ವಿಷಯಕ್ಕೆ ಹೋಗಿ

ಭೂಮಿಯ ಮೇಲೆ ಒಂದು ಕಣವನ್ನು ಸೃಷ್ಠಿಸದ ಮಾನವನಿಗೆ ಈ ಪರಿಸರವನ್ನು ನಾಶ ಮಾಡುವ ಹಕ್ಕಿಲ್ಲ: ನ್ಯಾಯಾಧೀಶ ಕೆ.ಎಂ.ರಾಜಶೇಖರ್

ಭೂಮಿಯ ಮೇಲೆ ಬುದ್ದಿವಂತ ಪ್ರಾಣಿ ಮಾನವ,ಆದರೆ ಇಂದು ತನ್ನ ತನವನ್ನು ಮರೆತಿದ್ದಾನೆ.ಅಲ್ಲದೆ ಭೂಮಿಯ ಮೇಲೆ ಒಂದು ಕಣವನ್ನು ಸೃಷ್ಥಿಸದ ಮಾನವ ಭೂಮಿಯ ಸೃಷ್ಠಿಯ ವಸ್ತುಗಳನ್ನು ನಾಶಮಾಡುತ್ತಿದ್ದಾನೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್ ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ,ತಾಲ್ಲೂಕು ಕಾನೂನು ಸೇವೆ ಸಮಿತಿ , ವಕೀಲ ಸಂಘ ಹಾಗೂ ಆರಣ್ಯ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನ ಸುರ್ವಣಮುಖಿ ಕ್ಯಾಂಪಸ್ ನಲ್ಲಿ ವಿಶ್ವ ಪರಿಸರ ದಿನಾಚಾರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಸಾಕ್ಷರತಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಪ್ರಸ್ತುತದಲ್ಲಿ ಮಾನವ ಅನೇಕ ಸಂಶೋಧನೆಗಳನ್ನು ಮಾಡುತ್ತಾ ಪ್ರಕೃತಿಯನ್ನು ತನಗೆ ಇಷ್ಟ ಬಂದ ರೀತಿಯಲ್ಲಿ ಬಳಸಿಕೊಳ್ಳುವ ಮೂಲಕ ಪ್ರಕೃತಿಯನ್ನು ನಾಶ ಮಾಡುತ್ತಿದ್ದಾನೆ.ಅಲ್ಲದೆ ಮುಂದಿನ ಪೀಳಿಗೆಯವರಿಗೆ ಬೇಕಾದಂತಹ ಸಂಪನ್ಮೂಲಗಳು ದೊರೆಯದಂತೆ ಮಾಡುತ್ತಿರುವುದು ಮಾನವನನ್ನು ವಿನಾಶದ ಕಡೆ ಕೊಂಡೈಯುತ್ತಿದೆ. ಪರಿಸರಕ್ಕೆ ಸಂಭಂಧಿಸಿದ ವಿವಿಧ ಕಾರ್ಯಕ್ರಮಗಳು ಪ್ರತಿಯೊಂದು ಶಾಲೆಗಳಲ್ಲಿ ನಡೆಯುವ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿ ಪರಿಸರ ಪ್ರಜ್ಞೆ ಉಂಟಾಗುವಂತೆ ಮಾಡಬೇಕಿದ್ದು,ಪ್ರಕೃತಿಯ ಮಹತ್ವವನ್ನು ಸಾರಿ ಹೇಳುವ ಆಂದೋಲನಗಳನ್ನು ಹಮ್ಮಿಕೊಂಡು ಪರಿಸರ ಸಂರಕ್ಷಣೆಯನ್ನು ಕೈಗೊಳ್ಳಬೇಕು ಎಂದರು.
ವಕೀಲರಾದ ಎಸ್.ಹೆಚ್.ಚಂದ್ರಶೇಖರಯ್ಯ ಪರಿಸರ ಸಂರಕ್ಷಣೆ ಕುರಿತು ವಿಷಯ ಮಂಡನೆ ಮಾಡಿದರು ಹಾಗೂ ಮಕ್ಕಳು,ಪೋಷಕರಿಂದ ಬಂದಂತಹ ಸಮಸ್ಯಾ ಪ್ರಶ್ನೆಗಳಿಗೆ ಉತ್ತರಿಸಿದರು.ಸಮಾರಂಭಕ್ಕೆ ಆಗಮಿಸಿದ್ದ ಮಕ್ಕಳ ಪೋಷಕರಿಗೆ ತಲಾ ಒಂದೊಂದು ಸಸಿಯನ್ನು ಉಚಿತವಾಗಿ ವಿತರಿಸಿದರು ಹಾಗೂ ಅದನು ಹಾರೈಕೆ ಮಾಡುವ ರೀತಿಯನ್ನು ತಿಳಿಸಿಕೊಟ್ಟರು ಹಾಗೂ ಶಾಲಾ ಮಕ್ಕಳು ಪರಿಸರ ಸಂರಕ್ಷಣೆಗೆ ಸಂಭಂಧಿಸಿದ ಕೆಲ ವಿಷಯಗಳ ಬಗ್ಗೆ ಅಣುಕು ಪ್ರದರ್ಶನವನ್ನು ನಡೆಸಿಕೊಟ್ಟರು.
ಸಮಾರಂಭದಲ್ಲಿ ಸಿವಿಲ್ ನ್ಯಾಯಾಧೀಶರಾದ ನಿರ್ಮಲ,ವಕೀಲ ಸಂಘದ ಅಧ್ಯಕ್ಷ ನಿರಂಜನ್,ಕಾರ್ಯದರ್ಶಿ ಶೇಖರಯ್ಯ,ಶಾಲೆಯ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್,ಪ್ರಾಚಾರ್ಯ ರವಿ,ಆರಣ್ಯ ಇಲಾಖೆಯವರು ಸೇರಿದಂತೆ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯರು,ವಕೀಲ ಸಂಘದವರು,ಶಿಕ್ಷಕರು ಉಪಸ್ಥಿತರಿದ್ದರು.
ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚಾರಣೆ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ಸಮಾರಂಭವನ್ನು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಸಸಿ ನೆಟ್ಟು,ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ವಿಶ್ವ ಪರಿಸರ ದಿನಾಚಾರಣೆ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ಸಮಾರಂಭದಲ್ಲಿ ಪೋಷಕರಿಗೆ ಗಿಡಗಳನ್ನು ವಿತರಿಸಲಾಯಿತು. ನ್ಯಾಯಾಧೀಶರಾದ ಕೆ.ಎಂ.ರಾಜಶೇಖರ್,ಕೆ.ನಿರ್ಮಲ,ವಕೀಲ ಸಂಘದ ಅಧ್ಯಕ್ಷ ನಿರಂಜನ್,ಶೇಖರಯ್ಯ,ಶಾಲೆಯ ಕಾರ್ಯದರ್ಶಿ ಕವಿತಾ ಕಿರಣ್ ಕುಮಾರ್ ಹಾಗೂ ಇತರರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...