್ಲು ಪ್ರಚಾರಗೊಂಡಿದ್ದು,ಅಂದಿನ ಬ್ರೀಟಿಷರೇ ಬಸವಣ್ಣನನ್ನ ಜಗಜ್ಯೋತಿ ಬಸವೇಶ್ವರ ಎಂದು ಕರೆದಿದ್ದಾರೆ ಎಂದರು.ಕಾಯಕದ ಮಹತ್ವ,ಶರಣರ ಸೇವೆಯಿಂದ ಸುಖ ಜೀವನವನ್ನು ನಡೆಸಬಹುದೆಂದು ತಿಳಿಸಿದ ಬಸವಣ್ಣ ಈಡಿ ಸಮಾಜಕ್ಕೆ ಬೇಕಾದ ವ್ಯಕ್ತಿಯಾಗಿದ್ದಾರೆ ಎಂದು ತಿಳಿಸಿದರು.

ಹುಳಿಯಾರಿನ ಅಕ್ಕಮಹಾದೇವಿ ಸಂಘ ಹಾಗೂ ಕೆಂಕೆರೆಯ ಬಸವಕೇಂದ್ರ ಶರಣೆಯರಿಂದ ವಚನಗಾಯನ ನಡೆಸಿ. ಅಷ್ಟಮಂಡಲ ಮಂಟಪದಲ್ಲಿ ಶ್ರೀಬಸವೇಶ್ವರ ಭಾವಚಿತ್ರವನ್ನಿಟ್ಟು ನಗರದ ರಾಜಬೀದಿಗಳಲ್ಲಿ ಉತ್ಸವ ನಡೆಸಲಾಯಿತು.

ಬಸವೇಶ್ವ ಪತ್ತಿನ ಸಹಕಾರಸಂಘದ ಅಧ್ಯಕ್ಷರಾದ ಜಿ.ಎಂ.ನೀಲಕಂಠಯ್ಯ ಸಮಾರಂಭದ ಅಧ್ಯಕ್ಷತೆವಹಿಸಿದ್ದು,ಬಸವಕೇಂದ್ರದ ಗಂಗಣ್ಣ ಪ್ರಾಸ್ತಾವಿಕ ನುಡಿ ನುಡಿದರು.ರಮೇಶ್ ನಿರೂಪಿಸಿ,ಶಿಕ್ಷಕ ಗಂಗಾಧರಯ್ಯ ಸ್ವಾಗತಿಸಿ,ಉಮೇಶ್ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.